ಅಣೆಕಟ್ಟುಗಳ ನೀರಿನಲ್ಲಿ ಅಲ್ಪ ಏರಿಕೆ, ಕಾಣೆಯಾದ ಮಳೆ
ಬೆಂಗಳೂರು, ಸೆಪ್ಟೆಂಬರ್ 13: ಕಳೆದ 24 ಗಂಟೆಗಳಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳು ರಾಜ್ಯದಲ್ಲಿ ದುರ್ಬಲವಾಗಿದ್ದು ಮಳೆ ಪ್ರಮಾಣ ಕುಸಿತವಾಗಿದೆ.
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಷ್ಟೆ ಸ್ವಲ್ಪಮಟ್ಟಿಗೆ ಮಳೆಯಾಗಿದೆ. ಉಡುಪಿಯ ಸಿದ್ದಾಪುರದಲ್ಲಿ ಕಳೆದ 24 ಗಂಟೆಗಳಲ್ಲಿ 4 ಸೆಂಟಿ ಮೀಟರ್ ಮಳೆಯಾಗಿದ್ದರೆ, ಉತ್ತರ ಕನ್ನಡದ ಕುಮಟಾದಲ್ಲಿ 2 ಸೆಂಟಿ ಮೀಟರ್, ಉತ್ತರ ಕನ್ನಡದ ಅಂಕೋಲ, ಕಾರವಾರ, ಬನವಾಸಿ, ಶಿವಮೊಗ್ಗದ ಅನವಟ್ಟಿ, ಚಿಕ್ಕಮಗಳೂರಿನ ಕಮ್ಮರಡಿ, ಕೊಪ್ಪ, ಜಯಪುರದಲ್ಲಿ ತಲಾ ಒಂದು ಸೆಂಟಿ ಮೀಟರ್ ಮಳೆಯಾಗಿದೆ.

ಬೆಂಗಳೂರಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಮಂಗಳವಾರ ಮಾತ್ರ ರಜಾ ಹಾಕಿದೆ. ಬೆಂಗಳೂರಿನಲ್ಲಿ ಇವತ್ತು ಮತ್ತು ನಾಳೆ ಅಂದರೆ ಗುರುವಾರ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕರಾವಳಿ ಕರ್ನಾಟಕ ಮತ್ತು ಒಳನಾಡು ಕರ್ನಾಟಕದಲ್ಲಿ ಗುಡುಗು ಸಹಿತ ಅಲ್ಪ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಮಳೆ ಕುಸಿತವಾಗಿದ್ದರೂ ಜಲಾಶಯಗಳ ನೀರಿನಲ್ಲಿ ಅಲ್ಪ ಏರಿಕೆಯಾಗಿದೆ. ಇದಕ್ಕೆ ನಿನ್ನೆ ಮತ್ತು ಮೊನ್ನೆ ಬಿದ್ದ ಮಳೆಯೇ ಕಾರಣ. ಆದರೆ ಸದ್ಯ ಮಳೆ ನಿಂತಿರುವುದರಿಂದ ಮುಂದಿನ ದಿನಗಳಲ್ಲಿ ಅಣೆಕಟ್ಟುಗಳಲ್ಲಿರುವ ನೀರಿನ ಪ್ರಮಾಣ ಇಳಿಕೆಯಾಗಬಹುದು.
ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ..
| ಅಣೆಕಟ್ಟುಗಳು | ಗರಿಷ್ಠ ಮಟ್ಟ | ಇಂದಿನ ಮಟ್ಟ |
| ಲಿಂಗನಮಕ್ಕಿ | 1819.00 | 1795.25 |
| ಸುಪಾ | 1849.92 | 1793.04 |
| ವಾರಾಹಿ | 1949.50 | 1923.82 |
| ಹಾರಂಗಿ | 2859.00 | 2857.27 |
| ಹೇಮಾವತಿ | 2922.00 | 2889.62 |
| ಕೆಆರ್ಎಸ್ | 124.80 | 104.35 |
| ಕಬಿನಿ | 2284.00 | 2278.97 |
| ಭದ್ರಾ | 2158.00 | 2136.50 |
| ತುಂಗಭದ್ರಾ | 1633.00 | 1624.88 |
| ಘಟಪ್ರಭಾ | 2175.00 | 2154.80 |
| ಮಲಪ್ರಭಾ | 2079.50 | 2055.30 |
| ಆಲಮಟ್ಟಿ | 1704.81 | 1704.81 |
| ನಾರಾಯಣಪುರ | 1615.00 | 1615.04 |
-
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ











Click it and Unblock the Notifications