ಲೋಕಸಭೆ ಚುನಾವಣೆ ನಾಯಕತ್ವ ಸಿದ್ದರಾಮಯ್ಯ ಕೈತಪ್ಪಿಸಲು ಮಸಲತ್ತು
Recommended Video

ಬೆಂಗಳೂರು, ನವೆಂಬರ್ 15: ಉಪಚುನಾವಣೆಯಲ್ಲಿ ಭರ್ಜರಿ ಫಸಲು ತೆಗೆದ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಯತ್ತ ದೃಷ್ಠಿ ನೆಟ್ಟಿದೆ. ಆದರೆ ಲೋಕಸಭೆ ಚುನಾವಣೆಯ ಉಸ್ತುವಾರಿಯ ನಾಯಕತ್ವ ಬದಲಾಯಿಸಲು ಪಕ್ಷದ ಒಳಗೇ ಮಸಲತ್ತುಗಳು ಪ್ರಾರಂಭವಾಗಿವೆ.
ಹೌದು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ನಾಯಕತ್ವ ವಹಿಸಿದ್ದ ಸಿದ್ದರಾಮಯ್ಯ ಅವರೇ ಈ ಬಾರಿಯ ಲೋಕಸಭೆ ಉಪಚುನಾವಣೆಯ ನಾಯಕತ್ವವನ್ನೂ ವಹಿಸಲಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಪಕ್ಷದ ಒಳಗಿನ ಕೆಲವು ಪ್ರಭಾವಿ ಮುಖಂಡರು ಆಕ್ಷೇಪಣೆ ಹೊಂದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಸಿದ್ದರಾಮಯ್ಯ ಅವರಿಂದ ತಪ್ಪಿಸಬೇಕು ಎಂದು ಪಕ್ಷದ ಕೆಲವು ಹಿರಿಯರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವೇಣುಗೋಪಾಲ್ ಅವರ ಬಳಿ ಒಂದು ಹಂತದ ಮನವಿಯೂ ಸೇರಿದೆ.
ಇತ್ತೀಚೆಗೆ ಮುಗಿದ ಲೋಕಸಭೆ ಉಪಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ಪರೀಕ್ಷೆ ನಡೆದು ಅವರು ಭಾರಿ ಅಂತರದಿಂದ ಪಾಸಾಗಿದ್ದಾರೆ. ಹಾಗಾಗಿ ಹೊಸ ನಾಯಕರಿಗೆ ಉಸ್ತುವಾರಿ ಹಸ್ತಾಂತರಿಸಬೇಕು ಎಂಬ ಮಾತುಗಳು ಕೆಪಿಸಿಸಿ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಸಿದ್ದರಾಮಯ್ಯ ಪ್ರಭಾವ ಕಡಿಮೆ ಮಾಡುವ ಯತ್ನ
ಪಕ್ಷದ ಮೇಲೆ ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆಗೊಳಿಸಲು ಈ ಯತ್ನ ನಡೆಸುತ್ತಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅಷ್ಟೇನು ಉತ್ತಮ ಪ್ರದರ್ಶನ ತೋರಿಲ್ಲ ಎನ್ನುವುದನ್ನು ಮುಂದು ಮಾಡಿ ನೇತೃತ್ವ ಬದಲಾವಣೆಗೆ ಮನವಿ ಮಾಡಲಾಗುತ್ತಿದೆ.

ಸಿದ್ದರಾಮಯ್ಯ ವಿರೋಧಿ ಬಣ ಒಟ್ಟುಮಾಡುವ ಯತ್ನ
ಸಿದ್ದರಾಮಯ್ಯ ವಿರೋಧಿ ಬಣವನ್ನೆಲ್ಲಾ ಒಟ್ಟು ಮಾಡುವ ಯತ್ನ ತೆರೆಮರೆಯಲ್ಲಿ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಈ ಬಾರಿ ಕಾಂಗ್ರೆಸ್ ಪ್ರಚಾರ ಉಸ್ತುವಾರಿಯನ್ನಾಗಿಸಲು ಯತ್ನಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ ಗಾಧಿ ಸಹ ಹೊಸಬರ ಕೈಯಲ್ಲಿದ್ದು, ಕರ್ನಾಟಕ ಕಾಂಗ್ರೆಸ್ ಚುನಾವಣೆ ಉಸ್ತುವಾರಿ ಸಹ ಹೊಸಬರೇ ಆದರೆ ಉತ್ತಮ ಎಂದು ಕೆಪಿಸಿಸಿ ಸಹ ಹೈಕಮಾಂಡ್ಗೆ ಹೇಳಿದೆ ಎನ್ನಲಾಗಿದೆ.

ಜೆಡಿಎಸ್ ಕೂಡಾ ಸಾಥ್
ಹಠವಾದಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡುವ ಕಾಂಗ್ರೆಸ್ನ ಮುಖಂಡರ ಯತ್ನಕ್ಕೆ ಜೆಡಿಎಸ್ ಮುಖಂಡರೂ ಸಹ ಬೆಂಬಲ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೆ ಮೈತ್ರಿ ವಿಷಯದಲ್ಲಿ ಜೆಡಿಎಸ್ ಗೆ ತೊಡಿಸಿರುವ ಮೂಗುದಾರ ಸಡಿಲವಾಗುತ್ತದೆ ಎಂಬ ಯೋಚನೆ ಅದರದ್ದು.

ಹೈಕಮಾಂಡ್ ಏನು ಹೇಳುತ್ತದೆ
ಹೈಕಮಾಂಡ್ ಲೋಕಸಭೆ ಚುನಾವಣೆಯಲ್ಲಿ ಸಂಘಟಿತ ನಾಯಕತ್ವದ ಬಗ್ಗೆ ಮಾತನಾಡುತ್ತಿದೆ. ಆದರೆ ಅಸಮಾಧಾನಗಳಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ಸುಲಭವಲ್ಲ. ಆದರೆ ಹೈಕಮಾಂಡ್ಗೆ ಸಿದ್ದರಾಮಯ್ಯ ಅವರ ಮೇಲೆ ಅಪಾರ ನಂಬಿಕೆ ಇದ್ದಂತಿದೆ. ಸಿದ್ದರಾಮಯ್ಯ ಅವರ ಉಸ್ತುವಾರಿಯಲ್ಲಿಯೇ ಚುನಾವಣಾ ಪ್ರಚಾರ ನಡೆಯಬೇಕೆಂಬ ಆಸೆ ಹೈಕಮಾಂಡ್ನದ್ದು, ಆದರೆ ಕೊನೆಯ ಕ್ಷಣದಲ್ಲಿ ಬದಲಾವಣೆ ಆಗುತ್ತದೆಯೇ ನೋಡಬೇಕು.

ಕಾಂಗ್ರೆಸ್ ಮೇಲೆ ಭಾರಿ ಪ್ರಭಾವ
ಸಿದ್ದರಾಮಯ್ಯ ಅವರನ್ನು ಪಕ್ಷದ ಮುಖ್ಯ ಜವಾಬ್ದಾರಿಯಿಂದ ಹಿಂದೆ ಸರಿಸಿದರೆ ಕಾಂಗ್ರೆಸ್ಗೆ ಅದು ದೊಡ್ಡ ಹಿನ್ನಡೆಯೇ ಆಗುತ್ತದೆ. ಸಿದ್ದರಾಮಯ್ಯ ಅವರ ಅಹಿಂದ ನಾಯಕನ ಪಟ್ಟ ಕಾಂಗ್ರೆಸ್ನ ಮತ್ತೊಬ್ಬರಿಗೆ ಇಲ್ಲ, ಸಿದ್ದರಾಮಯ್ಯ ಹಿನ್ನೆಲೆ ಆದರೆ ಅಹಿಂದ ಮತಗಳು ಚದುರಿ ಹೋಗುತ್ತವೆ. ಅಲ್ಲದೆ ಸಿದ್ದರಾಮಯ್ಯ ಬೆಂಬಲಿಗ ಶಾಸಕರ ದೊಡ್ಡ ಪಡೆ ಸದ್ಯದ ಕಾಂಗ್ರೆಸ್ನಲ್ಲಿದೆ ಅವರೂ ಸಹ ಚುನಾವಣೆಯಲ್ಲಿ ನಿರಾಸಕ್ತಿ ತೋರಬಹುದು ಇದು ಸಹ ಹಿನ್ನಡೆ ಆಗುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications