ಕರ್ನಾಟಕ ಚುನಾವಣೆ: ಬಸ್ ಬುಕ್ಕಿಂಗ್, ಪ್ರಯಾಣ ದರಗಳು ಗಗನಮುಖಿ
ಬೆಂಗಳೂರು, ಏಪ್ರಿಲ್ 27: ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಳ ಸಹಿತ ರಜೆ ಇದ್ದರೂ ಜನರು ಜನರು ಮತದಾನ ಮಾಡಲು ತಮ್ಮ ತಮ್ಮ ಊರುಗಳಿಗೆ ಹೋಗುವುದು ಅನುಮಾನವಿದೆ. ಕಾರಣ ಮತದಾನದ ಹಿಂದಿನ ದಿನಗಳಲ್ಲಿ ಬಸ್ ಪ್ರಯಾಣ ದರ ಗಗನಮುಖಿಯಾಗುವ ಸಾಧ್ಯತೆ ಇದೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾನದ ದಿನಕ್ಕಿಂತ ಎರಡು ದಿನ ಮುಂಚಿತವಾಗಿ ಮತ್ತು ನಂತರದ ದಿನಗಳಲ್ಲಿ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಬುಕ್ಕಿಂಗ್ಗಳಲ್ಲಿ ಗಮನಾರ್ಹ ಏರಿಕೆ ಕಾಣುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ (ಕೆಎಸ್ಆರ್ಟಿಸಿ)ದ ಪ್ರಕಾರ ಚುನಾವಣೆಗೆ ಒಂದು ದಿನ ಮೊದಲು ಮೇ 9 ಕ್ಕೆ ಬುಕಿಂಗ್ನಲ್ಲಿ 40% ರಷ್ಟು ಏರಿಕೆಯಾಗಿದೆ ಎಂದು ಡಿಎಚ್ ವರದಿ ಮಾಡಿದೆ.

ಕೆಎಸ್ಆರ್ಟಿಸಿ ಮೇ 9ರ ರಾತ್ರಿಗೆ 1,317 ಮುಂಗಡ ಬುಕಿಂಗ್ಗಳನ್ನು ಪಡೆದುಕೊಂಡಿದೆ. ಆದರೆ ಬೇರೆ ಯಾವುದೇ ವಾರದ ದಿನಕ್ಕೆ ಈ ಸಂಖ್ಯೆ 800 ಮತ್ತು 900 ರ ನಡುವೆ ಮಾತ್ರ ಇರುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ನಂತರ ಮುಂಗಡ ಬುಕ್ಕಿಂಗ್ ಕಡಿಮೆಯಾಗಿತ್ತು. ಆದರೆ ಮತದಾನದ ದಿನಾಂಕದ ಸಮೀಪವಾದಂತೆ ಹೆಚ್ಚಿನ ಜನರು ಪ್ರಯಾಣ ಬೆಳೆಸುವ ನಿರೀಕ್ಷೆಯಿದೆ ಎಂದು ಹಿರಿಯ ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಬಸ್ ನಿರ್ವಾಹಕರು ಸಹ ಬುಕ್ಕಿಂಗ್ನಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣ ದರಗಳು ತೀವ್ರವಾಗಿ ಏರಿಕೆ ಕಂಡಿವೆ ಎಂದು ತಿಳಿಸಿದ್ದಾರೆ. ಅದರಲ್ಲೂ ಕೆಲವು ಖಾಸಗಿ ನಿರ್ವಾಹಕರು ದರವನ್ನು ಶೇಕಡ 50ರಷ್ಟುವರೆಗೂ ಹೆಚ್ಚಿಸಿದ್ದಾರೆ. ಬುಕಿಂಗ್ನಲ್ಲಿ ತೀವ್ರವಾಗಿ ಏರಿಕೆ ಕಂಡುಬಂದಿದೆ.

ಅನೇಕ ಬಸ್ಗಳು ಶೀಘ್ರದಲ್ಲೇ ಭರ್ತಿಯಾಗುತ್ತಿವೆ. ಉದಾಹರಣೆಗೆ ಬೆಂಗಳೂರಿನಿಂದ ಮಂಗಳೂರಿಗೆ ನಾನ್-ಎಸಿ ಸ್ಲೀಪರ್ ಕ್ಲಾಸ್ಗೆ ವಾರದ ದಿನಗಳಲ್ಲಿ 750 ರೂಪಾಯಿಷ್ಟು ಇದ್ದದ್ದು, ಈಗ ಜನರ ಪ್ರಯಾಣ ಬೇಡಿಕೆಯಿಂದಾಗಿ ಸುಮಾರು 1,150 ರೂ.ಗೆ ಹೆಚ್ಚಾಗಿದೆ. ಕುಂದಾಪುರ, ಮಂಗಳೂರು, ಶಿವಮೊಗ್ಗ ಮತ್ತು ಶೃಂಗೇರಿಗೆ ಬುಕ್ಕಿಂಗ್ಗಳು ಹೆಚ್ಚಾಗಿವೆ ಎಂದು ಮತ್ತೊಬ್ಬ ಟ್ರಾವೆಲ್ ಆಪರೇಟರ್ ಹೇಳಿದ್ದಾರೆ. ಮೇ 8 ರಂದು ಪ್ರಯಾಣದ ಬೇಡಿಕೆಯೂ ಹೆಚ್ಚುತ್ತಿದೆ ಎಂದು ಖಾಸಗಿ ಬಸ್ ನಿರ್ವಾಹಕರೊಬ್ಬರು ತಿಳಿಸಿದ್ದಾರೆ.
ಕೆಲವು ರಾಜಕೀಯ ಪಕ್ಷಗಳು ಮತದಾರರನ್ನು ತಮ್ಮ ಕ್ಷೇತ್ರಗಳಿಗೆ ಕರೆದೊಯ್ಯಲು ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಬುಕಿಂಗ್ ವ್ಯವಸ್ಥೆಗಳನ್ನು ಮಾಡುತ್ತಿವೆ. ಮತದಾರರು ಮತಗಟ್ಟೆಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನಾವು ಕನಿಷ್ಠ ಒಂದು ತಿಂಗಳ ಮುಂಚಿತವಾಗಿ ಬುಕ್ ಮಾಡುತ್ತೇವೆ. ಇದು ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಮತ್ತು ಕೆಲವೊಮ್ಮೆ ನಗರ ಪ್ರದೇಶಗಳಲ್ಲಿ ಮತದಾರರು ಮತಗಟ್ಟೆಗಳಿಂದ ಸ್ವಲ್ಪ ದೂರದಲ್ಲಿ ವಾಸಿಸುವ ಪ್ರದೇಶಗಳಲ್ಲಿ ನಡೆಯುತ್ತದೆ ಎಂದು ಬುಕಿಂಗ್ ಮಾಡುವ ಮೂಲವೊಂದು ತಿಳಿಸಿದೆ.
ಕೆಲವು ಟೆಕ್ಕಿಗಳು ಮತ್ತು ಖಾಸಗಿ ಸಂಸ್ಥೆಯ ಉದ್ಯೋಗಿಗಳು ತಮ್ಮ ಪ್ರಯಾಣ ದೂರ ಹೆಚ್ಚು ಇದ್ದು ಹೆಚ್ಚುವರಿಯಾಗಿ ಮನೆಯಿಂದ ಕೆಲಸ ಮಾಡುವ ಆಯ್ಕೆಯನ್ನು ಒದಗಿಸುವಂತೆ ತಮ್ಮ ಕಂಪೆನಿಗೆ ಬೇಡಿಕೆ ಇಟ್ಟಿದ್ದಾರೆ. ಮತದಾನದ ನಂತರ ನಾವು ಕಚೇರಿಯಲ್ಲಿ ಇರಲು ನೇರವಾಗಿ ಎರಡು ರಾತ್ರಿ ಪ್ರಯಾಣಿಸಬೇಕಾಗಿದೆ. ಆದ್ದರಿಂದ ನಮ್ಮಲ್ಲಿ ಅನೇಕರು ಒಂದು ಅಥವಾ ಎರಡು ದಿನ ಮನೆಯಿಂದ ಕೆಲಸ ಮಾಡಲು ವಿನಂತಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಮೂಲದ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿಯ ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರು ಹೇಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications