CM Ibrahim Resign: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ
ಬೆಂಗಳೂರು, ಮೇ 24: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆವರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ.

ರಾಜೀನಾಮೆ ನೀಡಿದ ಬಳಿಕ ದೇವೇಗೌಡರ ನಿವಾಸದೆದುರು ಮಾತನಾಡಿದ ಸಿಎಂ ಇಬ್ರಾಹಿಂ, "ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿನ ಹೊಣೆಯನ್ನು ನಾನೆ ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ದೇವೇಗೌಡರಿಗೆ ರಾಜೀನಾಮೆ ನೀಡಿದ್ದೇನೆ,'' ಎಂದು ಹೇಳಿದರು.
"ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ, ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆ ಇತ್ತು. ಇದನ್ನು ಕಾಂಗ್ರೆಸ್ನವರು ಹಣಬಲ ಸೇರಿದಂತೆ ಬೇರೆ ಬೇರೆ ವಿಚಾರದಲ್ಲಿ ಗೆದ್ದಿದ್ದಾರೆ. ನಮ್ಮದು ಪ್ರಾದೇಶಿಕ ಪಕ್ಷ, ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರೂ ನಾವು 60 ಲಕ್ಷ ಮತ ಪಡೆದಿದ್ದೇವೆ," ಎಂದರು.
"ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಲೋಕಸಭೆ ಚುನಾವಣೆಗೆ ಸಜ್ಜಾಗಿ ಕೆಲಸ ಪ್ರಾರಂಭಿಸುತ್ತೇವೆ. ನೂತನ ಮುಖ್ಯಮಂತ್ರಿಗೆ ಒಳ್ಳೆಯದಾಗಲಿ. ಕೊಟ್ಟ ಭರವಸೆ ಈಡೇರಿಸಲಿ. 3 ತಿಂಗಳು ಸವರಿಗೆ ಸಮಯ ಕೊಡ್ತೀವಿ. 3 ತಿಂಗಳು ಹನಿಮೂನ್ ಸಮಯ. ಅಧಿಕಾರ ಯಂತ್ರ ಬೇಗನೆ ಆರಂಭವಾಗಲಿ," ಎಂದು ಸಿಎಂ ಇಬ್ರಾಹಿಂ ಹೇಳಿದರು.
"ನಮ್ಮ ಚುನಾವಣಾ ಸಮಾವೇಶಗಳಿಗೆ ಜನ ಸೇರುತ್ತಿದ್ದರು. ಆದರೆ, ಮತವಾಗಿ ಅದನ್ನು ವರ್ಗಾಯಿಸಲು ನಮ್ಮ ಸ್ಥಳೀಯ ಮುಖಂಡರುಗಳಿಗೆ ಸಾಧ್ಯವಾಗಲಿಲ್ಲ. ನಮ್ಮ ಅಭ್ಯರ್ಥಿಗಳು ಮತ ಪಡೆಯಲು ವಿಫಲರಾದರು. 15-20 ಕ್ಷೇತ್ರಗಳಲ್ಲಿ 2 ಸಾವಿರ ಮತಗಳ ಅಂತರದಿಂದ ಸೋತಿದ್ದೇವೆ," ಎಂದು ತಿಳಿಸಿದರು.
"ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅವರು ಜೆಡಿಎಸ್ ಪಕ್ಷವನ್ನು ಮುಗಿಸುವುದಕ್ಕೆ ಒಳ ಒಪ್ಪಂದ ಮಾಡಿಕೊಂಡಿದ್ದರು. ಹಾಸನ, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳ ಪಲಿತಾಂಶವೇ ಇದಕ್ಕೆ ಸಾಕ್ಷಿ. ಹಾಸನದಲ್ಲಿ ಕಾಂಗ್ರೆಸ್ನ ಮತಗಳು ಯಾರಿಗೆ ಹೋಗಿವೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿದ್ದವು," ಎಂದು ಸಿಎಂ ಇಬ್ರಾಹಿಂ ಕಿಡಿಕಾರಿದರು.
ಇನ್ಮುಂದೆ ಜೆಡಿಎಸ್ನಲ್ಲಿ ತಮ್ಮ ಪಾತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಇಬ್ರಾಹಿಂ, ನಾನು ಸದಾ ಜನರೊಂದಿಗೆ ಇರುತ್ತೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಸಿಗುತ್ತಿತ್ತು ಎಂಬುದಕ್ಕೆ ಪ್ರತಿಕ್ರಿಯಿಸಿ, ಗೌರವ ಇಲ್ಲದ ಕಡೆ ನಾನು ಇರಲ್ಲ. ಸ್ಥಾನಕ್ಕಾಗಿ ಬಂದಿಲ್ಲ, ಮಾನಕ್ಕಾಗಿ ಬಿಟ್ಟು ಬಂದೆ, ನನಗೆ ಅಧಿಕಾರದ ಆಸೆ ಇಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications