ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಭಿತ್ತಿ ಪತ್ರ, ವಿಡಿಯೋ ಬಿಡುಗಡೆ, ಮುಂದಿನ ವಾರ ಭಟ್ರ ಹಾಡು

By Manjunatha
|
Google Oneindia Kannada News

ಬೆಂಗಳೂರು, ಮಾರ್ಚ್ 28: 'ಎಲ್ಲರೂ ಚೆನ್ನಾಗಿ ಆಡಿದರೆ ಮ್ಯಾಚ್ ಗೆಲ್ಲುತ್ತದೆ, ಎಲ್ಲರೂ ವೋಟ್ ಮಾಡಿದರೆ ಪ್ರಜಾಪ್ರಭುತ್ವ ಗೆಲ್ಲುತ್ತದೆ' ಇದು ಕರ್ನಾಟಕ ವಿಧಾನಸಭೆ ಚುನಾವಣೆ 2018ರ ರಾಯಭಾರಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಮಾತು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಮೇಲಿನ ವಾಕ್ಯಗಳಿರುವ ಚುನಾವಣಾ ಭಿತ್ತಿಪತ್ರಗಳನ್ನು ಇಂದು ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದರು.

ಅಭ್ಯರ್ಥಿಗಳ ಖರ್ಚು-ವೆಚ್ಚದ ಮೇಲೆ ಚುನಾವಣಾ ಆಯೋಗ ಕಣ್ಣು ಅಭ್ಯರ್ಥಿಗಳ ಖರ್ಚು-ವೆಚ್ಚದ ಮೇಲೆ ಚುನಾವಣಾ ಆಯೋಗ ಕಣ್ಣು

ರಾಹುಲ್ ದ್ರಾವಿಡ್ ಅವರ ಭಿತ್ತಿಪತ್ರದ ಜೊತೆಗೆ ವಿಡಿಯೋವನ್ನು ಸಹ ಅವರು ಬಿಡುಗಡೆ ಮಾಡಿದರು. ರಾಹುಲ್ ದ್ರಾವಿಡ್ ಅವರು ಮತದಾನದ ಬಗ್ಗೆ ಅರಿವು ಮತ್ತು ಮತದಾನದ ಅವಶ್ಯಕತೆಯ ಬಗ್ಗೆ ಸಂದೇಶ ನೀಡಿರುವ ವಿಡಿಯೋ ಇದಾಗಿದ್ದು, ವಿಡಿಯೋವನ್ನು ಎಲ್ಲಾ ಮಲ್ಟಿಫ್ಲೆಕ್ಸ್‌ಗಳಲ್ಲಿ, ಟಿವಿ ಜಾಹಿರಾತಾಗಿ ಪ್ರದರ್ಶಿಸಲಾಗುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿಯೂ ಪ್ರಚಾರ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

karnataka Election 2018 Poster and video released

ಚುನಾವಣೆಗಾಗಿ ಚಲನಚಿತ್ರ ನಿರ್ದೇಶಕ, ಗೀತರಚನೆಕಾರ ಯೋಗರಾಜ್ ಭಟ್ ಅವರ ಸಾರಥ್ಯದಲ್ಲಿ ನಿರ್ಮಿಸಲಾಗುತ್ತಿರುವ 4 ನಿಮಿಷದ ವಿಡಿಯೋವನ್ನು ಮುಂದಿನ ಒಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಂಜೀವ್ ಕುಮಾರ್ ಅವರು ಇದೇ ಸಮಯದಲ್ಲಿ ಹೇಳಿದರು.

2018ರ ಚುನಾವಣೆಯ ಪ್ರಮುಖ ಸಂಗತಿಗಳು ಇವು 2018ರ ಚುನಾವಣೆಯ ಪ್ರಮುಖ ಸಂಗತಿಗಳು ಇವು

ಯೋಗರಾಜ್ ಭಟ್ ಚುನಾವಣಾ ಗೀತೆಗೆ ಹರಿಕೃಷ್ಣ ಸಂಗೀತ ನೀಡಿದ್ದು ವಿಜಯ ಪ್ರಕಾಶ್ ಹಾಡಿದ್ದಾರೆ. ಇಮ್ರಾನ್ ಕೊರಿಯೋಗ್ರಾಫರ್ ಆಗಿದ್ದು ಎಲ್ಲಾ ಮೂವತ್ತು ಜಿಲ್ಲೆಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಆಯಾ ಜಿಲ್ಲೆಯ ಸ್ಥಳೀಯ ವಿಶೇಷ ಸಾಂಸ್ಕೃತಿಕ, ಐತಿಹಾಸಿಕ ಅಂಶವನ್ನು ಚಿತ್ರೀಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

English summary
Karnataka election commissioner Sanjiv Kumar today released Karnataka assembly election 2018's poster and promotional video. Yograj Bhat's election theme song will be out next week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X