Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಗ್ಯಾರಂಟಿ ಅಧಿಕೃತ ಘೋಷಣೆ: ಇಲ್ಲಿದೆ ಮಾಹಿತಿ!

ಬೆಂಗಳೂರು: 2023ರ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ 5 ಗ್ಯಾರಂಟಿಗಳ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದಿದೆ. ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಐದೂ ಯೋಜನೆಗೆ ತಾತ್ವಿಕ ಒಪ್ಪಿಗೆ ಸಿಕ್ಕಿದ್ದು, ಕರ್ನಾಟಕ ಸಿಎಂ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಬೆಳಗ್ಗೆ ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಹೊಸ ಆಸೆ ಚಿಗುರಿತ್ತು. ಅದರಲ್ಲೂ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಬಗ್ಗೆ ಜನರಿಗೆ ಕುತೂಹಲ ಡಬಲ್ ಆಗಿತ್ತು. ಇದೀಗ ತಾನು ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದು, ತಮ್ಮ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಜನಕ್ಕೆ ತಲುಪಲು ಇನ್ನೂ ಎಷ್ಟು ದಿನ ಬೇಕು? ಬನ್ನಿ ತಿಳಿಯೋಣ.

Karnataka Congress Approved All Their Guarantee in the first Cabinet session

ಅನ್ನಭಾಗ್ಯ ಯೋಜನೆಗೆ ಹೊಸ ರೂಪ?

2ನೇ ಬಾರಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಸಿಎಂ ಸಿದ್ದರಾಮಯ್ಯ, ಜನಪ್ರಿಯ ಅನ್ನಭಾಗ್ಯ ಯೋಜನೆಗೆ ಹೊಸ ಹುರುಪು ತುಂಬುವ ನಿರೀಕ್ಷೆ ಇದೆ. ಹೀಗಾಗಿ ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದು, ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡಕುಟುಂಬದ ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ @siddaramaiah ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ ಎಂದು ಕರ್ನಾಟಕ ಸಿಎಂ ಅಧಿಕೃತ ಟ್ವಿಟ್ಟರ್ ಪೇಜ್ ಟ್ವೀಟ್ ಮಾಡಿದೆ.

ಶೀಘ್ರದಲ್ಲೇ ಬಡವರಿಗೆ ಉಚಿತ ವಿದ್ಯುತ್?

ಮತ್ತೊಂದ್ಕಡೆ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ಕಲ್ಪಿಸುವ ಗೃಹಜ್ಯೋತಿಯ ಬಗ್ಗೆಯೂ ಮೊದಲ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದೆ. "ಗೃಹಜ್ಯೋತಿ" ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ಕರ್ನಾಟಕ ಸಿಎಂ ಟ್ವಿಟ್ಟರ್ ಅಕೌಂಟ್ ಟ್ವೀಟ್ ಮಾಡಿದೆ.

ಮಹಿಳೆಯರಿಗೆ ಶೀಘ್ರ ಉಚಿತ ಬಸ್ ಪ್ರಯಾಣ?

ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಪೇಜ್‌ನಲ್ಲಿ ಮಾಹಿತಿ ನೀಡಲಾಗಿದೆ.

2,000 ಸಹಾಯಧನ ಭರವಸೆ

"ಗೃಹಲಕ್ಷ್ಮಿ" ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು ರೂ. 2,000 ಸಹಾಯಧನ ಒದಗಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ರಾಜ್ಯದ ಜನತೆಗೆ ಸಿದ್ದರಾಮಯ್ಯ ಸರ್ಕಾರ ಮಾಹಿತಿ ನೀಡಿದೆ.

ನಿರುದ್ಯೋಗಿ ಯುವಕ, ಯುವತಿಯರಿಗೂ ಸಿಹಿಸುದ್ದಿ

ಅಂತಿಮವಾಗಿ ರಾಜ್ಯದಲ್ಲಿ ಪದವಿ ಮತ್ತು ಡಿಪ್ಲೋಮಾ ಪಡೆದು ಉದ್ಯೋಗ ಸಿಗದಿರುವ ನಿರುದ್ಯೋಗಿ ಯುವಕ ಯುವತಿಯರಿಗೂ ಸಿಹಿಸುದ್ದಿ ಸಿಕ್ಕಿದೆ. "ಯುವನಿಧಿ" ಯೋಜನೆಯಡಿ ಪ್ರಸಕ್ತ ಸಾಲಿನಿಂದ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ ಎಂದು ಸರ್ಕಾರ ತಿಳಿಸಿದೆ.

ಒಟ್ನಲ್ಲಿ ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸರ್ಕಾರ ನಾಡಿನ ಜನತೆಗೆ ನೀಡಿದ್ದ ಭರವಸೆಗಳನ್ನ ಈಡೇರಿಸಲು ಮುಂದಾಗಿದೆ. ಪ್ರಮುಖವಾಗಿ 5 ಗ್ಯಾರಂಟಿಗಳ ಮೂಲಕ ಬಡವರಿಗೆ ನೆರವಾಗುವ ಯೋಜನೆಯ ಬಗ್ಗೆ ಮುತುವರ್ಜಿ ವಹಿಸಲಾಗಿದ್ದು, ಅತಿ ಶೀರ್ಘದಲ್ಲೇ ಕನ್ನಡಿಗರಿಗೆ ಯೋಜನೆ ತಲುಪಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+