Get Updates
Get notified of breaking news, exclusive insights, and must-see stories!

ರಾಜ್ಯೋತ್ಸವದಂದೇ ಕಾಂಗ್ರೆಸ್‌ ನಾಯಕನಿಂದ ಪ್ರತ್ಯೇಕ ರಾಜ್ಯದ ಕೂಗು!

ನಿನ್ನೆ ರಾಜ್ಯಾದ್ಯಂತ ಅಖಂಡ ಕರ್ನಾಟಕದ ರಾಜ್ಯೋತ್ಸವ ಅದ್ಧೂರಿಯಾಗಿ ನೆರವೇರಿದೆ. ಇದೇ ವೇಳೆ ಕಿತ್ತೂರು ಕರ್ನಾಟಕ ಭಾಗದಿಂದ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಕಾಂಗ್ರೆಸ್‌ ನಾಯಕನಿಂದಲೇ ಪ್ರತ್ಯೇಕ ರಾಜ್ಯದ ವಿಚಾರ ಮುನ್ನೆಲೆಗೆ ಬಂದಿದೆ.

ಕಿತ್ತೂರು ಕರ್ನಾಟಕದ ಬಗ್ಗೆ ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅಸಮಾಧಾನ ಹೊರಹಾಕಿದ್ದು, ಕಲ್ಯಾಣ ಕರ್ನಾಟಕದಂತೆ ನಮಗೂ ಅನುದಾನ ಸಿಕ್ಕರೆ, ನಾವು ಪ್ರತ್ಯೇಕ ರಾಜ್ಯದ ಕೂಗು ಎತ್ತುವುದಿಲ್ಲ ಎಂದು ಸವದಿ ಪರೋಕ್ಷವಾಗಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

Karnataka Congress MLA Lakshmana Savadi Has Demanded A Separate State

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ನಡುವೆ ತಾರತಮ್ಯ ನಡೆಯುತ್ತಿದೆ ಎಂಬರ್ಥದಲ್ಲಿ ಸವದಿ ಈ ರೀತಿ ಅಸಮಾಧಾನ ಹೊರಹಾಕಿದ್ದಾರೆ. ಕಲ್ಯಾಣ ಕರ್ನಾಟಕದಂತೆ ಕಿತ್ತೂರು ಕರ್ನಾಟಕ ಭಾಗಕ್ಕೂ ಐದು ಸಾವಿರ ಕೋಟಿ ರೂಪಾಯಿ ನೀಡಬೇಕು. ಅದರಂತೆ ವಿಶೇಷ ಅಭಿವೃದ್ಧಿ ಮಂಡಳಿ ರಚಿಸಬೇಕು. ಆಗ ಪ್ರತ್ಯೇಕ ರಾಜ್ಯದ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಸವದಿ ಆಗ್ರಹಿಸಿದ್ದಾರೆ.

ಕಿತ್ತೂರು ಕರ್ನಾಟಕ ಭಾಗಕ್ಕೂ ಸರ್ಕಾರ ಆದ್ಯತೆ ಕೊಡಬೇಕು. ಕಲ್ಯಾಣ ಕರ್ನಾಟಕ ಮಂಡಳಿಗೆ ವಿಶೇಷ ಅನುದಾನ ನೀಡಿರುವುದರಿಂದ ಆ ಭಾಗದ ಜಿಲ್ಲೆಗಳಲ್ಲಿ ಅಭಿವೃದ್ಧಿಯಾಗುತ್ತಿವೆ. ಹಾಗಾಗಿ ಕಿತ್ತೂರು ಕರ್ನಾಟಕಕ್ಕೂ ಸರ್ಕಾರ ಅಭಿವೃದ್ಧಿ ಮಂಡಳಿ ರಚಿಸಬೇಕು ಎಂದು ಡಿಮ್ಯಾಂಡ್‌ ಮಾಡಿದ್ದಾರೆ.

Karnataka Congress MLA Lakshmana Savadi Has Demanded A Separate State

ಕಿತ್ತೂರು ಕರ್ನಾಟಕಕ್ಕೆ ಅನುದಾನ ನೀಡಿದರೆ ಮಾತ್ರವೇ ಇಲ್ಲಿನ ಅಭಿವೃದ್ಧಿ ಸಾಧ್ಯ ಎಂದು ಸವದಿ ಒತ್ತಿ ಹೇಳಿದ್ದು, ಈ ಮೂಲಕ ಸರ್ಕಾರದ ಮುಂದೆ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಸಿಎಂ ಕನ್ನಡ ಗುಣಗಾನ: ನಿನ್ನೆ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ನಾವು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.

Karnataka Congress MLA Lakshmana Savadi Has Demanded A Separate State

ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953 ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡನಾ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ರಾಜ್ಯಗಳ ಭಾಷಾವಾರು ವಿಂಗಡನೆಯಾಧರಿಸಿ, 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು ಎಂದರು.

ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1ರಂದು ಮೈಸೂರು ರಾಜ್ಯ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕವೆಂದು ಮರುನಾಮಕರಣಗೊಂಡಿತು. ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ ಎಂದು ದೂರಿದರು.

z

ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ, ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ, ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ ಎಂದರು.

ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಬೇಕು ಎಂದರು.

ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತನ್ನು ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+