ಮೂರು ಜೈಲುಗಳಲ್ಲಿ ಕೈದಿಗಳ ನಿರಶನ
ಬೆಂಗಳೂರು, ಅ, 31 : ಸನ್ನಡತೆ ಆಧಾರದ ಮೇಲೆ ತಮ್ಮನ್ನು ಬಿಡುಗಡೆಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬೆಳಗಾವಿ, ಮೈಸೂರು, ಧಾರವಾಡ ಜೈಲಿನ ಕೈದಿಗಳು ಉಪವಾಸ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸದ್ಯ ಮೂರು ಜೈಲುಗಳಿಂದ ಬಂದಿರುವ ಮನವಿ ಸಿಎಂ ಸಿದ್ದರಾಮಯ್ಯ ಅವರನ್ನು ತಲುಪಿದ್ದು, ಅಂತಿಮ ತೀರ್ಮಾನವನ್ನು ಅವರು ಕೈಗೊಳ್ಳಬೇಕಾಗಿದೆ.
ಸೋಮವಾರ ಮತ್ತು ಮಂಗಳವಾರ ಬೆಳಗಾವಿಯ ಹಿಂಡಲಗಾ ಜೈಲಿನ 600ಕ್ಕೂ ಹೆಚ್ಚು ಕೈದಿಗಳು ಉಪವಾಸ ಸತ್ಯಾಗ್ರಹ ನಡೆಸಿಮ ಸನ್ನಡತೆ ಆಧಾರದ ಮೇಲೆ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದರಾರೆ. ಎರಡೂ ದಿನ ಬೆಳಗ್ಗೆಯಿಂದಲೇ ಚಹಾ, ಉಪಾಹಾರ ಬಿಟ್ಟು ಉಪವಾಸ ಕುಳಿತ ಕೈದಿಗಳು, ನಮ್ಮನ್ನು ಬಿಡುಗಡೆಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕೈದಿಗಳ ಪ್ರತಿಭಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಈ ಬೇಡಿಕೆ ಕುರಿತು ಸದ್ಯದಲ್ಲೇ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಸನ್ನಡತೆ ಆಧಾರದಲ್ಲಿ ಸುಮಾರು 150 ಕೈದಿಗಳನ್ನು ಹಿಂಡಲಗಾ ಜೈಲಿನಿಂದ ಬಿಡುಗಡೆಗೊಳಿಸಬೇಕಿದೆ. ಆದರೆ, ಸರ್ಕಾರ ಈ ಕುರಿತು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಕೈದಿಗಳು ಆರೋಪಿಸಿದ್ದಾರೆ.
ಮೈಸೂರು, ಧಾರವಾಡದಲ್ಲೂ ಪ್ರತಿಭಟನೆ : ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮೈಸೂರು ಮತ್ತು ಧಾರವಾಡ ಕೇಂದ್ರ ಕಾರಾಗೃಹದ ನೂರಾರು ಕೈದಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಧಾರವಾಡ ಜೈಲು ಆವರಣದಲ್ಲಿ ಪ್ರತಿಭಟನೆ ನಡೆಸಿದ ಕೈದಿಗಳು ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು.
ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಉತ್ತಮ ಚಾರಿತ್ರ್ಯ ಹೊಂದಿದ ಕೈದಿಗಳನ್ನು ಬಿಡುಗಡೆ ಮಾಡುವ ಪದ್ಧತಿ ಇದೆ. ಆದರೆ, ರಾಜ್ಯದಲ್ಲಿಯೂ ಇಂತಹ ಪದ್ಧತಿ ಜಾರಿಗೆ ತರಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಪ್ರತಿಭಟನೆ ನಡೆಸುತ್ತಿರುವ ಕೈದಿಗಳು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮೈಸೂರಿನಲ್ಲಿ ಕೈದಿಗಳ ಪ್ರತಿಭಟನೆ ಮಾಹಿತಿ ಪಡೆದು ಕಾರಾಗೃಹಕ್ಕೆ ಭೇಟಿ ನೀಡಿದ ಶಾಸಕ ವಾಸು ಕೈದಿಗಳ ಮನವಿ ಸ್ವೀಕರಿಸಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಕಳೆದ ಮೂರು ದಿನಗಳಿಂದ ಜೈಲುಗಳಲ್ಲಿ ಪ್ರತಿಭಟನೆ ನಡೆಸಿದ ಕೈದಿಗಳ ಮನವಿ ಸಿದ್ದರಾಮಯ್ಯ ಅವರಿಗೆ ತಲುಪಿದ್ದು, ಅವರು ಅಂತಿಮ ತೀರ್ಮಾನ ಕೈಗೊಳ್ಳಬೇಕಾಗಿದೆ.
ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಖೈದಿಗಳು, ಉತ್ತಮ ನಡವಳಿಕೆ ತೋರಿದರೆ ಅವರನ್ನು ಸ್ವಾತ್ರಂತ್ರ್ಯ ದಿನಾಚರಣೆ, ಗಣ ರಾಜ್ಯೋತ್ಸವದಂದು ಬಿಡುಗಡೆ ಮಾಡುವುದು ಸಂಪ್ರದಾಯ. ಆದರೆ, ಕಳೆದ ಆರು ವರ್ಷಗಳಿಂದ ರಾಜ್ಯದಲ್ಲಿ ಯಾವ ಖೈದಿಗಳು ಬಿಡುಗಡೆಗೊಂಡಿಲ್ಲ. ಹಿಂಡಲಗಾ ಜೈಲಿನಲ್ಲಿ ಸುಮಾರು 150 ಖೈದಿಗಳು ಬಿಡುಗಡೆಗಾಗಿ ಆರು ವರ್ಷದಿಂದ ಕಾದು ಕುಳಿತಿದ್ದಾರೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications