ಪದವಿ, ಸ್ನಾತಕೋತ್ತರ ಕೋರ್ಸ್: ಇಡೀ ರಾಜ್ಯಕ್ಕೆ ಒಂದೇ ಟೈಮ್ಟೇಬಲ್
ಬೆಂಗಳೂರು, ಜೂ.9: ರಾಜ್ಯದಲ್ಲಿ 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿ ಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ.
"ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಏಕರೂಪದ ವೇಳಾಪಟ್ಟಿಯನ್ನು ಈ ವರ್ಷದಿಂದಲೇ ಜಾರಿಗೆ ತರಬೆಕು. ಇದನ್ನು ಕಡ್ಡಾಯವಾಗಿ ಪಾಲಿಸಬೇಕು," ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಜುಲೈ 11ರಿಂದ ಪ್ರವೇಶಾತಿ:
ಶನಿವಾರ ಈ ಬಗ್ಗೆ ಮಾತನಾಡಿರುವ ಅವರು, ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ.
ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.
ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications