ಇದರಲ್ಲಿ ಯಾರಾದರೂ ಬಿಜೆಪಿ ನಾಯಕರ ಮಕ್ಕಳಿದ್ದಾರಾ: ಸೆರೆಯಾದ ಪುನೀತ್​ ಕೆರೆಹಳ್ಳಿ, ಸಹಚರರ ಫೋಟೊ ಹಂಚಿಕೊಂಡು ಕಾಂಗ್ರೆಸ್‌ ಪ್ರಶ್ನೆ

ಬೆಂಗಳೂರು, ಏ 05: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಹಾಗೂ ಅವರ ಸಹಚರರ ಫೋಟೊವನ್ನು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಇದರಲ್ಲಿ ಯಾರಾದರೂ ಬಿಜೆಪಿ ನಾಯಕರ ಮಕ್ಕಳಿದ್ದಾರಾ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

'ಇದರಲ್ಲಿ ಯಾರಾದರೂ ಒಬ್ಬೇ ಒಬ್ಬ ಬಿಜೆಪಿ ನಾಯಕರ ಮಕ್ಕಳಿದ್ದಾರಾ? ಬಿಜೆಪಿ ನಾಯಕರ ಮಕ್ಕಳು ಏಕೆ ಗೋರಕ್ಷಣೆಗೆ ಹೋಗುವುದಿಲ್ಲ? ಅವರಿಗೇಕೆ ಧರ್ಮ ರಕ್ಷಣೆಯ ಹೊಣೆ ಇಲ್ಲ? ತಮ್ಮ ಮಕ್ಕಳನ್ನು ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಕಳಿಸಿ, ಉದ್ಯಮಿಗಳನ್ನಾಗಿಸುವ ಬಿಜೆಪಿ ನಾಯಕರು ಇತರರ ಮಕ್ಕಳನ್ನು ಪ್ರಚೋದಿಸಿ ಜೈಲಿಗೆ ಕಳಿಸುತ್ತದೆ' ಎಂದು ಗಂಭೀರ ಆರೋಪ ಮಾಡಿದೆ.

 Karnataka Congress Tweets arrested Puneeth Kerehalli his photo, slams bjp leaders

ರಾಮನಗರ ಜಿಲ್ಲೆಯಲ್ಲಿ ದನದ ವ್ಯಾಪಾರಿಯೊಬ್ಬರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕರ್ನಾಟಕ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪುನೀತ್ ಸೇರಿದಂತೆ ನಾಲ್ವರು ರಾಜಸ್ಥಾನದಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿ ಬಲಪಂಥೀಯ ಸಂಘಟನೆಯಾದ 'ರಾಷ್ಟ್ರ ರಕ್ಷಣಾ ಪಡೆ' (ನೇಷನ್ ಪ್ರೊಟೆಕ್ಷನ್ ಆರ್ಮಿ) ನಡೆಸುತ್ತಿದ್ದಾರೆ. ಅವರು ಹಲಾಲ್ ಮಾಂಸದ ವಿರುದ್ಧ ಅಭಿಯಾನಗಳನ್ನು ಸಹ ಆಯೋಜಿಸಿದ್ದರು. ಹಿಂದೆ ಹಿಂದೂ ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಕೋರಿದ್ದರು.

ರಾಮನಗರ ಜಿಲ್ಲೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಕ್ಕಾಗಿ ಇರ್ಷಾದ್‌ ಎಂಬುವವರನ್ನು ಹೊಡೆದು ಕೊಲೆ ಮಾಡಿದ ಆರೋಪವನ್ನು ಪುನೀತ್‌ ಕೆರೆಹಳ್ಳಿ ಎದುರಿಸುತ್ತಿದ್ದಾರೆ. ಮೃತ ಇರ್ಷಾದ್‌ ಪಾಷಾ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 323 (ದಾಳಿ) 341 (ತಪ್ಪು ಸಂಯಮ), 506 (ಅಪರಾಧ ಬೆದರಿಕೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಖಂಡಿಸಿದ್ದು, ಸಾವಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ಧರ್ಮ ರಕ್ಷಣೆಯ ಹೆಸರಿನಲ್ಲಿ ಬಿಜೆಪಿ ನಡೆಸುತ್ತಿರುವ ಗೂಂಡಾ ರಾಜಕಾರಣಕ್ಕೆ ಸಾತನೂರಿನಲ್ಲಿ ನಡೆದ ಯುವಕನ ಹತ್ಯೆ ಸಾಕ್ಷಿಯಾಗಿದೆ. ಅಸಮರ್ಥ ಗೃಹ ಸಚಿವ ಆರಗ ಜ್ಞಾನೇಂದ್ರ ಸಾವಿಗೆ ನೇರ ಹೊಣೆಗಾರರು ಎಂದು ಆರೋಪಿಸಿದ್ದಾರೆ.

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದನು. ತಾನು ದನದ ವ್ಯಾಪಾರಿ ಇದ್ರೀಸ್ ಪಾಷಾನನ್ನು ಕೊಂದಿಲ್ಲ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಎಪ್ರಿಲ್ 1 ರಂದು ದನದ ವ್ಯಾಪಾರಿಯನ್ನು ಗೋರಕ್ಷಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಏಪ್ರಿಲ್ 1 ರಂದು ಸಾತನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಪುನೀತ್ ಕೆರೆಹಳ್ಳಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.

ಏಪ್ರಿಲ್ 3 ರಂದು ಕರ್ನಾಟಕ ಸುದ್ದಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕೆರೆಹಳ್ಳಿ, ಕಾರಿನಲ್ಲಿ ಕುಳಿತು ಇದ್ರೀಸ್ ಪಾಷಾ ಅವರನ್ನು ಕೊಂದಿಲ್ಲ. ಮುಸ್ಲಿಂ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಇದನ್ನು ರೂಪಿಸುತ್ತಿದ್ದಾರೆ ಎಂದು ತೋರಿಸುತ್ತದೆ ಎಂಬುದಾಗಿ ಆರೋಪಿಸಿದ್ದನು.

ಹತ್ಯೆಯ ನಂತರ, ಅಪರಾಧವನ್ನು ವಿರೋಧಿಸಿ ಏಪ್ರಿಲ್ 2 ರ ಭಾನುವಾರದಂದು ಮಂಡ್ಯದಲ್ಲಿ ಮುಸ್ಲಿಂ ಸಮುದಾಯದ ಜನರು ಬೃಹತ್ ಪ್ರತಿಭಟನೆ ನಡೆಸಿದ್ದರು. ನಂತರ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರನ್ನು ಹುಡುಕಲು ಕರ್ನಾಟಕ ಪೋಲಿಸರು ನಾಲ್ಕು ತಂಡವನ್ನು ರಚಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+