ಕರ್ನಾಟಕ ಚುನಾವಣೆ: ಬಸ್ ಬುಕ್ಕಿಂಗ್, ಪ್ರಯಾಣ ದರಗಳು ಗಗನಮುಖಿ
ಬೆಂಗಳೂರು, ಏಪ್ರಿಲ್ 27: ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಳ ಸಹಿತ ರಜೆ ಇದ್ದರೂ ಜನರು ಜನರು ಮತದಾನ ಮಾಡಲು ತಮ್ಮ ತಮ್ಮ ಊರುಗಳಿಗೆ ಹೋಗುವುದು ಅನುಮಾನವಿದೆ. ಕಾರಣ ಮತದಾನದ ಹಿಂದಿನ ದಿನಗಳಲ್ಲಿ ಬಸ್ ಪ್ರಯಾಣ ದರ ಗಗನಮುಖಿಯಾಗುವ ಸಾಧ್ಯತೆ ಇದೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾನದ ದಿನಕ್ಕಿಂತ ಎರಡು ದಿನ ಮುಂಚಿತವಾಗಿ ಮತ್ತು ನಂತರದ ದಿನಗಳಲ್ಲಿ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಬುಕ್ಕಿಂಗ್ಗಳಲ್ಲಿ ಗಮನಾರ್ಹ ಏರಿಕೆ ಕಾಣುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ (ಕೆಎಸ್ಆರ್ಟಿಸಿ)ದ ಪ್ರಕಾರ ಚುನಾವಣೆಗೆ ಒಂದು ದಿನ ಮೊದಲು ಮೇ 9 ಕ್ಕೆ ಬುಕಿಂಗ್ನಲ್ಲಿ 40% ರಷ್ಟು ಏರಿಕೆಯಾಗಿದೆ ಎಂದು ಡಿಎಚ್ ವರದಿ ಮಾಡಿದೆ.

ಕೆಎಸ್ಆರ್ಟಿಸಿ ಮೇ 9ರ ರಾತ್ರಿಗೆ 1,317 ಮುಂಗಡ ಬುಕಿಂಗ್ಗಳನ್ನು ಪಡೆದುಕೊಂಡಿದೆ. ಆದರೆ ಬೇರೆ ಯಾವುದೇ ವಾರದ ದಿನಕ್ಕೆ ಈ ಸಂಖ್ಯೆ 800 ಮತ್ತು 900 ರ ನಡುವೆ ಮಾತ್ರ ಇರುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ನಂತರ ಮುಂಗಡ ಬುಕ್ಕಿಂಗ್ ಕಡಿಮೆಯಾಗಿತ್ತು. ಆದರೆ ಮತದಾನದ ದಿನಾಂಕದ ಸಮೀಪವಾದಂತೆ ಹೆಚ್ಚಿನ ಜನರು ಪ್ರಯಾಣ ಬೆಳೆಸುವ ನಿರೀಕ್ಷೆಯಿದೆ ಎಂದು ಹಿರಿಯ ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಬಸ್ ನಿರ್ವಾಹಕರು ಸಹ ಬುಕ್ಕಿಂಗ್ನಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣ ದರಗಳು ತೀವ್ರವಾಗಿ ಏರಿಕೆ ಕಂಡಿವೆ ಎಂದು ತಿಳಿಸಿದ್ದಾರೆ. ಅದರಲ್ಲೂ ಕೆಲವು ಖಾಸಗಿ ನಿರ್ವಾಹಕರು ದರವನ್ನು ಶೇಕಡ 50ರಷ್ಟುವರೆಗೂ ಹೆಚ್ಚಿಸಿದ್ದಾರೆ. ಬುಕಿಂಗ್ನಲ್ಲಿ ತೀವ್ರವಾಗಿ ಏರಿಕೆ ಕಂಡುಬಂದಿದೆ.

ಅನೇಕ ಬಸ್ಗಳು ಶೀಘ್ರದಲ್ಲೇ ಭರ್ತಿಯಾಗುತ್ತಿವೆ. ಉದಾಹರಣೆಗೆ ಬೆಂಗಳೂರಿನಿಂದ ಮಂಗಳೂರಿಗೆ ನಾನ್-ಎಸಿ ಸ್ಲೀಪರ್ ಕ್ಲಾಸ್ಗೆ ವಾರದ ದಿನಗಳಲ್ಲಿ 750 ರೂಪಾಯಿಷ್ಟು ಇದ್ದದ್ದು, ಈಗ ಜನರ ಪ್ರಯಾಣ ಬೇಡಿಕೆಯಿಂದಾಗಿ ಸುಮಾರು 1,150 ರೂ.ಗೆ ಹೆಚ್ಚಾಗಿದೆ. ಕುಂದಾಪುರ, ಮಂಗಳೂರು, ಶಿವಮೊಗ್ಗ ಮತ್ತು ಶೃಂಗೇರಿಗೆ ಬುಕ್ಕಿಂಗ್ಗಳು ಹೆಚ್ಚಾಗಿವೆ ಎಂದು ಮತ್ತೊಬ್ಬ ಟ್ರಾವೆಲ್ ಆಪರೇಟರ್ ಹೇಳಿದ್ದಾರೆ. ಮೇ 8 ರಂದು ಪ್ರಯಾಣದ ಬೇಡಿಕೆಯೂ ಹೆಚ್ಚುತ್ತಿದೆ ಎಂದು ಖಾಸಗಿ ಬಸ್ ನಿರ್ವಾಹಕರೊಬ್ಬರು ತಿಳಿಸಿದ್ದಾರೆ.
ಕೆಲವು ರಾಜಕೀಯ ಪಕ್ಷಗಳು ಮತದಾರರನ್ನು ತಮ್ಮ ಕ್ಷೇತ್ರಗಳಿಗೆ ಕರೆದೊಯ್ಯಲು ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳಲ್ಲಿ ಬುಕಿಂಗ್ ವ್ಯವಸ್ಥೆಗಳನ್ನು ಮಾಡುತ್ತಿವೆ. ಮತದಾರರು ಮತಗಟ್ಟೆಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನಾವು ಕನಿಷ್ಠ ಒಂದು ತಿಂಗಳ ಮುಂಚಿತವಾಗಿ ಬುಕ್ ಮಾಡುತ್ತೇವೆ. ಇದು ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಮತ್ತು ಕೆಲವೊಮ್ಮೆ ನಗರ ಪ್ರದೇಶಗಳಲ್ಲಿ ಮತದಾರರು ಮತಗಟ್ಟೆಗಳಿಂದ ಸ್ವಲ್ಪ ದೂರದಲ್ಲಿ ವಾಸಿಸುವ ಪ್ರದೇಶಗಳಲ್ಲಿ ನಡೆಯುತ್ತದೆ ಎಂದು ಬುಕಿಂಗ್ ಮಾಡುವ ಮೂಲವೊಂದು ತಿಳಿಸಿದೆ.
ಕೆಲವು ಟೆಕ್ಕಿಗಳು ಮತ್ತು ಖಾಸಗಿ ಸಂಸ್ಥೆಯ ಉದ್ಯೋಗಿಗಳು ತಮ್ಮ ಪ್ರಯಾಣ ದೂರ ಹೆಚ್ಚು ಇದ್ದು ಹೆಚ್ಚುವರಿಯಾಗಿ ಮನೆಯಿಂದ ಕೆಲಸ ಮಾಡುವ ಆಯ್ಕೆಯನ್ನು ಒದಗಿಸುವಂತೆ ತಮ್ಮ ಕಂಪೆನಿಗೆ ಬೇಡಿಕೆ ಇಟ್ಟಿದ್ದಾರೆ. ಮತದಾನದ ನಂತರ ನಾವು ಕಚೇರಿಯಲ್ಲಿ ಇರಲು ನೇರವಾಗಿ ಎರಡು ರಾತ್ರಿ ಪ್ರಯಾಣಿಸಬೇಕಾಗಿದೆ. ಆದ್ದರಿಂದ ನಮ್ಮಲ್ಲಿ ಅನೇಕರು ಒಂದು ಅಥವಾ ಎರಡು ದಿನ ಮನೆಯಿಂದ ಕೆಲಸ ಮಾಡಲು ವಿನಂತಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಮೂಲದ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿಯ ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರು ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications