ಆರೆಸ್ಸೆಸ್ ಬೆಂಬಲಿತ ಶಿಕ್ಷಕರ ಮೇಲೆ ಕಾಂಗ್ರೆಸ್ ಕಣ್ಣು, ಎಬಿವಿಪಿ ಕೆಂಗಣ್ಣು
ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ ಸಂಘ ಪರಿವಾರದ ಬೆಂಬಲಿತ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಕೆಪಿಸಿಸಿಯ ಈ ಕ್ರಮದ ವಿರುದ್ಧ ಆರೆಸ್ಸೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕಿಡಿಕಾರಿದೆ.
ಕಾಂಗ್ರೆಸ್ ಪಕ್ಷ ವಿದ್ಯಾರ್ಥಿ ಸಂಘಟನೆ ಎನ್ಎಸ್ ಯುಐ ಹಾಗೂ ಇತರೆ ವಿದ್ಯಾರ್ಥಿ ಸಂಘಟನೆಗಳ ಸದಸ್ಯರೊಂದಿಗೆ ವೇಣು ಗೋಪಾಲ್ ಅವರು ಸಭೆ ನಡೆಸಿದ ಬಳಿಕ ಗುರುವಾರದಂದು ಈ ರೀತಿ ಸೂಚನೆ ನೀಡಿದ್ದಾರೆ.

ಸಾಕಷ್ಟು ಕಾಲೇಜುಗಳು ಪ್ರಾಂಶುಪಾಲರು ಆರೆಸ್ಸೆಸ್ ಹಾಗೂ ಎಬಿವಿಪಿ ಪರ ಇದ್ದಾರೆ, ಹೀಗಾಗಿ ನಮ್ಮ ದನಿಯೆತ್ತಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷ ವಿದ್ಯಾರ್ಥಿ ಸಂಘಟನೆ ಎನ್ಎಸ್ ಯುಐ ಹಾಗೂ ಯುವ ಕಾಂಗ್ರೆಸ್ ಸದಸ್ಯರು ದೂರಿದ್ದಾರೆ.
ಆರೆಸ್ಸೆಸ್ ಬೆಂಬಲ ಹೊಂದಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ವಿಚಾರ ಪ್ರಜಾತಾಂತ್ರಿಕ ವ್ಯವಸ್ಥೆಯ ಮತ್ತು ಸಂವಿಧಾನ ಆಶಯಗಳ ಬಗ್ಗೆ ಇರುವ ಅಗೌರವವನ್ನು ಸೂಚಿಸುತ್ತದೆ ಎಂದು ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ ಬಿದರೆಯವರು ಪ್ರತಿಕ್ರಿಯಿಸಿದ್ದಾರೆ.
ಕೆಲ ಶಿಕ್ಷಕರು ಬೋಧಿಸುವ ವೇಳೆ ಆರ್ ಎಸ್ಎಸ್ ಹಾಗೂ ಎಬಿವಿಪಿಗೆ ಪೂರಕವಾಗಿ ರಾಜಕೀಯವನ್ನು ಮಿಶ್ರಣ ಮಾಡಿ ಮಾತನಾಡುತ್ತಿದ್ದಾರೆ ಎಂಬ ದೂರಿನ ಬಗ್ಗೆ ವರದಿಯನ್ನು ವೇಣುಗೋಪಾಲ್ ಅವರು ಕೇಳಿದ್ದು ನಿಜ. ಶೈಕ್ಷಣಿಕ ಸಂಸ್ಥೆಗಳಲ್ಲಿ ರಾಜಕೀಯವನ್ನು ಸೇರ್ಪಡೆಗೊಳಿಸುವುದು ಕಾನೂನಿಗೆ ವಿರುದ್ಧವಾದದ್ದು. ಇದಕ್ಕೆ ನಾವು ವಿರೋಧ ವ್ಯಕ್ತಪಡಿಸಬೇಕು. ಆದರೆ, ಪೂರ್ಣ ಪಟ್ಟಿಯನ್ನು ಸಲ್ಲಿಸುವಂತೆ ಕೋರಿಲ್ಲ ಎಂದು ಎನ್ ಎಸ್ ಯು ಐನ ರಾಜ್ಯ ಅಧ್ಯಕ್ಷ ಮಂಜುನಾಥ್ ಗೌಡ ಅವರು ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications