ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಾಸಮತ ಸುಪ್ರೀಂ ಕದ ತಟ್ಟಿದ್ದ ಇಬ್ಬರು ಶಾಸಕರಿಗೆ ಹಿನ್ನಡೆ

|
Google Oneindia Kannada News

ನವದೆಹಲಿ, ಜುಲೈ 22: ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ(ಜುಲೈ 22) ರಂದೇ ವಿಶ್ವಾಸಮತ ಯಾಚನೆ ಮಾಡುವಂತೆ ಆದೇಶ ನೀಡುವಂತೆ ಕೋರಿದ್ದ ಇಬ್ಬರು ಪಕ್ಷೇತರ ಶಾಸಕರಿಗೆ ಸುಪ್ರೀಂಕೋರ್ಟಿನಲ್ಲಿ ಹಿನ್ನಡೆಯಾಗಿದೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸ್ಪೀಕರ್ ರಮೇಶ್ ಮುಂದಿರುವ ಆಯ್ಕೆ? ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸ್ಪೀಕರ್ ರಮೇಶ್ ಮುಂದಿರುವ ಆಯ್ಕೆ?

ಪಕ್ಷೇತರ ಶಾಸಕರಾದ ಮುಳುಬಾಗಿಲಿನ ಎಚ್.ನಾಗೇಶ್ ಮತ್ತು ರಾಣೇಬೆನ್ನೂರಿನ ಆರ್.ಶಂಕರ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿ, ವಿಶ್ವಾಸಮತ ಯಾಚನೆ ಕುರಿತು ತುರ್ತು ಅರ್ಜಿಯೊಂದನ್ನು ಹಾಕಿದ್ದರು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರಿದ್ದ ನ್ಯಾಯಪೀಠವು, ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಅರ್ಜಿಯನ್ನು ಕೋರಿರುವಂತೆ ತಕ್ಷಣಕ್ಕೆ ಆದೇಶ ನೀಡಲು ನಿರಾಕರಿಸಿದ್ದು, "ವಿಶ್ವಾಸಮತದ ಕುರಿತಾದ ಅರ್ಜಿಗಳನ್ನು ಈ ಹಿಂದೆಯೂ ತುರ್ತು ವಿಚಾರಣೆಗೆ ಎತ್ತಿಕೊಂಡಿರಲಿಲ್ಲ" ಎಂದಿದ್ದಾರೆ.

ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ

ಈ ನಡುವೆ ಪತ್ರಿಕೆ ವರದಿ ಆಧಾರದಲ್ಲಿ, ಕುದುರೆ ವ್ಯಾಪಾರ ಮತ್ತು ರಾಜಕಾರಣಿಗಳ ಪಕ್ಷಾಂತರಕ್ಕೆ ಸಂಬಂಧಿಸಿದಂತೆ ವಕೀಲರಾದ ಲಿಲಿ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

Karnataka Crisis: Setback for 2 independent MLAs, SC overturns plea on trurst vote

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು 7ನೇ ಬಾರಿ ಪ್ರಯತ್ನ ಮಾಡುತ್ತಿದ್ದು, ಸರ್ಕಾರ ರಚನೆ ಮಾಡುತ್ತೀರೋ ಅಥವಾ ರಾಷ್ಟ್ರಪತಿ ಆಳ್ವಿಕೆ ಬರುತ್ತದೋ ಕಾದು ನೋಡೋಣ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

'ಆಯಾ ರಾಮ್, ಗಯಾ ರಾಮ್' ಪಕ್ಷಾಂತರ ನಿಷೇಧ ಕಾಯ್ದೆ ಹೇಗೆ? 'ಆಯಾ ರಾಮ್, ಗಯಾ ರಾಮ್' ಪಕ್ಷಾಂತರ ನಿಷೇಧ ಕಾಯ್ದೆ ಹೇಗೆ?

ಬಿಜೆಪಿಯ ಬಳಿ 105 ಶಾಸಕರಿದ್ದು ಎರಡು ಪಕ್ಷೇತರ ಶಾಸಕರ ಬೆಂಬಲವೂ ದೊರೆತಿದೆ.ಹೀಗಾಗಿ ಮೇಲ್ನೋಟಕ್ಕೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ನಿಶ್ಚತವಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ವಿಧಾನಸಭಾ ಕಲಾಪದಲ್ಲಿ ಯಾವ ಯಾವ ನಾಟಕಗಳು ನಡೆಯಲಿದೆ ಎನ್ನುವುದು ದೇಶದ ಜನರ ಕುತೂಹಲ ಕೆರಳಿಸಿದೆ.

English summary
Karnataka Crisis: Setback for 2 MLAs, SC overturns plea on trurst vote. Two independent Karnataka MLAs -H Nagesh and R Shankar-have moved Supreme Court seeking a direction from the Court to Karnataka Government to conduct floor test tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X