ವಿಶ್ವಾಸಮತ ಸುಪ್ರೀಂ ಕದ ತಟ್ಟಿದ್ದ ಇಬ್ಬರು ಶಾಸಕರಿಗೆ ಹಿನ್ನಡೆ
ನವದೆಹಲಿ, ಜುಲೈ 22: ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ(ಜುಲೈ 22) ರಂದೇ ವಿಶ್ವಾಸಮತ ಯಾಚನೆ ಮಾಡುವಂತೆ ಆದೇಶ ನೀಡುವಂತೆ ಕೋರಿದ್ದ ಇಬ್ಬರು ಪಕ್ಷೇತರ ಶಾಸಕರಿಗೆ ಸುಪ್ರೀಂಕೋರ್ಟಿನಲ್ಲಿ ಹಿನ್ನಡೆಯಾಗಿದೆ.
ಪಕ್ಷೇತರ ಶಾಸಕರಾದ ಮುಳುಬಾಗಿಲಿನ ಎಚ್.ನಾಗೇಶ್ ಮತ್ತು ರಾಣೇಬೆನ್ನೂರಿನ ಆರ್.ಶಂಕರ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿ, ವಿಶ್ವಾಸಮತ ಯಾಚನೆ ಕುರಿತು ತುರ್ತು ಅರ್ಜಿಯೊಂದನ್ನು ಹಾಕಿದ್ದರು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರಿದ್ದ ನ್ಯಾಯಪೀಠವು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಅರ್ಜಿಯನ್ನು ಕೋರಿರುವಂತೆ ತಕ್ಷಣಕ್ಕೆ ಆದೇಶ ನೀಡಲು ನಿರಾಕರಿಸಿದ್ದು, "ವಿಶ್ವಾಸಮತದ ಕುರಿತಾದ ಅರ್ಜಿಗಳನ್ನು ಈ ಹಿಂದೆಯೂ ತುರ್ತು ವಿಚಾರಣೆಗೆ ಎತ್ತಿಕೊಂಡಿರಲಿಲ್ಲ" ಎಂದಿದ್ದಾರೆ.
ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ
ಈ ನಡುವೆ ಪತ್ರಿಕೆ ವರದಿ ಆಧಾರದಲ್ಲಿ, ಕುದುರೆ ವ್ಯಾಪಾರ ಮತ್ತು ರಾಜಕಾರಣಿಗಳ ಪಕ್ಷಾಂತರಕ್ಕೆ ಸಂಬಂಧಿಸಿದಂತೆ ವಕೀಲರಾದ ಲಿಲಿ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು 7ನೇ ಬಾರಿ ಪ್ರಯತ್ನ ಮಾಡುತ್ತಿದ್ದು, ಸರ್ಕಾರ ರಚನೆ ಮಾಡುತ್ತೀರೋ ಅಥವಾ ರಾಷ್ಟ್ರಪತಿ ಆಳ್ವಿಕೆ ಬರುತ್ತದೋ ಕಾದು ನೋಡೋಣ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿಯ ಬಳಿ 105 ಶಾಸಕರಿದ್ದು ಎರಡು ಪಕ್ಷೇತರ ಶಾಸಕರ ಬೆಂಬಲವೂ ದೊರೆತಿದೆ.ಹೀಗಾಗಿ ಮೇಲ್ನೋಟಕ್ಕೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ನಿಶ್ಚತವಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ವಿಧಾನಸಭಾ ಕಲಾಪದಲ್ಲಿ ಯಾವ ಯಾವ ನಾಟಕಗಳು ನಡೆಯಲಿದೆ ಎನ್ನುವುದು ದೇಶದ ಜನರ ಕುತೂಹಲ ಕೆರಳಿಸಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications