Congress Candidate Final list: ಕೊನೆಯ ಐದು ಕ್ಷೇತ್ರಗಳ ಟಿಕೆಟ್ ಘೋಷಣೆ, ಯಾರು ಎಲ್ಲಿಂದ ಸ್ಪರ್ಧಿಸುತ್ತಾರೆ
ಬೆಂಗಳೂರು, ಏಪ್ರಿಲ್ 20: ಕರ್ನಾಟಕದ ಎಲ್ಲ ವಿಧಾನಸಭಾ ಕ್ಷೇತ್ರಗಳ ಪೈಕಿ ಬಾಕಿ ಉಳಿಸಿಕೊಂಡಿದ್ದ ಐದು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಅನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ಒಟ್ಟು 6 ಪಟ್ಟಿ ಬಿಡುಗಡೆ ಮಾಡಿದಂತಾಗಿದೆ. ಬುಧವಾರ ಸಂಜೆ ಐದನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.

ಕಾಂಗ್ರೆಸ್ 6ನೇ ಪಟ್ಟಿ:
| ಕ್ರಮ ಸಂಖ್ಯೆ | ಕ್ಷೇತ್ರ | ಅಭ್ಯರ್ಥಿಗಳು |
| 01 | ರಾಯಚೂರು | ಮೊಹಮ್ಮದ್ ಸಲಾಮ್ |
| 02 | ಶಿಡ್ಲಘಟ್ಟ | ಬಿವಿ.ರಾಜೀವ್ ಗೌಡ |
| 03 | ಸಿವಿ ರಾಮನ್ ನಗರ | ಎಸ್. ಆನಂದ್ ಕುಮಾರ್ |
| 04 | ಅರಕಲಗೂಡು | ಎಚ್.ಪಿ.ಶ್ರೀಧರ್ ಗೌಡ |
| 05 | ಮಂಗಳೂರು ನಗರ ಉತ್ತರ | ಇನಾಯತ್ ಅಲಿ |
ಕೊನೆಯ ಪಟ್ಟಿ ಮೂಲಕ ಒಟ್ಟು 224 ಕ್ಷೇತ್ರಗಳಿಗೆ ಕಾಂಗ್ರೆಸ್ ಹುರಿಯಾಳುಗಳನ್ನು
ಅಂತಿಮಗೊಳಿಸಿದೆ.ಇಂದು ನಾಮಪತ್ರ ಸ್ಲಲಿಕೆ
ಈ ಐದನೇ ಪಟ್ಟಿಯಲ್ಲಿ ಮುಳಬಾಗಿಲು ಕ್ಷೇತ್ರಕ್ಕೆ ಡಾ.ಬಿ.ಸಿ ಮುದ್ದು ಗಂಗಾಧರ್, ಕೆ.ಆರ್.ಪುರಂ ಕ್ಷೇತಕ್ರದಿಂದ ಡಿ.ಕೆ ಮೋಹನ್ ಬಾಬು ಕಣಕ್ಕಿಳಿದರೆ, ಪುಲಿಕೇಶಿನಗರ ಕ್ಷೇತ್ರದಲ್ಲಿ ಎ.ಸಿ.ಶ್ರೀನಿವಾಸ್ ಅವರಿಗೆ ಟಿಕೆಟ್ ಘೋಷಣೆ ಆಗಿದೆ.
ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರಿಂದ ಒಂದು ದಿನ ಮುನ್ನವೇ (ಬುಧವಾರ) ಕಾಂಗ್ರೆಸ್ ಟಿಕೆಟ್ ಘೋಷಣೆಯ ಎಲ್ಲವನ್ನು ಅಂತಿಮಗೊಳಿಸಿದೆ.
ಆಯಾ ಕ್ಷೇತ್ರಗಳಿಂದ ಸ್ಪರ್ಧಿಸುವವರು ಇಂದು ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮೊದಲ ನಿಶ್ಚಯಮಾಡಿದ್ದರಿಂದ ಅಭ್ಯರ್ಥಿಗಳಿಗೆ ಬುಧವಾರವೇ ಬಿ.ಫಾರ್ಮ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
124 ಕ್ಷೇತ್ರಗಳಿಗೆ ಮೊದಲ ಪಟ್ಟಿ ಘೋಷಿಸಿದ್ದ ಭಾರತಿಯ ಕಾಂಗ್ರೆಸ್, ಎರಡನೇ ಪಟ್ಟಿಯಲ್ಲಿ 42 ಮಂದಿಗೆ ಟಿಕೆಟ್ ನೀಡಿದೆ. ಮೂರನೇ ಪಟ್ಟಿ ಬಿಡುಗಡೆ ಮಾಡಿ ಅದರಲ್ಲಿ 43 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದರೆ, ಕಳೆದ ಮಂಗಳವಾರವಷ್ಟೇ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು, ಬುಧವಾರ ಸಂಜೆ ಮೂರು ಕ್ಷೇತ್ರ, ರಾತ್ರಿ ಐದು ಕ್ಷೇತ್ರಗಳ ಟಕೆಟ್ ಅನ್ನು ಅಂತಿಮಗೊಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications