ನಕಲಿ ರೇಶನ್ ಕಾರ್ಡ್ ಹುಡುಕಿಕೊಡಿ, ಬಹುಮಾನ ಗೆಲ್ಲಿ
ಬೆಂಗಳೂರು, ಜೂನ್. 14: ನಕಲಿ ರೇಶನ್ ಕಾರ್ಡ್ ಮಾಡಿಸಿಕೊಂಡು ಸರ್ಕಾರಕ್ಕೆ, ಸಮಾಜಕ್ಕೆ ಮೋಸ ಮಾಡುತ್ತಿರುವವರ ಮಾಹಿತಿ ನೀಡಿದರೆ 400 ರು. ಬಹುಮಾನ ಪಡೆದುಕೊಳ್ಳಬಹುದು.
ಅನರ್ಹ ಪಡಿತರ ಚೀಟಿಗಳನ್ನು ಕಂಡುಹಿಡಿಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ಅಕ್ರಮಗಳು ನುಸುಳುತ್ತಿವೆ. ಹಾಗಾಗಿ ಬಹುಮಾನ ನೀಡುವ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. [ಗಮನಿಸಿ, 120 ರು.ಗಿಂತ ಹೆಚ್ಚಿನ ದರಕ್ಕೆ ಬೇಳೆಕಾಳು ಮಾರುವಂತಿಲ್ಲ]

ದೂರುಗಳನ್ನು ಇಲಾಖೆಯ ವೆಬ್ ಸೈಟ್ ಮೂಲಕವೇ ನೀಡಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಪಡಿತರ ಹಂಚಿಕೆಗೆ ನೆರವಾಗುವಂತೆ ನ್ಯಾಯಬೆಲೆ ಅಂಗಡಿಗಳನ್ನು ನೋಡಿಕೊಳ್ಳಲು ಮೂರು ಸದಸ್ಯರ ಸಮತಿಯೊಂದನ್ನು ನೇಮಿಸಲಾಗಿದೆ. ಸಮಿತಿ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಯಾವಾಗ ಬೇಕಾದರೂ ಭೇಟಿ ನೀಡಿ ಪರಿಶೀಲನೆ ನಡೆಸುವ ಅಧಿಕಾರ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದರು.[ತೊಗರಿ ಬೇಳೆಗೆ ಬಂಗಾರದ ಬೆಲೆ ಬರಲು ಕಾರಣವೇನು?]
ಆಧಾರ್ ಲಿಂಕ್ ಮಾಡಿಕೊಳ್ಳಿ
ಇನ್ನು ಪಡಿತರ ಚೀಟಿ ಹೊಂದಿರುವವರು ಆಧಾರ್ ಸಂಖ್ಯೆ ನೀಡಲು ಈ ತಿಂಗಳ 30 ರವರೆಗೆ ಸರ್ಕಾರ ಅವಕಾಶ ನೀಡಿದ್ದು. ಅಷ್ಟರೊಳಗಾಗಿ ಸಂಖ್ಯೆ ನೀಡದಿದ್ದರೆ, ಪಡಿತರ ಸೌಲಭ್ಯಗವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.[ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]
ತೊಗರಿಗೆ ಮನವಿ
ಕೇಂದ್ರ ಸರ್ಕಾರ ಬೇಳೆ ಕಾಳುಗಳನ್ನು ಕೆಜಿಗೆ 120 ರು. ಗಿಂತ ಅಧಿಕ ದರಕ್ಕೆ ಮಾರಾಟ ಮಾಡಬಾರದು ಎಂದು ಹೇಳಿದೆ. ಸದ್ಯ ರಾಜ್ಯಕ್ಕೆ 1 ಸಾವಿರ ಟನ್ ರಷ್ಟು ತೊಗರಿ ಬೇಳೆ ರವಾನೆಯಾಗುತ್ತಿದೆ. ಬೆಲೆಯನ್ನು ಇಳಿಕೆ ಮಾಡುವ ಸಲುವಾಗಿ ಮತ್ತೆ 1 ಟನ್ ರಷ್ಟು ತೊಗರಿ ಬೇಳೆ ನೀಡಲು ಮನವಿ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.
ಇಳಿದ ದ್ವಿದಳ ಧಾನ್ಯ ಬೆಲೆ:
ಕಳೆದ ಒಂದು ತಿಂಗಳಲ್ಲಿ ದೇಶದಾದ್ಯಂತ ದ್ವಿದಳ ಧಾನ್ಯಗಳ ಬೆಲೆ ಇಳಿಕೆ ಆಗಿದ್ದು ಬೇಡಿಕೆ ಮತ್ತು ಪೂರೈಕೆ ನಡುವೆ ಕೊರತೆ ತಗ್ಗಿರುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಕಳೆದ ವರ್ಷ 170 ಲಕ್ಷ ಟನ್ ಬೇಳೆ ಕಾಳು ಉತ್ಪಾದನೆ ಆಗಿತ್ತು. ಆದರೆ ಉತ್ಪಾದನೆ ಮತ್ತು ಪೂರೈಕೆ ನಡುವೆ 176 ಲಕ್ಷ ಟನ್ ಕೊರತೆ ಏಕಾಏಕಿ ದರ ಏರಿಕೆಗೆ ಕಾರಣವಾಗಿತ್ತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru PG: ಬೆಂಗಳೂರಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ: ಪಿಜಿಗಳಲ್ಲಿ ಊಟ ಬಂದ್, ವೈರಲ್ ಪೋಸ್ಟ್ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ










Click it and Unblock the Notifications