Congress Party: ಶಾಸಕಾಂಗ ಪಕ್ಷದ ಸಭೆಯಲ್ಲಿ ಕಿತ್ತಾಡಿಕೊಂಡ ಕಾಂಗ್ರೆಸ್ ಪ್ರಭಾವಿ ಸಚಿವರು, ಯಾವ ವಿಚಾರಕ್ಕೆ?
ರಾಜ್ಯ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ಸಭೆ ಸೋಮವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದಿದೆ. ಈ ಸಭೆಯು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿವೆ. ಆಂತರಿಕವಾಗಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಮತ್ತೊಂದೆಡೆ ಇಬ್ಬರು ಸಚಿವರು ಕೂಡ ಪರಸ್ಪರ ಕಿತ್ತಾಡಿಕೊಂಡು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವ ವಿಚಾರ ಇದೀಗ ಹೊರಬಂದಿದೆ. ಇಷ್ಟಕ್ಕೂ ಸಭೆಯಲ್ಲಿ ಕಿತ್ತಾಡಿಕೊಂಡ ಸಚಿವರು ಯಾರು? ಯಾವ ಕಾರಣಕ್ಕಾಗಿ ಗಲಾಟೆ ಮಾಡಿಕೊಂಡರು ಎನ್ನುವ ಇನ್ಸೈಡ್ ಸ್ಟೋರಿ ಇಲ್ಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಚಿವರಾದ ಸಚಿವ ಎಚ್ಕೆ ಪಾಟೀಲ್, ಜಿ.ಪರಮೇಶ್ವರ್, ಕೆಜೆ ಜಾರ್ಜ್, ಎಂಬಿ ಪಾಟೀಲ್, ಎನ್ಎಸ್ ಬೋಸರಾಜು, ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭಾ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ ಸೇರಿದಂತೆ ಕಾಂಗ್ರೆಸ್ನ ಸಚಿವರು, ಶಾಸಕರು ಉಪಸ್ಥಿತರಿದ್ದರು.

ಈ ವೇಳೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರು ಸಚಿವರು ಬಹಿರಂಗವಾಗಿಯೇ ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಕಿತ್ತಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಟ್ರಾನ್ಸ್ಫರ್ ವಿಚಾರವಾಗಿ ಇಬ್ಬರು ಸಚಿವರ ನಡುವೆ ಗಲಾಟೆ ನಡೆದಿದ್ದು, ಸಭೆ ನಂತರ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಇಬ್ಬರು ಸಚಿವರ ನಡುವೆ ವಾಗ್ವಾದ ನಡೆದಿದ್ದು, ಇಬ್ಬರೂ ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದರು ಎನ್ನಲಾಗಿದೆ.
ರಾಯಚೂರು ಜಿಲ್ಲೆಗೆ ಸಂಬಂಧಿಸಿದಂತೆ ಟ್ರಾನ್ಸ್ಫರ್ ವಿಚಾರವಾಗಿ ಸಚಿವ ಬೋಸರಾಜು ವಿರೋಧ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯವನು ನಾನು. ಹೀಗಿರುವಾಗ ಟ್ರಾನ್ಸ್ಫರ್ ವಿಚಾರಕ್ಕೆ ನೀವೇಕೆ ಪತ್ರ ಕೊಡ್ತೀರಿ ಅಂತ ಗರಂ ಆಗಿದ್ದಾರೆ. ಇದಕ್ಕೆ ಉತ್ತರಿಸಿದ ಶರಣ್ ಪ್ರಕಾಶ್ ಪಾಟೀಲ್ ಅವರು ಶಾಸಕರು ಕೇಳಿದ್ದಕ್ಕೆ ಪತ್ರ ನೀಡಿದ್ದೇನೆ ಎಂದು ಹೇಳಿದ್ದಾರೆ. ಶಾಸಕರ ಬೇಡಿಕೆಗಳನ್ನು ಈಡೇರಿಸುವುದು ನನ್ನ ಕೆಲಸ ಎಂದೂ ಶರಣ ಪ್ರಕಾಶ್ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ನನ್ನ ಒಂದು ಮಾತು ಕೇಳದೆ ಯಾಕೆ ಪತ್ರ ಕೊಟ್ರಿ ಎಂದೂ ಭೋಸರಾಜು ಕೋಪಗೊಂಡಿದ್ದಾರೆ. ಹೀಗೆ ಮಾತಿಗೆ ಮಾತು ಬೆಳೆದು ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು. ಕೊನೆಗೆ ಅಲ್ಲಿದ್ದ ಶಾಸಕರೆಲ್ಲ ಮಧ್ಯಪ್ರವೇಶಿಸಿ ಇಬ್ಬರೂ ಸಚಿವರನ್ನು ಕೂಲ್ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಸಚಿವರು ನಮ್ಮ ಕೈಗೆ ಸಿಗುತ್ತಿಲ್ಲ. ಸರ್ಕಾರ ರಚನೆಯಾಗಿ ಎರಡು ವರ್ಷಗಳಾದರೂ ಸಚಿವರು ನಮ್ಮ ಕೈಗೆ ಸಕಾಲಕ್ಕೆ ಸಿಗುತ್ತಿಲ್ಲ. ಭೇಟಿಗೆ ಅವಕಾಶ ಕೇಳಿದರೂ ಏನೇನೋ ಕಾರಣ ನೀಡುತ್ತಾರೆ ಎಂದು ದೂರಿದ್ದಾರೆ. ಶಾಸಕಾಂಗ ಸಭೆಯಲ್ಲಿ ಶಾಸಕ ಗಣಿಗ ರವಿ ಅವರೂ ಆಕ್ರೋಶ ಹೊರಹಾಕಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಶಾಸಕರ ಹಳೇ ಬಿಲ್ ಕ್ಲಿಯರ್ ಆಗುತ್ತಿದ್ದು, ನಮ್ಮದೇ ಪಕ್ಷದ ಬಿಲ್ ಪಾವತಿಯಾಗುತ್ತಿಲ್ಲ ಎಂದು ದೂರಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications