ಮೇ 04, 05ರಂದು ಕರ್ನಾಟಕ ಸಿಇಟಿ ಪರೀಕ್ಷೆ 2016
ಬೆಂಗಳೂರು, ಮೇ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 4ರಿಂದ 6ರವರೆಗೆ ರಾಜ್ಯದೆಲ್ಲೆಡೆ ನಡೆಯಲಿದೆ. ಸುಮಾರು 1,78,346 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ರಾಜ್ಯಾದ್ಯಂತ 391 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲಿ 82 ಕೇಂದ್ರಗಳಲ್ಲಿ 42,963 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ.
ಗಡಿನಾಡು ಮತ್ತು ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ಮೇ 6ರಂದು ನಡೆಯಲಿದ್ದು, 2,560 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಕೆಇಎ ಸಿದ್ಧತೆ: 391 ವೀಕ್ಷಕರು, 782 ವಿಶೇಷ ಜಾಗೃತ ದಳ ಸದಸ್ಯರು, 391 ಪ್ರಶ್ನೆಪತ್ರಿಕಾ ಪಾಲಕರು, ಸುಮಾರು 11,170 ಕೊಠಡಿ ಮೇಲ್ವಿಚಾರಕರು ಹಾಗೂ 19,000 ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಿದೆ.
ವಿದ್ಯಾರ್ಥಿಗಳ ಗಮನಕ್ಕೆ: ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಪ್ರವೇಶ ಪತ್ರದ ಜೊತೆಯಲ್ಲಿ ಒಂದು ಮಾನ್ಯತೆಯುಳ್ಳ ಗುರುತಿನ ಚೀಟಿ(ಕಾಲೇಜಿನ ಗುರುತಿನ ಚೀಟಿ, 2ನೇಪಿಯು ಪ್ರವೇಶಪತ್ರ, ಬಸ್ಪಾಸ್/ ಡ್ರೈವಿಂಗ್ ಲೈಸನ್ಸ್/ ಪಾಸ್ ಪೋರ್ಟ್/ ಆಧಾರ್ ಕಾರ್ಡ್/ ಪ್ಯಾನ್ ಕಾರ್ಡ್.. ಇತ್ಯಾದಿ) ಕಡ್ಡಾಯವಾಗಿ ಹೊಂದಿರಬೇಕು.
* ಅಭ್ಯರ್ಥಿಗಳು ಕೈಗಡಿಯಾರ ಕಟ್ಟುವಂತಿಲ್ಲ. ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿದೆ.
* ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ ಕ್ಯುಲೇಟರ್, ವೈಟ್ ಫ್ಲೂಯಿಡ್, ವೈರ್ಲೆಸ್ ಸೆಟ್ಸ್, ಟ್ಯಾಬ್ಲೆಟ್ ಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ.
* ಪರೀಕ್ಷೆ ಆರಂಭಕ್ಕೆ ಅರ್ಧಗಂಟೆ ಮೊದಲೇ ಅಭ್ಯರ್ಥಿಗಳು ಹಾಜರಿರಬೇಕು.
* ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳದ ವಿದ್ಯಾರ್ಥಿಗಳು ಕೆಇಎ ವೆಬ್ಸೈಟ್ http://kea.kar.nic.in/ ಗೆ ಭೇಟಿ ನೀಡಿ ಡೌನ್ ಲೋಡ್ ಮಾಡಿಕೊಳ್ಳಿ.ಆಲ್ ದಿ ಬೆಸ್ಟ್
-
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications