ಲೋಕಸಭೆ ಚುನಾವಣೆ ನಾಯಕತ್ವ ಸಿದ್ದರಾಮಯ್ಯ ಕೈತಪ್ಪಿಸಲು ಮಸಲತ್ತು
Recommended Video

ಬೆಂಗಳೂರು, ನವೆಂಬರ್ 15: ಉಪಚುನಾವಣೆಯಲ್ಲಿ ಭರ್ಜರಿ ಫಸಲು ತೆಗೆದ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಯತ್ತ ದೃಷ್ಠಿ ನೆಟ್ಟಿದೆ. ಆದರೆ ಲೋಕಸಭೆ ಚುನಾವಣೆಯ ಉಸ್ತುವಾರಿಯ ನಾಯಕತ್ವ ಬದಲಾಯಿಸಲು ಪಕ್ಷದ ಒಳಗೇ ಮಸಲತ್ತುಗಳು ಪ್ರಾರಂಭವಾಗಿವೆ.
ಹೌದು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ನಾಯಕತ್ವ ವಹಿಸಿದ್ದ ಸಿದ್ದರಾಮಯ್ಯ ಅವರೇ ಈ ಬಾರಿಯ ಲೋಕಸಭೆ ಉಪಚುನಾವಣೆಯ ನಾಯಕತ್ವವನ್ನೂ ವಹಿಸಲಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಪಕ್ಷದ ಒಳಗಿನ ಕೆಲವು ಪ್ರಭಾವಿ ಮುಖಂಡರು ಆಕ್ಷೇಪಣೆ ಹೊಂದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಸಿದ್ದರಾಮಯ್ಯ ಅವರಿಂದ ತಪ್ಪಿಸಬೇಕು ಎಂದು ಪಕ್ಷದ ಕೆಲವು ಹಿರಿಯರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವೇಣುಗೋಪಾಲ್ ಅವರ ಬಳಿ ಒಂದು ಹಂತದ ಮನವಿಯೂ ಸೇರಿದೆ.
ಇತ್ತೀಚೆಗೆ ಮುಗಿದ ಲೋಕಸಭೆ ಉಪಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ಪರೀಕ್ಷೆ ನಡೆದು ಅವರು ಭಾರಿ ಅಂತರದಿಂದ ಪಾಸಾಗಿದ್ದಾರೆ. ಹಾಗಾಗಿ ಹೊಸ ನಾಯಕರಿಗೆ ಉಸ್ತುವಾರಿ ಹಸ್ತಾಂತರಿಸಬೇಕು ಎಂಬ ಮಾತುಗಳು ಕೆಪಿಸಿಸಿ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಸಿದ್ದರಾಮಯ್ಯ ಪ್ರಭಾವ ಕಡಿಮೆ ಮಾಡುವ ಯತ್ನ
ಪಕ್ಷದ ಮೇಲೆ ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆಗೊಳಿಸಲು ಈ ಯತ್ನ ನಡೆಸುತ್ತಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅಷ್ಟೇನು ಉತ್ತಮ ಪ್ರದರ್ಶನ ತೋರಿಲ್ಲ ಎನ್ನುವುದನ್ನು ಮುಂದು ಮಾಡಿ ನೇತೃತ್ವ ಬದಲಾವಣೆಗೆ ಮನವಿ ಮಾಡಲಾಗುತ್ತಿದೆ.

ಸಿದ್ದರಾಮಯ್ಯ ವಿರೋಧಿ ಬಣ ಒಟ್ಟುಮಾಡುವ ಯತ್ನ
ಸಿದ್ದರಾಮಯ್ಯ ವಿರೋಧಿ ಬಣವನ್ನೆಲ್ಲಾ ಒಟ್ಟು ಮಾಡುವ ಯತ್ನ ತೆರೆಮರೆಯಲ್ಲಿ ನಡೆದಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಈ ಬಾರಿ ಕಾಂಗ್ರೆಸ್ ಪ್ರಚಾರ ಉಸ್ತುವಾರಿಯನ್ನಾಗಿಸಲು ಯತ್ನಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ ಗಾಧಿ ಸಹ ಹೊಸಬರ ಕೈಯಲ್ಲಿದ್ದು, ಕರ್ನಾಟಕ ಕಾಂಗ್ರೆಸ್ ಚುನಾವಣೆ ಉಸ್ತುವಾರಿ ಸಹ ಹೊಸಬರೇ ಆದರೆ ಉತ್ತಮ ಎಂದು ಕೆಪಿಸಿಸಿ ಸಹ ಹೈಕಮಾಂಡ್ಗೆ ಹೇಳಿದೆ ಎನ್ನಲಾಗಿದೆ.

ಜೆಡಿಎಸ್ ಕೂಡಾ ಸಾಥ್
ಹಠವಾದಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡುವ ಕಾಂಗ್ರೆಸ್ನ ಮುಖಂಡರ ಯತ್ನಕ್ಕೆ ಜೆಡಿಎಸ್ ಮುಖಂಡರೂ ಸಹ ಬೆಂಬಲ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಚುನಾವಣಾ ರಾಜಕೀಯದಿಂದ ಹಿಂದೆ ಸರಿದರೆ ಮೈತ್ರಿ ವಿಷಯದಲ್ಲಿ ಜೆಡಿಎಸ್ ಗೆ ತೊಡಿಸಿರುವ ಮೂಗುದಾರ ಸಡಿಲವಾಗುತ್ತದೆ ಎಂಬ ಯೋಚನೆ ಅದರದ್ದು.

ಹೈಕಮಾಂಡ್ ಏನು ಹೇಳುತ್ತದೆ
ಹೈಕಮಾಂಡ್ ಲೋಕಸಭೆ ಚುನಾವಣೆಯಲ್ಲಿ ಸಂಘಟಿತ ನಾಯಕತ್ವದ ಬಗ್ಗೆ ಮಾತನಾಡುತ್ತಿದೆ. ಆದರೆ ಅಸಮಾಧಾನಗಳಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ಸುಲಭವಲ್ಲ. ಆದರೆ ಹೈಕಮಾಂಡ್ಗೆ ಸಿದ್ದರಾಮಯ್ಯ ಅವರ ಮೇಲೆ ಅಪಾರ ನಂಬಿಕೆ ಇದ್ದಂತಿದೆ. ಸಿದ್ದರಾಮಯ್ಯ ಅವರ ಉಸ್ತುವಾರಿಯಲ್ಲಿಯೇ ಚುನಾವಣಾ ಪ್ರಚಾರ ನಡೆಯಬೇಕೆಂಬ ಆಸೆ ಹೈಕಮಾಂಡ್ನದ್ದು, ಆದರೆ ಕೊನೆಯ ಕ್ಷಣದಲ್ಲಿ ಬದಲಾವಣೆ ಆಗುತ್ತದೆಯೇ ನೋಡಬೇಕು.

ಕಾಂಗ್ರೆಸ್ ಮೇಲೆ ಭಾರಿ ಪ್ರಭಾವ
ಸಿದ್ದರಾಮಯ್ಯ ಅವರನ್ನು ಪಕ್ಷದ ಮುಖ್ಯ ಜವಾಬ್ದಾರಿಯಿಂದ ಹಿಂದೆ ಸರಿಸಿದರೆ ಕಾಂಗ್ರೆಸ್ಗೆ ಅದು ದೊಡ್ಡ ಹಿನ್ನಡೆಯೇ ಆಗುತ್ತದೆ. ಸಿದ್ದರಾಮಯ್ಯ ಅವರ ಅಹಿಂದ ನಾಯಕನ ಪಟ್ಟ ಕಾಂಗ್ರೆಸ್ನ ಮತ್ತೊಬ್ಬರಿಗೆ ಇಲ್ಲ, ಸಿದ್ದರಾಮಯ್ಯ ಹಿನ್ನೆಲೆ ಆದರೆ ಅಹಿಂದ ಮತಗಳು ಚದುರಿ ಹೋಗುತ್ತವೆ. ಅಲ್ಲದೆ ಸಿದ್ದರಾಮಯ್ಯ ಬೆಂಬಲಿಗ ಶಾಸಕರ ದೊಡ್ಡ ಪಡೆ ಸದ್ಯದ ಕಾಂಗ್ರೆಸ್ನಲ್ಲಿದೆ ಅವರೂ ಸಹ ಚುನಾವಣೆಯಲ್ಲಿ ನಿರಾಸಕ್ತಿ ತೋರಬಹುದು ಇದು ಸಹ ಹಿನ್ನಡೆ ಆಗುತ್ತದೆ.
-
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ












Click it and Unblock the Notifications