ಚುನಾವಣಾ ಎಫೆಕ್ಟ್: ಖಾಸಗಿ ಬಸ್ಗಳ ಜೊತೆಗೆ ಸರ್ಕಾರಿ ಬಸ್ಗಳಲ್ಲೂ ದರ ಏರಿಕೆ, ಮತದಾರರಿಗೆ ಬರೆ
ಬೆಂಗಳೂರು, ಮೇ, 09: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಿದ್ದ ಜನರು ಮತದಾನ ಮಾಡಲು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಒಂದೆಡೆ ಬಸ್ ಸಿಗದೇ ಪ್ರಯಾಣಿಕರು ಪರದಾಡುತ್ತಿದ್ದರೆ, ಇನ್ನೊಂದೆಡೆ ಇದೇ ಸೂಕ್ತ ಸಮಯ ಎಂದು ಖಾಸಗಿ ಬಸ್ಗಳ ಜೊತೆ ಸರ್ಕಾರಿ ಬಸ್ಗಳು ಕೂಡ ದರ ಹೆಚ್ಚಿಸಿದೆ.
ಮತದಾನ ಮಾಡಲು ಬುಧವಾರ ವೇತನ ಸಹಿತ ರಜೆ ಇರುವ ಕಾರಣ ಸಾವಿರಾರು ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಚುನಾವಣೆ ಕಾರ್ಯಕ್ಕಾಗಿ 10,000ಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹೀಗಾಗಿ ಬಸ್ಗಳ ಅಭಾವ ಎದುರಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಮಂಗಳವಾರ ಬೆಳಗ್ಗೆಯಿಂದಲೇ ಜನ ಊರುಗಳತ್ತ ತೆರಳುತ್ತಿದ್ದು, ಬಸ್ ಕೊರತೆ ನೀಗಿಸಲು ಸದ್ಯ ಅಂತರ್ ಜಿಲ್ಲೆ ಪ್ರಯಾಣಕ್ಕೆ ಬಿಎಂಟಿಸಿ ಬಸ್ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಶಿವಮೊಗ್ಗ, ಹೊಸದುರ್ಗ, ಕೂಡ್ಲಿಗೆ, ಚಿತ್ರದುರ್ಗ ಹಾಗೂ ದಾವಣಗೆರೆಗೆ ಸೇರಿದಂತೆ ಇತರ ಜಿಲ್ಲೆಗೆ ಬೆಂಗಳೂರಿನಿಂದ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಸರ್ಕಾರಿ ಬಸ್ನಲ್ಲಿಯೇ ದರ ಹೆಚ್ಚಿಸಲಾಗಿದೆ. ಮತದಾನ ಮಾಡಲು ತೆರಳುತ್ತಿರುವ ಜನರಿಗೆ ಸಾರಿಗೆ ಇಲಾಖೆ ಬರೆ ದರ ಹೆಚ್ಚಿಸಿ ಬರೆ ಎಳೆದಿದೆ.
ತುಮಕೂರು ಜಿಲ್ಲೆಯ ಹುಳಿಯಾರು, ಚಿಕ್ಕನಾಯಕನಹಳ್ಳಿ, ತುಮಕೂರು ನಗರಕ್ಕೆ 150, 170 ರೂಪಾಯಿಂದ ಒಮ್ಮೆಲೆ 250 ರೂಪಾಯಿಗೆ ಒಂದೇ ದರ ನಿಗದಿ ಮಾಡಲಾಗಿದೆ. ಇದೇ ರೀತಿ ಅನೇಕ ಜಿಲ್ಲೆಗಳ ಪ್ರಯಾಣಕ್ಕೂ ದರ ಏರಿಕೆ ಮಾಡಲಾಗಿದೆ. ಸಾರಿಗೆ ಇಲಾಖೆ ಈ ನೀತಿ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

'ಖಾಸಗಿ ಬಸ್ಗಳಲ್ಲಿ ಹೆಚ್ಚು ದುಡ್ಡು ವಸೂಲಿ ಮಾಡುತ್ತಾರೆ ಅಂತ ನಾವು ಕಷ್ಟಪಟ್ಟು ಸರ್ಕಾರಿ ಬಸ್ ಬರಲಿ ಎಂದು ಸಂಜೆಯಿಂದ ಕಾದು ಈಗ ಹತ್ತಿದ್ದೇವೆ. ಆದರೆ ಇವರು ಕೂಡ ಖಾಸಗಿ ಬಸ್ ತರ ನಮ ಬಳಿ ದುಡ್ಡು ಕಿತ್ತರೆ ಓಟು ಹಾಕೋಕೆ ಯಾರು ಹೋಗುತ್ತಾರೆ. ಸರ್ಕಾರ ವೋಟ್ ಹಾಕಿ ಅಂತ ಹೇಳುತ್ತಾರೆ. ಆದರೆ ಹೋಗುವವರಿಗೆ ಒಂದು ಬಸ್ ಕೂಡ ಇಲ್ಲ. ಇರುವ ಬಸ್ಸಿನಲ್ಲಿ ದುಡ್ಡು ಜಾಸ್ತಿ ಮಾಡಿದ್ದಾರೆ ' ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ











Click it and Unblock the Notifications