Karnataka Dam Water Level: ಮಳೆಯಿಂದ ಹಲವು ಡ್ಯಾಂಗಳು ಭರ್ತಿ: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಬೆಂಗಳೂರು, ಆಗಸ್ಟ್ 22: ದೇಶಾದ್ಯಂತ ಮಳೆಯ ಅಬ್ಬರ ಹೆಚ್ಚುತ್ತಿದ್ದು, ಕೆಲವೆಡೆ ದಿನದಿಂದ ದಿನಕ್ಕೆ ಮಳೆಯಾರ್ಭಟ ತುಸು ಕಡಿಮೆಯಾಗುತ್ತಿದೆ. ಕರ್ನಾಟಕದ ಕೆಲವು ಭಾಗದಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ.
ಈ ಬಾರಿ ಮುಂಗಾರು ಮಳೆ ಹೆಚ್ಚಾಗಿದ್ದು, ಇದೀಗ ರಾಜ್ಯದಲ್ಲಿ ಮಳೆಯ ಅಬ್ಬರ ಸದ್ಯ ಕಡಿಮೆಯಾಗಿದೆ. ಆದರೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಭಾಗದಲ್ಲಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಇನ್ನೂ ಮಳೆ ಮುಂದುವರೆದಿದೆ. ಹೀಗಾಗಿ, ಆ ಭಾಗಕ್ಕೆ ನೀರಿನ ಹರಿವು ಹೆಚ್ಚುತ್ತಲೇ ಇದೆ. ಮಳೆಯಿಂದಾಗಿ ಭದ್ರಾ, ಹಾರಂಗಿ, ಕಬಿನಿ, ಕೆಆರ್ಎಸ್, ಹೇಮಾವತಿ, ಲಿಂಗನಮಕ್ಕಿ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಆಗಸ್ಟ್ 22) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

| ಕರ್ನಾಟಕದ ಜಲಾಶಯಗಳು | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಒಳಹರಿವು(ಕ್ಯೂಸೆಕ್ಸ್) |
| ಆಲಮಟ್ಟಿ ಜಲಾಶಯ | 123.08 | 123.08 | 34,968 |
| ತುಂಗಭದ್ರಾ ಜಲಾಶಯ | 105.79 | 78.80 | 30,893 |
| ಮಲಪ್ರಭಾ ಜಲಾಶಯ | 37.73 | 34.45 | 1,644 |
| ಕೆ ಆರ್ ಎಸ್ | 49.45 | 47.84 | 8,747 |
| ಲಿಂಗನಮಕ್ಕಿ ಜಲಾಶಯ | 151.75 | 144.42 | 7,721 |
| ಕಬಿನಿ ಜಲಾಶಯ | 19.52 | 18.42 | 2,676 |
| ಭದ್ರಾ ಜಲಾಶಯ | 71.54 | 64.33 | 6,118 |
| ಘಟಪ್ರಭಾ ಜಲಾಶಯ | 51.00 | 50.98 | 2,701 |
| ಹೇಮಾವತಿ ಜಲಾಶಯ | 37.10 | 36.04 | 6,483 |
| ವರಾಹಿ ಜಲಾಶಯ | 31.10 | 21.80 | 376 |
| ಹಾರಂಗಿ ಜಲಾಶಯ | 8.50 | 8.04 | 1,389 |
| ನಾರಾಯಣಪುರ | 33.31 | 32.98 | 35,594 |
| ವಾಣಿವಿಲಾಸ ಸಾಗರ | 30.42 | 20.27 | 693 |
| ಸೂಫಾ | 145.33 | 122.52 | 2,874 |
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications