1ನೇ ತರಗತಿ ಅಡ್ಮಿಷನ್ಗೆ 6 ವರ್ಷ ಕಡ್ಡಾಯವಲ್ಲ: ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ
ಶಿಕ್ಷಣ ಇಲಾಖೆಯು ಒಂದನೇ ತರಗತಿ ಪ್ರವೇಶದ ವಿಚಾರದಲ್ಲಿ ಪೋಷಕರಿಗೆ ಸಿಹಿಸುದ್ದಿ ನೀಡಿದೆ. ಇಲ್ಲಿವರೆಗೆ 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಇದ್ದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಒಂದು ವರ್ಷಕ್ಕೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿ ಮಾಡಲಾಗಿದೆ. ಈ ವರ್ಷ 1ನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳಿಗೆ 5 ವರ್ಷ 5 ತಿಂಗಳು ತುಂಬಿದ್ದರೂ ಸಾಕು ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಒಂದನೇ ತರಗತಿಗೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಿರುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.
ಮೊದಲು ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ಪೂರೈಸುವುದು ಕಡ್ಡಾಯ ಎಂಬ ನಿಯಮವಿತ್ತು. ಈಗ ಈ ನಿಯಮ ಸಡಿಲ ಮಾಡಲಾಗಿದೆ. ಅದರಂತೆ 5 ವರ್ಷ 5 ತಿಂಗಳ ವಯೋಮಾನದ ಮಕ್ಕಳು ನೇರವಾಗಿ ಒಂದನೇ ತರಗತಿಗೆ ಪ್ರವೇಶ ಪಡೆಯಬಹುದಾಗಿದೆ. ಈ ವರ್ಷಕ್ಕೆ ಅನ್ವಯವಾಗುವಂತೆ ಈ ನಿಯಮ ಜಾರಿಯಾಗಲಿದೆ. ಇದು ರಾಜ್ಯ ಪಠ್ಯಕ್ರಮಕ್ಕೆ ಮಾತ್ರವೇ ಅನ್ವಯವಾಗುತ್ತದೆ. ಸಿಬಿಎಸ್ಇ, ಐಸಿಎಸ್ಇ ಬೋರ್ಡ್ಗೆ ಈ ನಿಯಮ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ 6 ವರ್ಷ ತುಂಬಿದ ಮಕ್ಕಳಿಗೆ ಮಾತ್ರವೇ ಒಂದನೇ ತರಗತಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈಗ ಹೊಸ ನಿಯಮದಂತೆ ಅಂದ್ರೆ 5.5 ವರ್ಷವಾಗಿದ್ರೂ ಮಕ್ಕಳು ಪ್ರವೇಶ ಪಡೆಯಬಹುದಾಗಿದೆ. 1ನೇ ತರಗತಿಯ ಪ್ರವೇಶದ ಜೊತೆಗೆ ಎಲ್ಕೆಜಿ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿಯನ್ನು 4 ವರ್ಷಕ್ಕೆ ನಿಗದಿಪಡಿಸಲಾಗುತ್ತಿದೆ. ಒಂದನೇ ತರಗತಿಗೆ ಮಕ್ಕಳನ್ನು ಅಡ್ಮಿಷನ್ ಮಾಡುವ ಸಂದರ್ಭದಲ್ಲಿ ಪೋಷಕರು ಹಲವು ಗೊಂದಲಗಳಲ್ಲಿ ಸಿಲುಕಿದ್ದರು.
ಹುಟ್ಟಿದ ತಿಂಗಳ ಆಧಾರದ ಮೇಲೆ ಕೆಲ ಮಕ್ಕಳನ್ನು ಒಂದನೇ ತರಗತಿಗೆ ಸಕಾಲಕ್ಕೆ ಸೇರಿಸಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ವಯೋಮಿತಿಯನ್ನು ಸಡಿಲಿಸುವಂತೆ ಪೋಷಕರು ಶಿಕ್ಷಣ ಇಲಾಖೆಗೆ ಒತ್ತಾಯಿಸಿದ್ದರು. ಇದಕ್ಕೆ ಕೊನೆಗೂ ಮಣಿದಿರುವ ಶಿಕ್ಷಣ ಇಲಾಖೆಯು ಪೋಷಕರ ಇಚ್ಛೆಯಂತೆ ಮಕ್ಕಳ ವಯೋಮಿತಿಯನ್ನು ಕಡಿಮೆ ಮಾಡಿದೆ. ಸದ್ಯ ಹಳೆ ನಿಯಮದ ಬಲದಾಗಿ ಏಳು ತಿಂಗಳ ಕಾಲ ವಯೋಮಿತಿ ಕಡಿಮೆ ಮಾಡಿ ಅವಕಾಶ ಕಲ್ಪಿಸಿದೆ.

ರಾಜ್ಯ ಶಿಕ್ಷಣ ನೀತಿ ಆಯೋಗವು ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ಸಲ್ಲಿಸಿತ್ತು. ಇದನ್ನು ಪರಿಶೀಲಿಸಿರುವ ಶಾಲಾ ಶಿಕ್ಷಣ ಇಲಾಖೆಯು ಈ ನಿರ್ಧಾರವನ್ನು ಪ್ರಕಟಿಸಿದೆ. ಶಾಲಾ ಶಿಕ್ಷಣ ಇಲಾಖೆಯು 2022ರಲ್ಲಿ ಹೊರಡಿಸಿದ್ದ ಆದೇಶದ ಪ್ರಕಾರ 2025ರ ಜೂನ್ 1ರೊಳಗೆ 6 ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು ಮಾತ್ರವೇ 2025-26ನೇ ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿತ್ತು. ಇದರಿಂದ ಮಕ್ಕಳ ಪ್ರವೇಶಕ್ಕೆ ಭಾರಿ ಸಮಸ್ಯೆ ಎದುರಾದ ಕಾರಣ ಮೊದಲಿನಂತೆಯೇ ಇಚ್ಛೆಯನುಸಾರ ಪ್ರವೇಶಾತಿಗೆ ವಯೋಮಿತಿ ಸಡಿಲಿಸುವಂತೆ ಪೋಷಕರು ಕೋರಿದ್ದರು. ಈ ಬೇಡಿಕೆ ಈಡೇರಿದ್ದು, ಮಕ್ಕಳ ಪ್ರವೇಶಕ್ಕೆ ಇದ್ದ ಗೊಂದಲಗಳಿಗೆ ರಿಲೀಫ್ ಸಿಕ್ಕಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications