26 ವರ್ಷದ ಯುವಕ ಕುಟುಂಬ ರಾಜಕಾರಣ ವಿರುದ್ಧ ಸೆಡ್ಡು ಹೊಡೆದಿದ್ದಕ್ಕೆ ಕಾಂಗ್ರೆಸ್ಗೆ ಸಹಿಸಲಾಗುತ್ತಿಲ್ಲ; ಅಣ್ಣಾಮಲೈ
ಬೆಂಗಳೂರು, ಮೇ 7: ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಇಡೀ ಕಾಂಗ್ರೆಸ್ ಪಕ್ಷವೇ ತಿರುಗಿ ಬಿದ್ದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದೆ.
ಈ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ. ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಕುಟುಂಬದ ಕೊಲೆಗೆ ಸಂಚು ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿರುವ ಆಡಿಯೋ ತುಣುಕನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಚಿತ್ತಾಪುರದಲ್ಲಿ ಸೋಲುವ ಭೀತಿಯಲ್ಲಿ ಎಲ್ಕೆಜಿ ಮಕ್ಕಳ ರೀತಿ ಈ ಆರೋಪ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ. ಅಣ್ಣಾಮಲೈ ಲೇವಡಿ ಮಾಡಿದ್ದಾರೆ.
"ಮಣಿಕಂಠ ರಾಠೋಡ್ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿರುವ ಈ ಆಡಿಯೋ ಕಟ್ ಆ್ಯಂಡ್ ಪೇಸ್ಟ್ ಆಡಿಯೋ ಆಗಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ಪ್ರಧಾನಿ ನರೇಂದ್ರ ಮೋದಿಗೆ ವ್ಯಕ್ತವಾಗುತ್ತಿರುವ ಜನ ಬೆಂಬಲ ಕಂಡು ಕಾಂಗ್ರೆಸ್ಗೆ ಸೋಲುವ ಭಯ ಶುರುವಾಗಿದ್ದು, ಹೀಗಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ," ಎಂದು ಅಣ್ಣಾಮಲೈ ವಾಗ್ದಾಳಿ ನಡೆಸಿದರು.
"ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಕೇವಲ 26 ವರ್ಷದ ಯುವಕ, ಆತನಿಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಕುಟುಂಬ ರಾಜಕಾರಣದ ವಿರುದ್ಧ ಸೆಡ್ಡು ಹೊಡೆದಿದ್ದಕ್ಕೆ ಸೋಲುವ ಭಯದಲ್ಲಿ ಪ್ರಿಯಾಂಕ್ ಖರ್ಗೆ ಕಳೆದ ಎರಡು ವರ್ಷಗಳಿಂದ ಮಣಿಕಂಠ ರಾಠೋಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಹಲವು ದೂರು ನೀಡಿದ್ದಾರೆ," ಎಂದು ಆರೋಪಿಸಿದರು.

"ಅಷ್ಟೇ ಅಲ್ಲದೆ, ಬೇರೆ ಬೇರೆ ಕಡೆ ಮೂರನೇ ವ್ಯಕ್ತಿಗಳಿಂದಲೂ ದೂರು ಕೊಡಿಸಿದ್ದಾರೆ. ಈಗ ಕಾಂಗ್ರೆಸ್ ನಾಯಕರು ಕಟ್-ಪೇಸ್ಟ್ ಆಡಿಯೋ ಬಿಡುಗಡೆಗೊಳಿಸಿ ಮಣಿಕಂಠ ರಾಠೋಡ್ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ," ಎಂದು ಗುಡುಗಿದರು.
2019ರ ಲೋಕಸಭೆ ಚುನಾವಣೆ ವೇಳೆ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಅಲ್ಲಿನ ಜನ ಸೋಲಿಸಿದರು. ಈಗ 2023ರಲ್ಲಿ ಮಗನೂ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಕೆ. ಅಣ್ಣಾಮಲೈ ಕಿಡಿಕಾರಿದರು.
ಕೊಲೆ ಪ್ರಕರಣ ಆರೋಪಿ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್
ಕರ್ನಾಟಕದಲ್ಲಿ ಚುನಾವಣಾ ಕಾವು ಹೆಚ್ಚಾಗಿದೆ. ಉತ್ತರ ಭಾರತದ ರಣದೀಪ್ ಸುರ್ಜೇವಾಲಾಗೆ ಇಲ್ಲಿನ ಹೀಟ್ ತಡೆಯಲು ಆಗುತ್ತಿಲ್ಲ. ಹೀಗಾಗಿ ನಂದಿನಿ ಮಜ್ಜಿಗೆ ಕುಡಿದು ತಂಪಾಗಬೇಕು ಎಂದು ಅಣ್ಣಾಮಲೈ ವ್ಯಂಗ್ಯವಾಡಿದರು.
"ಮಣಿಕಂಠ ರಾಠೋಡ್ರನ್ನು ರೌಡಿ ಶೀಟರ್ ಎನ್ನುವ ಮುನ್ನ ಕಾಂಗ್ರೆಸ್ ನಾಯಕರು ತಮ್ಮದೇ ಪಕ್ಷದಲ್ಲಿ ಕ್ರಿಮಿನಲ್ ಹಿನ್ನೆಲೆಯ ಎಷ್ಟು ಜನಕ್ಕೆ ಟಿಕೆಟ್ ನೀಡಲಾಗಿದೆ ಎನ್ನುವುದನ್ನು ಮನವರಿಕೆ ಮಾಡಿಕೊಳ್ಳಬೇಕು".

"ಧಾರವಾಡದಲ್ಲಿ ಕೊಲೆ ಪ್ರಕರಣ ಆರೋಪಿ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದರೂ, ಅವರಿಗೆ ಟಿಕೆಟ್ ನೀಡಲಾಗಿದೆ. ಹಿಂದಿನ ಉತ್ತರ ಪ್ರದೇಶ, ಬಿಹಾರದಲ್ಲಿ ಈ ರೀತಿಯ ರಾಜಕಾರಣ ಇತ್ತು," ಎಂದು ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.
35 ಕ್ರಿಮಿನಲ್ ಆರೋಪಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ
"ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಕೊಲೆ, ಸುಲಿಗೆ, ಭೂ ಕಬಳಿಗೆ, ಉಗ್ರ ಸಂಘಟನೆಗೆ ಫಂಡಿಂಗ್ ಮಾಡಿದ ಆರೋಪ ಸೇರಿದಂತೆ ವಿವಿಧ ಆರೋಪಗಳ ಕ್ರಿಮಿನಲ್ ಪ್ರಕರಣ ಇರುವ 35 ಮಂದಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹಲವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ," ಎಂದು ಅಣ್ಣಾಮಲೈ ಆರೋಪಿಸಿದರು.
"ಇದರಲ್ಲಿ ಕೊತ್ವಾಲ್ ರಾಮಚಂದ್ರನ ಶಿಷ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಒಬ್ಬರು. ಒಬ್ಬರನ್ನು ರೌಡಿ ಎಂದು ಬಿಂಬಿಸುವ ಮುನ್ನ ತಮ್ಮ ಪಕ್ಷದ ಸಂಸ್ಕೃತಿಯ ಬಗ್ಗೆ ಕಾಂಗ್ರೆಸ್ ನಾಯಕರು ಒಮ್ಮೆ ನೋಡಿಕೊಳ್ಳುವುದು ಉತ್ತಮ," ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಲೇವಡಿ ಮಾಡಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಯಾವ ಪಕ್ಷ ನೂತನ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications