Karnataka elections 2023: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?, ಇಲ್ಲಿದೆ ಸಂಪೂರ್ಣ ವಿವರ
ಕರ್ನಾಟಕ, ಮೇ, 09: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಸೋಮವಾರ (ಮೇ 08) ಸಂಜೆಯೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಮತ್ತೊಂದೆಡೆ ಅಭ್ಯರ್ಥಿಗಳು ಮತದಾರರನ್ನು ಮತಗಟ್ಟೆ ಬಳಿ ಕರೆತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮೇ 10 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಚುನಾವಣೆಯ ಮೊದಲು, ಅವರು ಮತ ಚಲಾಯಿಸಲು ಅರ್ಹರೇ ಅಥವಾ ಇಲ್ಲವೇ ಎಂಬುದನ್ನು ನೋಡಲು ಮತದಾರರ ಪಟ್ಟಿಯಲ್ಲಿ ಅವರ ಹೆಸರು, ಮತ್ತು ಮತದಾನದ ಕೇಂದ್ರವನ್ನು ವೈಯಕ್ತಿಕ EPIC ಸಂಖ್ಯೆಯ ಮೂಲಕ ಪರಿಶೀಲಿಸಬೇಕಾಗುತ್ತದೆ.

ಭಾರತೀಯ ಚುನಾವಣಾ ಆಯೋಗವು ಎಲ್ಲಾ ಮತದಾರರಿಗೆ ಮತದಾರರ ಫೋಟೋ ಗುರುತಿನ ಚೀಟಿ ಅಥವಾ EPIC ಸಂಖ್ಯೆಯನ್ನು ನೀಡುತ್ತದೆ. EPIC ಸಂಖ್ಯೆಯ ಮೂಲಕ ಮತದಾರರ ಪಟ್ಟಿಯಲ್ಲಿನ ತಮ್ಮ ಹೆಸರುಗಳನ್ನು ಪರಿಶೀಲಿಸಬಹುದು.
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?
1. ಮೊದಲು ECI ವೆಬ್ಸೈಟ್ electoralsearch.inಗೆ ಭೇಟಿ ನೀಡಬೇಕಾಗುತ್ತದೆ.
2. ವೆಬ್ಸೈಟ್ನಲ್ಲಿ EPIC ಸಂಖ್ಯೆಯ ಮೂಲಕ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಇದೆಯೋ ಇಲ್ಲವೂ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು.
3. ನಂತರ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ, ರಾಜ್ಯವನ್ನು ಆಯ್ಕೆಮಾಡಿ.
4. ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ನಂತರ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.
5. ಕ್ಯಾಪ್ಚಾ ಕೋಡ್ವರೆಗಿನ ವಿಧಾನಗಳು ಮುಗಿದ ಮೇಲೆ ಕರ್ನಾಟಕದ ಮತದಾರರ ಪಟ್ಟಿಯಲ್ಲಿ ನಿಮ್ಮ ವಿವರಗಳು ಮತ್ತು ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ತಿಳಿಯುತ್ತಿದೆ.
ಯಾರಿಗಾದರೂ EPIC ಸಂಖ್ಯೆ ತಿಳಿದಿಲ್ಲದಿದ್ದರೆ, ಅವರು ತಮ್ಮ ಹೆಸರು, ಹುಟ್ಟಿದ ದಿನಾಂಕ ಮತ್ತು ತಮ್ಮ ವಿಧಾನಸಭಾ ಕ್ಷೇತ್ರದ ವಿವರಗಳ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹುಡುಕಬಹುದು. ನಂತರ ಅವರ EPIC ಸಂಖ್ಯೆ ಮತ್ತು ಮತಗಟ್ಟೆಯ ವಿವರ ಲಭ್ಯವಾಗಲಿದೆ.
ಮತದಾನಕ್ಕೆ ಕಡ್ಡಾಯವಾಗಿ ಬೇಕಾಗುವ ದಾಖಲೆಗಳು
1 ಆಧಾರ್ ಕಾರ್ಡ್ ಮತ್ತು ಗುರುತಿನ ಚೀಟಿ ಹೊಂದಿರಬೇಕಾಗುತ್ತದೆ.
2. ಆಧಾರ್ ಕಾರ್ಡ್ ಹೊಂದಿಲ್ಲದಿದ್ದರೆ, ಅಂತಹವರು ಪಾಸ್ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್ನಂತಹ ಯಾವುದೇ ಫೋಟೋ ಐಡಿಯನ್ನು ಹೊಂದಿರಬೇಕಾಗುತ್ತದೆ.
ಮತ ಚಲಾಯಿಸಲು ಮತಗಟ್ಟೆಗೆ ಹೋಗುವಾಗ, ಎರಡು ದಾಖಲೆಗಳನ್ನು ಮಾತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕಾಗಿದೆ. ಒಂದು ವೇಳೆ ಯಾರಾದರೂ ತಮ್ಮ ಆಧಾರ್ ಕಾರ್ಡ್ ಹೊಂದಿಲ್ಲದಿದ್ದರೆ, ಅವರು ಪಾಸ್ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್ನಂತಹ ಯಾವುದೇ ಫೋಟೋ ಐಡಿಯನ್ನು ಹೊಂದಿರಬೇಕಾಗುತ್ತದೆ.
ಕರ್ನಾಟಕ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಮತದಾರರಿಗೆ ತಮ್ಮ ವಿವರವನ್ನು ತಿಳಿಯಲು ಹೀಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications