ಚುನಾವಣಾ ಭಿತ್ತಿ ಪತ್ರ, ವಿಡಿಯೋ ಬಿಡುಗಡೆ, ಮುಂದಿನ ವಾರ ಭಟ್ರ ಹಾಡು
ಬೆಂಗಳೂರು, ಮಾರ್ಚ್ 28: 'ಎಲ್ಲರೂ ಚೆನ್ನಾಗಿ ಆಡಿದರೆ ಮ್ಯಾಚ್ ಗೆಲ್ಲುತ್ತದೆ, ಎಲ್ಲರೂ ವೋಟ್ ಮಾಡಿದರೆ ಪ್ರಜಾಪ್ರಭುತ್ವ ಗೆಲ್ಲುತ್ತದೆ' ಇದು ಕರ್ನಾಟಕ ವಿಧಾನಸಭೆ ಚುನಾವಣೆ 2018ರ ರಾಯಭಾರಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಮಾತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಮೇಲಿನ ವಾಕ್ಯಗಳಿರುವ ಚುನಾವಣಾ ಭಿತ್ತಿಪತ್ರಗಳನ್ನು ಇಂದು ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದರು.
ರಾಹುಲ್ ದ್ರಾವಿಡ್ ಅವರ ಭಿತ್ತಿಪತ್ರದ ಜೊತೆಗೆ ವಿಡಿಯೋವನ್ನು ಸಹ ಅವರು ಬಿಡುಗಡೆ ಮಾಡಿದರು. ರಾಹುಲ್ ದ್ರಾವಿಡ್ ಅವರು ಮತದಾನದ ಬಗ್ಗೆ ಅರಿವು ಮತ್ತು ಮತದಾನದ ಅವಶ್ಯಕತೆಯ ಬಗ್ಗೆ ಸಂದೇಶ ನೀಡಿರುವ ವಿಡಿಯೋ ಇದಾಗಿದ್ದು, ವಿಡಿಯೋವನ್ನು ಎಲ್ಲಾ ಮಲ್ಟಿಫ್ಲೆಕ್ಸ್ಗಳಲ್ಲಿ, ಟಿವಿ ಜಾಹಿರಾತಾಗಿ ಪ್ರದರ್ಶಿಸಲಾಗುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿಯೂ ಪ್ರಚಾರ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಚುನಾವಣೆಗಾಗಿ ಚಲನಚಿತ್ರ ನಿರ್ದೇಶಕ, ಗೀತರಚನೆಕಾರ ಯೋಗರಾಜ್ ಭಟ್ ಅವರ ಸಾರಥ್ಯದಲ್ಲಿ ನಿರ್ಮಿಸಲಾಗುತ್ತಿರುವ 4 ನಿಮಿಷದ ವಿಡಿಯೋವನ್ನು ಮುಂದಿನ ಒಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಂಜೀವ್ ಕುಮಾರ್ ಅವರು ಇದೇ ಸಮಯದಲ್ಲಿ ಹೇಳಿದರು.
ಯೋಗರಾಜ್ ಭಟ್ ಚುನಾವಣಾ ಗೀತೆಗೆ ಹರಿಕೃಷ್ಣ ಸಂಗೀತ ನೀಡಿದ್ದು ವಿಜಯ ಪ್ರಕಾಶ್ ಹಾಡಿದ್ದಾರೆ. ಇಮ್ರಾನ್ ಕೊರಿಯೋಗ್ರಾಫರ್ ಆಗಿದ್ದು ಎಲ್ಲಾ ಮೂವತ್ತು ಜಿಲ್ಲೆಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಆಯಾ ಜಿಲ್ಲೆಯ ಸ್ಥಳೀಯ ವಿಶೇಷ ಸಾಂಸ್ಕೃತಿಕ, ಐತಿಹಾಸಿಕ ಅಂಶವನ್ನು ಚಿತ್ರೀಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications