ಬಿಜೆಪಿ ವರುಣಾ ಒಂದೇ ಅಲ್ಲ, 224 ಕ್ಷೇತ್ರಗಳಲ್ಲೂ ಗೆಲ್ಲಲು ಅಸಾಧ್ಯವಲ್ಲ:ಬಿ.ವೈ.ವಿಜಯೇಂದ್ರ
ಮೈಸೂರು, ಮಾರ್ಚ್31: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ಷೇತ್ರಗಳಾದ ಕೆ.ಆರ್. ಪೇಟೆ, ಶಿರಾ ಕ್ಷೇತ್ರಗಳಲ್ಲಿ ಕಮಲ ಅರಳಿಸಿದಂತೆ ಈ ಬಾರಿಯ ಚುನಾವಣೆಯಲ್ಲಿಯೂ ವರುಣಾದಲ್ಲಿ ಕಮಲ ಅರಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಅದರಂತೆ ವರುಣಾ ಕ್ಷೇತ್ರದಲ್ಲಿಯೂ ಬಿ.ವೈ ವಿಜಯೇಂದ್ರ ಚುನಾವಣಾ ಪ್ರಚಾರವನ್ನ ನಡೆಸುತ್ತಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ವರುಣಾ ಒಂದೇ ಅಲ್ಲ, 224 ಕ್ಷೇತ್ರಗಳಲ್ಲೂ ಗೆಲ್ಲಲು ಸಶಕ್ತವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ದೊಡ್ಡ ಕಾರ್ಯಕರ್ತರ ಪಡೆಯೇ ಇದೆ.ಅಲ್ಲಿ ಬಿಜೆಪಿ ಗೆಲ್ಲಲು ಎಲ್ಲಾ ಅವಕಾಶಗಳೂ ಇವೆ. ವರುಣಾ ಸಿದ್ದರಾಮಯ್ಯ ಗೆ ಸುಲಭದ ತುತ್ತು ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಬಗ್ಗೆ ನಾನು ಪ್ರತಿಕ್ರಿಸಲು ಹೋಗಲ್ಲ. ಆದರೆ ರಾಜ್ಯದ ಯಾವುದೇ ಕ್ಷೇತ್ರ ಬಿಜೆಪಿ ಅಸಾಧ್ಯವಲ್ಲ. ಮಂಡ್ಯ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲ್ಲುತ್ತೆ ಅಂತಾ ನಾವೇ ನಿರೀಕ್ಷೆ ಮಾಡಿರಲಿಲ್ಲ.ಆದರೂ ಗೆಲ್ಲಲಿಲ್ಲವೇ, ಬೈ ಎಲೆಕ್ಷನ್ ನಲ್ಲಿ ಶಿರಾದಲ್ಲಿ ಗೆಲ್ಲಲಿಲ್ಲವೇ ಶಿರಾದಲ್ಲಿ ಈ ಹಿಂದೆ ಬಿಜೆಪಿಗೆ ಠೇವಣಿ ಕೂಡ ಸಿಗುತ್ತಿರಲಿಲ್ಲ. ಈಗ ನಾವೇ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದರು.
ವರುಣಾ ಕ್ಷೇತ್ರ ಸ್ಪರ್ಧೆ ಮಾಡುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ವರುಣಾ ಕ್ಷೇತ್ರದಲ್ಲಿ ನಿಲ್ಲಬೇಕೆ ಅಥವಾ ಬೇಡವೇ ಅದನ್ನು ಪಕ್ಷದ ಹಿರಿಯ ನಾಯಕರು ತೀರ್ಮಾನ ಮಾಡ್ತಾರೆ. ನನಗೆ ಮೊದಲು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಸಿಗಲಿ. ಶಿಕಾರಿಪುರ ಅಥವಾ ವರುಣಾ ಎಲ್ಲಿ ನಿಲ್ಲಬೇಕೆಂಬುದನ್ನು ನಾನು ವೈಯಕ್ತಿಕವಾಗಿ ನಿರ್ಧರಿಸಲು ಆಗಲ್ಲ. ಮೊದಲು ರಾಜ್ಯ ಮಟ್ಟದಲ್ಲಿ ತೀರ್ಮಾಮವಾಗಿ, ನಂತರ ಕೇಂದ್ರ ನಾಯಕರಿಗೂ ಮನವರಿಕೆ ಮಾಡಬೇಕಿದೆ ಎಂದರು.
ವರುಣಾದಲ್ಲಿ ನಿಲ್ಲಬೇಕೆಂಬ ಕಾರ್ಯ ಕರ್ತರ ಒತ್ತಡ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ಎಲ್ಲಾ ಆ ಬೆಳವಣಿಗೆಗಳ ಬಗ್ಗೆ ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಎಲ್ಲದರ ಬಗ್ಗೆಯೂ ಮಾಹಿತಿ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ವರುಣದಿಂದ ಸ್ಪರ್ಧಿಸುವ ವಿಚಾರದಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ. ನನ್ನ ಮನಸ್ಸಿನಲ್ಲಿ ಏನೂ ಇಲ್ಲ. ಯಡಿಯೂರಪ್ಪ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಯಡಿಯೂರಪ್ಪ, ರಾಘವೇಂದ್ರ, ಹಾಗೂ ವಿಜಯೇಂದ್ರ ತೀರ್ಮಾನ ಮಾಡಲ್ಲ. ಹೈಕಮಾಂಡ್ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಇನ್ನೂ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಮ್ಮ ತಂದೆಯವರ ಕ್ಷೇತ್ರ. ಅಲ್ಲಿಂದಲೇ ನಾನು ಸ್ಪರ್ಧಿಸಬೇಕೆಂದು ತಂದೆಯವರು ಇಚ್ಚೆ. ಆ ಇಚ್ಚೆಯಂತೆ ಒಂದು ಸುತ್ತು ಪ್ರಚಾರ ಮುಗಿಸಿದ್ದೇನೆ. ಏಪ್ರಿಲ್ 3 ರ ನಂತರ ಮತ್ರೆ ಪ್ರಚಾರ ನಡೆಸುತ್ತೇನೆ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುತ್ತೋ, ಇಲ್ಲವೊ ಗೊತ್ತಿಲ್ಲ. ಅಂತಹದರಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡ್ತೀನಿ ಅನ್ನೊದು ಈಗ ಅಪ್ರಸ್ತುತ ವಿಚಾರ ಅಂತ ಹೇಳಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications