ಮಹಿಳೆಯರ ಮನ ಗೆಲ್ಲಲು ಕಾಂಗ್ರೆಸ್ ನಿಂದ ತುಳಸಿ ಗಿಡ ಹಂಚಿಕೆ
ಬೆಂಗಳೂರು, ನವೆಂಬರ್ 5: ಕರ್ನಾಟಕದಲ್ಲಿ ಮಹಿಳೆಯರ ಮನಗೆಲ್ಲಲು ಕಾಂಗ್ರೆಸ್ ವಿಶಿಷ್ಠ ಕಾರ್ಯತಂತ್ರದ ಮೊರೆ ಹೋಗಿದೆ.
ಈ ಕಾರ್ಯತಂತ್ರದ ಪ್ರಕಾರ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ತುಳಸಿ ಗಿಡಗಳನ್ನು ಮನೆಗೆ ಮನೆಗೆ ಭೇಟಿ ನೀಡಿ ಹಂಚಲಿದ್ದಾರೆ. ತುಳಸಿ ಗಿಡಗಳ ಜತೆಗೆ ಅರಶಿಣ ಕುಂಕುಮವನ್ನು ಕಾರ್ಯಕರ್ತರು ವಿತರಿಸಲಿದ್ದಾರೆ. ಹೆಂಗಳೆಯರ ಮತಗಳನ್ನು ಸೆಳೆಯಲು ಈ ವಿಶಿಷ್ಠ ಕಾರ್ಯತಂತ್ರವನ್ನು ನೆಚ್ಚಿಕೊಳ್ಳಲಾಗಿದೆ.

ಮಹಿಳಾ ಕಾಂಗ್ರೆಸಿಗರ ಈ ಕಾರ್ಯತಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಒಪ್ಪಿಗೆ ನೀಡಿದ್ದಾರೆ. ಮುಂದಿನ ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.
ತುಳಸಿಯ ಬಗ್ಗೆ ಧಾರ್ಮಿಕವಾಗಿ ಪವಿತ್ರ ಭಾವನೆ ಇದೆ. ಈ ಕಾರಣಕ್ಕೆ ತುಳಸಿ ಹಂಚಲು ನಿರ್ಧರಿಸಿದ್ದೇವೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈಗಾಗಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ಶನಿವಾರ ನಡೆದ ವರ್ಕಿಂಗ್ ಕಮಿಟಿ ಸಭೆಯಲ್ಲಿ ಸಾಂಕೇತಿಕವಾಗ ಡಾ.ಜಿ. ಪರಮೇಶ್ವರ್ ಗೆ ತುಳಸಿ ಗಿಡಗಳನ್ನು ಹಂಚಲಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications