ಲೋಕಸಭೆ ಚುನಾವಣೆ ತಯಾರಿ: ಕಾಂಗ್ರೆಸ್ನಿಂದ ಸರಣಿ ಸಭೆ
ಬೆಂಗಳೂರು, ಫೆಬ್ರವರಿ 18: ಲೋಕಸಭೆ ಚುನಾವಣೆ ತಯಾರಿ ಆರಂಭಸಿರುವ ರಾಜ್ಯ ಕಾಂಗ್ರೆಸ್, ಇದೇ ವಿಷಯವಾಗಿ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಇಂದು ಸರಣಿ ಸಭೆಗಳನ್ನು ನಡೆಸಿದೆ.
ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರಚಾರ ಸಮಿತಿ ಸಭೆ, ಮಧ್ಯಾಹ್ವ ಕೆಪಿಸಿಸಿ ಸಮನ್ವಯ ಸಮಿತಿ ಸಭೆ, ಹಾಗೂ ಸಂಜೆ ಚುನಾವಣಾ ಸಮಿತಿ ಸಭೆಯು ಲೋಕಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದೆ.

ಸಭೆಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಜೆಡಿಎಸ್ ಜೊತೆಗಿನ ಚುನಾವಣಾ ಮೈತ್ರಿ ಬಗ್ಗೆಯೂ ಅಭಿಪ್ರಾಯ ಕೇಳಿ ಪಡೆಯಲಾಗಿದೆ. ಮತ್ತು ಕ್ಷೇತ್ರವಾರು ಮೈತ್ರಿಯಿಂದಾಗುವ ಪರಿಣಾಮಗಳ ಬಗ್ಗೆಯೂ ಶಾಸಕರು ಹಾಗೂ ಸ್ಥಳೀಯ ಮುಖಂಡರ ಬಳಿ ಮಾಹಿತಿ ಪಡೆಯಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜಿ ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆಗಳು ನಡೆದಿವೆ.












Click it and Unblock the Notifications