Karnataka Dam Water Level: ಕರ್ನಾಟಕದಲ್ಲಿ ಭಾರೀ ಮಳೆ: ಜಲಾಶಯಗಳ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
Karnataka Dam Water Level: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಮುಂದುವರಿದಿದ್ದು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಮಳೆಯಿಂದಾಗಿ ಕರ್ನಾಟಕದ ವಿವಿಧ ಜಲಾಯಶಗಳು ಭರ್ತಿ ಆಗುತ್ತಿವೆ. ಈ ಬಾರಿ ಭಾರೀ ಮಳೆಯಿಂದಾಗಿ ಜಲಾಶಯಗಳಲ್ಲಿ ಜೀವ ಕಳೆ ಮೂಡಿದೆ. ಕಳೆದ ಬಾರಿಗಿಂತಲೂ ಈ ಬಾರಿ ಜಲಾಶಯಗಳ ನೀರಿನ ಮಟ್ಟವು ಉತ್ತಮ ರೀತಿಯಲ್ಲಿ ಹೆಚ್ಚಳವಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದೆ. ಕೊಡಗು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಬಿನಿ ಹಾಗೂ ಕೆಆರ್ಎಸ್ ಸೇರಿದಂತೆ ವಿವಿಧ ಜಲಾಯಶಗಳ ನೀರಿನ ಮಟ್ಟವು ಹೆಚ್ಚಳವಾಗಿದೆ. ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವು ಸಹ ಉತ್ತಮವಾಗಿದೆ. ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದರಿಂದ ಸಹಜವಾಗಿಯೇ ವಿವಿಧ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಜುಲೈ 07 ರಂದು ಭಾಗಮಂಡಲದಲ್ಲಿ ಬರೋಬ್ಬರಿ 83 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಜಲಾಶಯಗಳಿಗೆ ಜೀವ ಕಳೆ ಮೂಡಿದೆ.
ಕಬಿನಿ ಜಲಾಶಯ: ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2280.79
ಸಂಗ್ರಹ (Storage): 17.513 / 19.52 TMC
ಒಳಹರಿವು ಕ್ಯೂಸೆಕ್ಸ್ಗಳಲ್ಲಿ: 14,589
ಹೊರ ಹರಿವು: 11,875
ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 122.25
ಸಂಗ್ರಹ (Storage): 45.965 / 49.452 TMC
ಒಳಹರಿವು ಕ್ಯೂಸೆಕ್ಸ್ಗಳಲ್ಲಿ: 24,903
ಹೊರ ಹರಿವು: 23,104
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2853.25
ಸಂಗ್ರಹ (Storage): 6.64 / 8.5 TMC
ಒಳಹರಿವು ಕ್ಯೂಸೆಕ್ಸ್ಗಳಲ್ಲಿ: 7369
ಹೊರ ಹರಿವು: 5000
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2919.81
ಸಂಗ್ರಹ (Storage): 34.994 / 37.10 TMC
ಒಳಹರಿವು ಕ್ಯೂಸೆಕ್ಸ್ಗಳಲ್ಲಿ: 17,540
ಹೊರ ಹರಿವು: 15,275
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications