ಚುನಾವಣಾ ಎಫೆಕ್ಟ್: ಖಾಸಗಿ ಬಸ್ಗಳ ಜೊತೆಗೆ ಸರ್ಕಾರಿ ಬಸ್ಗಳಲ್ಲೂ ದರ ಏರಿಕೆ, ಮತದಾರರಿಗೆ ಬರೆ
ಬೆಂಗಳೂರು, ಮೇ, 09: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಿದ್ದ ಜನರು ಮತದಾನ ಮಾಡಲು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಒಂದೆಡೆ ಬಸ್ ಸಿಗದೇ ಪ್ರಯಾಣಿಕರು ಪರದಾಡುತ್ತಿದ್ದರೆ, ಇನ್ನೊಂದೆಡೆ ಇದೇ ಸೂಕ್ತ ಸಮಯ ಎಂದು ಖಾಸಗಿ ಬಸ್ಗಳ ಜೊತೆ ಸರ್ಕಾರಿ ಬಸ್ಗಳು ಕೂಡ ದರ ಹೆಚ್ಚಿಸಿದೆ.
ಮತದಾನ ಮಾಡಲು ಬುಧವಾರ ವೇತನ ಸಹಿತ ರಜೆ ಇರುವ ಕಾರಣ ಸಾವಿರಾರು ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಚುನಾವಣೆ ಕಾರ್ಯಕ್ಕಾಗಿ 10,000ಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹೀಗಾಗಿ ಬಸ್ಗಳ ಅಭಾವ ಎದುರಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಮಂಗಳವಾರ ಬೆಳಗ್ಗೆಯಿಂದಲೇ ಜನ ಊರುಗಳತ್ತ ತೆರಳುತ್ತಿದ್ದು, ಬಸ್ ಕೊರತೆ ನೀಗಿಸಲು ಸದ್ಯ ಅಂತರ್ ಜಿಲ್ಲೆ ಪ್ರಯಾಣಕ್ಕೆ ಬಿಎಂಟಿಸಿ ಬಸ್ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಶಿವಮೊಗ್ಗ, ಹೊಸದುರ್ಗ, ಕೂಡ್ಲಿಗೆ, ಚಿತ್ರದುರ್ಗ ಹಾಗೂ ದಾವಣಗೆರೆಗೆ ಸೇರಿದಂತೆ ಇತರ ಜಿಲ್ಲೆಗೆ ಬೆಂಗಳೂರಿನಿಂದ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಸರ್ಕಾರಿ ಬಸ್ನಲ್ಲಿಯೇ ದರ ಹೆಚ್ಚಿಸಲಾಗಿದೆ. ಮತದಾನ ಮಾಡಲು ತೆರಳುತ್ತಿರುವ ಜನರಿಗೆ ಸಾರಿಗೆ ಇಲಾಖೆ ಬರೆ ದರ ಹೆಚ್ಚಿಸಿ ಬರೆ ಎಳೆದಿದೆ.
ತುಮಕೂರು ಜಿಲ್ಲೆಯ ಹುಳಿಯಾರು, ಚಿಕ್ಕನಾಯಕನಹಳ್ಳಿ, ತುಮಕೂರು ನಗರಕ್ಕೆ 150, 170 ರೂಪಾಯಿಂದ ಒಮ್ಮೆಲೆ 250 ರೂಪಾಯಿಗೆ ಒಂದೇ ದರ ನಿಗದಿ ಮಾಡಲಾಗಿದೆ. ಇದೇ ರೀತಿ ಅನೇಕ ಜಿಲ್ಲೆಗಳ ಪ್ರಯಾಣಕ್ಕೂ ದರ ಏರಿಕೆ ಮಾಡಲಾಗಿದೆ. ಸಾರಿಗೆ ಇಲಾಖೆ ಈ ನೀತಿ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

'ಖಾಸಗಿ ಬಸ್ಗಳಲ್ಲಿ ಹೆಚ್ಚು ದುಡ್ಡು ವಸೂಲಿ ಮಾಡುತ್ತಾರೆ ಅಂತ ನಾವು ಕಷ್ಟಪಟ್ಟು ಸರ್ಕಾರಿ ಬಸ್ ಬರಲಿ ಎಂದು ಸಂಜೆಯಿಂದ ಕಾದು ಈಗ ಹತ್ತಿದ್ದೇವೆ. ಆದರೆ ಇವರು ಕೂಡ ಖಾಸಗಿ ಬಸ್ ತರ ನಮ ಬಳಿ ದುಡ್ಡು ಕಿತ್ತರೆ ಓಟು ಹಾಕೋಕೆ ಯಾರು ಹೋಗುತ್ತಾರೆ. ಸರ್ಕಾರ ವೋಟ್ ಹಾಕಿ ಅಂತ ಹೇಳುತ್ತಾರೆ. ಆದರೆ ಹೋಗುವವರಿಗೆ ಒಂದು ಬಸ್ ಕೂಡ ಇಲ್ಲ. ಇರುವ ಬಸ್ಸಿನಲ್ಲಿ ದುಡ್ಡು ಜಾಸ್ತಿ ಮಾಡಿದ್ದಾರೆ ' ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications