Karnataka Assembly Election 2023 LIVE: ಮತ ಚಲಾಯಿಸುವಾಗ ಜೈ ಭಜರಂಗಬಲಿ ಹೇಳುವ ಮೂಲಕ ಶಿಕ್ಷಿಸಿ

ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್ ಸುದ್ದಿ: ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುವ ಗುರಿ; ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ರಾಜ್ಯವನ್ನಾಗಿ ಮಾಡುವುದೇ ಬಿಜೆಪಿಯ ಏಕೈಕ ಗುರಿಯಾಗಿದ್ದು, ಅದಕ್ಕಾಗಿ ಪಕ್ಷವು ಮಾರ್ಗಸೂಚಿಯನ್ನು ಹೊಂದಿದೆ. ಎಲ್ಲಾ ಪ್ರಯತ್ನಗಳನ್ನು ಮಾಡಲು ಸಿದ್ಧವಾಗಿದೆ. ಕಾಂಗ್ರೆಸ್ ಮತ್ತು ಅದರ ನಾಯಕರು ತನ್ನನ್ನು ದ್ವೇಷಿಸುತ್ತಾರೆ ಮತ್ತು ಬಾಯಿಗೆ ಬಂದಂತೆ ನಿಂದಿಸುತ್ತಾರೆ. ಮೇ 10 ರಂದು ಮತ ಚಲಾಯಿಸುವಾಗ ಜೈ ಭಜರಂಗಬಲಿ ಎಂದು ಹೇಳುವ ಮೂಲಕ ಅವರನ್ನು ಶಿಕ್ಷಿಸುವಂತೆ ಕರ್ನಾಟಕದ ಜನತೆಗೆ ಮೋದಿ ಮನವಿ.

Karnataka Election 2023 LIVE News

ಮಂಗಳವಾರದಿಂದ ರಾಜ್ಯ ಚುನಾವಣಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿ,ರೋಡ್‌ ಶೋ ನಡೆಸಲಿದ್ದಾರೆ. ಇತ್ತ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಇಂಡಿ, ಬೀದರ್‌ ಹಾಗೂ ಕಲಬುರಗಿಯಲ್ಲಿ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ನಡೆಸಲಿದ್ದು, ಚುನಾವಣಾ ಅಖಾಡ ಘಟಾನುಘಟಿ ನಾಯಕರಿಂದ ರಂಗೇರಿದೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

Karnataka Election 2023 LIVE News

'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು.

May 03, 2023, 9:29 pm IST

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಸ್ಟಾರ್ ಕ್ಯಾಂಪೇನರ್ ಪ್ರಧಾನಿ ನರೇಂದ್ರ ಮೋದಿ ಮತ್ತೆ ಮೇ 6ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಎರಡು ಹಂತಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬರೋಬ್ಬರಿ 36.6 ಕಿಮೀ ರೋಡ್ ಶೋ ನಡೆಸಲಿದ್ದಾರೆ.
May 03, 2023, 8:59 pm IST

ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರಿಂದ ಆಶೀರ್ವಾದ ಪಡೆದ ಪ್ರಧಾನಿ
May 03, 2023, 8:50 pm IST

ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮುಸ್ಲಿಮರಿಗೆ ಮೀಸಲಾತಿ ನೀಡುವ ಕಾಂಗ್ರೆಸ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಮೀಸಲಾತಿಯು ಧರ್ಮದ ಆಧಾರದ ಮೇಲೆ ಇರಬಾರದು, ಆದರೆ ಕಾಂಗ್ರೆಸ್ ಮುಸ್ಲಿಮರಿಗೆ ಮೀಸಲಾತಿ ನೀಡಲು ಬಯಸುತ್ತಿದೆ ಎಂದು ಹೇಳಿದ್ದಾರೆ. ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಇದು ನಮ್ಮ ಸಂವಿಧಾನದ ಆಧಾರ. ಆದರೆ, ಇಂದು ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬೆಂಗಳೂರಿನಲ್ಲಿ ಹೇಳಿದ್ದಾರೆ
May 03, 2023, 8:50 pm IST

ಕಾಂಗ್ರೆಸ್‌ದು ನಿಂದನೆ ಸಂಸ್ಕೃತಿ

ಕಾಂಗ್ರೆಸ್‌ದು ನಿಂದನೆ ಸಂಸ್ಕೃತಿ, ಮೇ 10 ರಂದು ಮತಗಟ್ಟೆಗಳಲ್ಲಿ ಮತ ಚಲಾಯಿಸುವ ಸಂದರ್ಭದಲ್ಲಿ ಜೈ ಬಜರಂಗ ಬಲಿ ಎಂದು ಹೇಳುವ ಮೂಲಕ ಅವರನ್ನು ಶಿಕ್ಷಿಸುವಂತೆ ಕರ್ನಾಟಕದ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ.
May 03, 2023, 6:18 pm IST

ಮುಖ್ಯಮಂತ್ರಿಗಳಲ್ಲಿ ಅನೇಕರು ಪ್ರಾಮಾಣೀಕರಿದ್ದರು. ಆದರೆ ಬಸವರಾಜ ಬೊಮ್ಮಾಯಿ ಕೈಗೊಂಬೆ, ಮಹಾಭ್ರಷ್ಟ ಮುಖ್ಯಮಂತ್ರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದರು.
May 03, 2023, 6:07 pm IST

ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಮೇ 4ರಂದು ಸ್ಯಾಂಡಲ್‌ವುಡ್ ನಟರಾದ ಶಿವರಾಜಕುಮಾರ್, ದುನಿಯಾ ವಿಜಯ್ ಮತ್ತು ನಟಿ ರಮ್ಯಾ ಪ್ರಚಾರ ನಡೆಸಲಿದ್ದಾರೆ.
May 03, 2023, 6:02 pm IST

ಚುನಾವಣೆ ಎದುರಿಸುತ್ತಿರುವ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿಒಂದೆರಡು ಅಂಶಗಳನ್ನು ಬಿಟ್ಟರೆ, 'ಮಕ್ಕಳ ರಕ್ಷಣೆ' ಕುರಿತು ಏನನ್ನೂ ಘೋಷಣೆ ಮಾಡಿಲ್ಲ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ದೈಹಿಕ, ಮಾನಸಿಕ ಅಥವಾ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ಉಲ್ಲೇಖವಿಲ್ಲ' ವಲಸೆ ಮಕ್ಕಳು, ಮಕ್ಕಳ ನಿಲಯಗಳಲ್ಲಿ ಅಥವಾ ವಿವಿಧ ಸನ್ನಿವೇಶಗಳಿಂದ ಸಂಕಷ್ಟದಲ್ಲಿರುವ ಮಕ್ಕಳ ಸಮಸ್ಯೆಗಳ ಪರಿಹಾರ, ಅಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ ಎಂದು 'ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ'ವು (KCRO) ಕಳವಳ ವ್ಯಕ್ತಪಡಿಸಿದೆ.
May 03, 2023, 5:49 pm IST

ಬಿಜೆಪಿ-ಕಾಂಗ್ರೆಸ್ ಇಬ್ಬರೂ ದಾಯಾದಿಗಳು

ಬಿಜೆಪಿ-ಕಾಂಗ್ರೆಸ್ ಇಬ್ಬರೂ ದಾಯಾದಿಗಳು. ರಾಜ್ಯದ ಮತದಾರರಿಗೆ ಎಲ್ಲವೂ ಗೊತ್ತಾಗುತ್ತದೆ. ನಾವು ಬಿಜೆಪಿ-ಕಾಂಗ್ರೆಸ್ಸೂ ಅಲ್ಲ. ನಾವು ಕನ್ನಡ ನಾಡಿನ ಮಕ್ಕಳು. ಕನ್ನಡಿಗರ ಸ್ವಾಭಿಮಾನ ಉಳಿಯಬೇಕು - ಸಿ.ಎಂ.ಇಬ್ರಾಹಿಂ
May 03, 2023, 4:22 pm IST

ಮತದಾರ ಪ್ರಭುಗಳು ಆಶೀರ್ವಾದ ಮಾಡಲಿಲ್ಲ ಅಂದರೆ ನಾನು ಮತ್ತು ನನ್ನ ಹೆಂಡತಿ ವಿಷ ಕುಡಿದು ಸಾಯುತ್ತೇವೆ-ಬಾಬುರಾವ್‌ ಚಿಂಚನಸೂರ್‌
May 03, 2023, 4:13 pm IST

ನಾವೂ ಆಂಜನೇಯನ ಭಕ್ತರೇ ಎಂದ ಡಿಕೆಶಿ

ಬಜರಂಗದಳ ನಿಷೇಧ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿದ್ದು, ಬಿಜೆಪಿಯವರು ಮಾತ್ರ ಆಂಜನೇಯನ ಭಕ್ತರಾ? ನಾವೂ ಹನುಮನ ಭಕ್ತರೇ. ಬಜರಂಗದಳ ಬ್ಯಾನ್ ಮಾಡ್ತೀವಿ ಅಂದ್ರೆ ಬಿಜೆಪಿಯವರು ಯಾಕೆ ಗಾಬರಿ ಆಗ್ತಿದ್ದಾರೆ. ಆಂಜನೇಯನಿಗೂ ಬಜರಂಗದಳಕ್ಕೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ. ಮಾತ್ರವಲ್ಲದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
May 03, 2023, 3:28 pm IST

'ಮೂರು ಲಕ್ಷ ನಕಲಿ ಜನರ ಹೆಸರಿನಲ್ಲಿ ಕಾಂಗ್ರೆಸ್ ಕೊಳ್ಳೆ'- ಮೋದಿ

ಉತ್ತರ ಕನ್ನಡ ಜಿಲ್ಲೆ ಅಂಕೋಲದ ತಾಲ್ಲೂಕಿನ ಹಟ್ಟಿಕೇರಿ ಗ್ರಾಮದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದರು. ಮೂರು ಲಕ್ಷ ನಕಲಿ ಜನರ ಹೆಸರಿನಲ್ಲಿ ಕಾಂಗ್ರೆಸ್ ಕೊಳ್ಳೆ ಹೊಡೆದಿದೆ. ನಕಲಿ ಮಹಿಳೆಯರ ಹೆಸರಿನಲ್ಲಿ ಲಕ್ಷಾಂತರ ಹಣ ಕಾಂಗ್ರೆಸ್ ಕಬಳಿಸಿದೆ ಎಂದು ಆರೋಪಿಸಿದರು.
May 03, 2023, 2:33 pm IST

ನಾನು ಆಸ್ಪತ್ರೆಗೆ ಸೇರಿದ್ದರಿಂದ ಕ್ಷೇತ್ರದಲ್ಲಿ ನನ್ನ ಪರವಾಗಿ ಪತ್ನಿ ಪ್ರಚಾರ ಮಾಡುತ್ತಿದ್ದಾರೆ. ಈಗ ನಾನು 50% ಚೇತರಿಸಿಕೊಂಡಿದ್ದೇನೆ, ಇನ್ನು 6 ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಬೇಕು. ನೀವು ವೀಲ್‌ ಚೇರ್‌ ಮೇಲೂ ಕೂಡ ಹೋಗುವಂತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಒಂದು ವೇಳೆ ಮತದಾರ ದೇವರುಗಳು ಆಶೀರ್ವಾದ ಮಾಡಲಿಲ್ಲ ಅಂದರೆ ನಾನು ಮತ್ತು ನನ್ನ ಹೆಂಡತಿ ವಿಷ ಕುಡಿದು ಸಾಯುತ್ತೇವೆ ಎಂದು ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.
May 03, 2023, 1:45 pm IST

ದೇವರ ಮೊರೆ ಹೋದ ಡಿ.ಕೆ ಶಿವಕುಮಾರ್

ಮಂಗಳವಾರ ಹೆಲಿಕ್ಯಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಮೇ 3ರಂದು ನಂಜನಗೂಡಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಅವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
May 03, 2023, 1:15 pm IST

ಕಾಂಗ್ರೆಸ್‌ನವರು ಲಿಂಗಾಯತ ಸಮುದಾಯದವರು ಯಾರು ಮುಖ್ಯಮಂತ್ರಿ ಆಗುತ್ತಾರೆಯೋ ಅವರೆಲ್ಲಾ ಭ್ರಷ್ಟರು ಅಂತಾ ಉಲ್ಲೇಖ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷಸರ್ಪಕ್ಕೆ ಹೋಲಿಸಿದ್ದಾರೆ. ಇದನ್ನೆಲ್ಲ ಗಮನಿಸಿದರೆ ಅವರು ಬೌಧ್ಧಿಕವಾಗಿ, ನೈತಿಕವಾಗಿ ದಿವಾಳಿ ಎದ್ದು ಹೋಗಿದ್ದಾರೆ ಅಂತಾ ನಾನು ತಿಳಿದಿದ್ದೇನೆ ಗದಗದಲ್ಲಿ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು.
May 03, 2023, 1:15 pm IST

ಮಂಗಳೂರು ಬಿಜೆಪಿ ಸಮಾವೇಶ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ ಮಂಗಳೂರು ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದರು. 'ಕಾಂಗ್ರೆಸ್ ಶಾಂತಿಯ ಶತ್ರು, ಅಭಿವೃದ್ಧಿಯ ಶತ್ರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ವನಾಶವಾಗುತ್ತದೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಚಲಿಸುತ್ತದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಬಗ್ಗೆ ಎಚ್ಚರಿಕೆಯಿಂದ ಮುನ್ನಡೆಯುವಂತೆ' ಮೋದಿ ಸೂಚಿಸಿದರು.
May 03, 2023, 1:15 pm IST

ತೆಲಂಗಾಣದಲ್ಲಿ ಕಾಂಗ್ರೆಸ್‌ನ ಕರ್ನಾಟಕ ಚುನಾವಣಾ ಪ್ರಣಾಳಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದ ಬಜರಂಗದಳದ ಸದಸ್ಯರು. ಹೈದರಾಬಾದ್‌ನಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಜರಂಗದಳದ ಸದಸ್ಯರನ್ನು ಪೊಲೀಸರು ಬಂಧಿಸಿದ ಘಟನೆ ಬುಧವಾರ ನಡೆದಿದೆ. ಮಂಗಳವಾರ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ PFI ಮಾದರಿಯಲ್ಲಿ ಬಜರಂಗದಳ ನಿಷೇಧ ಕುರಿತು ಪ್ರಸ್ತಾಪಿಸಿತ್ತು.
May 03, 2023, 1:14 pm IST

ಬಜರಂಗದಳ ಬ್ಯಾನ್ ಮಾಡೋಕೆ ಬಿಡಲ್ಲ : ಬಿಎಸ್‌ವೈ

ನಾವು ಬಜರಂಗದಳವನ್ನು ಬ್ಯಾನ್ ಮಾಡಲು ಬಿಡಲ್ಲ ಎಂದು ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಅಧಿಕಾರಕ್ಕೆ ಬರದವರು ಏನು ಬೇಕಾದರೂ ಆಶ್ವಾಸನೆ ಕೊಡಲಿ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತೆ ಕಾಂಗ್ರೆಸ್ ಮಾಡುತ್ತಿದೆ. ಬಜರಂಗದಳ ನಿಷೇಧ ಹೇಳಿಕೆಯಿಂದ ಅವರಿಗೆ ಹಿನ್ನಡೆಯಾಗಲಿದೆ ಎಂದು ವಾಗ್ದಾಳಿ ನಡೆಸಿದರು.
May 03, 2023, 1:14 pm IST

ಮಂಗಳೂರು ಬಿಜೆಪಿ ಸಮಾವೇಶ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಮಂಗಳೂರು ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದರು. 'ಕಾಂಗ್ರೆಸ್ ಶಾಂತಿಯ ಶತ್ರು, ಅಭಿವೃದ್ಧಿಯ ಶತ್ರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ವನಾಶವಾಗುತ್ತದೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಚಲಿಸುತ್ತದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಬಗ್ಗೆ ಎಚ್ಚರಿಕೆಯಿಂದ ಮುನ್ನಡೆಯುವಂತೆ' ಮೋದಿ ಸೂಚಿಸಿದರು.
May 03, 2023, 12:41 pm IST

ಕರ್ನಾಟಕದಲ್ಲಿ ಉಗ್ರ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಬಲ

ಮೀನುಗಾರರ ಕಲ್ಯಾಣಕ್ಕಾಗಿ ಹೊಸ ಯೋಜನೆ (ಮತ್ಸ್ಯ ಶ್ರೀ) ನಾವು ಆರಂಭಿಸಿದ್ದೇವೆ. ದೆಹಲಿಯಲ್ಲಿನ ಕುಟುಂಬ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದೆ. ತುಷ್ಟೀಕರಣದ ಹೆಸರಿನಲ್ಲಿ ಅಭಿವೃದ್ದಿ ಕಡೆಗಣನೆಯಾಗುತ್ತಿದೆ" ಮೂಲ್ಕಿ ಸಮಾವೇಶದಲ್ಲಿ ಪ್ರಧಾನಿ ಮೋದಿ.
May 03, 2023, 11:59 am IST

ಮಂಗಳೂರಿನಲ್ಲಿ ಮೋದಿ ಮತಬೇಟೆ

ಮಂಗಳೂರಿನಲ್ಲಿ ಮೋದಿ ಮತಬೇಟೆ
ಮೂಡಬಿದಿರೆಯ ಮುಲ್ಕಿಯಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಮೋದಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಜನರತ್ತ ಕೈಬೀಸಿದ ಮೋದಿ ವೇದಿಕೆಗೆ ಆಗಮಿಸುತ್ತಿದ್ದಂತೆ ಜನರ ಘೋಷಣೆಗಳು ಮೊಳಗಿದರು. ಈ ವೇಳೆ ಕೇಸರಿ ಶಾಲು ಹೊದಿಸಿ, ಸ್ಮರಣಿಕೆ, ಗಣಪತಿ ವಿಗ್ರಹ, ಕೃಷ್ಣನ ವಿಗ್ರಹ, ನರಸಿಂಹನ ಪ್ರಸಾದ ನೀಡಿ ಗೌರವಿಸಲಾಯಿತು.
May 03, 2023, 11:28 am IST

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ದಾಳಿ

ಕರ್ನಾಟಕ ವಿಧಾನಸಭಾ ಚುನಾವಣಾ ಸಮೀಪಿಸುತ್ತಿರುವ ಹೊತ್ತಿನಲ್ಲೇ ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಸಹೋದರನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
May 03, 2023, 9:56 am IST

ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಚುನಾವಣೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಮಧ್ಯೆ ಎಎಪಿ ಪಕ್ಷದ ಚಿಹ್ನೆಯಾದ 'ಪೊರಕೆ'ಗೆ ಮತದಾನದ ದಿನ ಮತಗಟ್ಟೆಯ ಆವರಣದಲ್ಲಿ ಎರಡು ದಿನ ನಿರ್ಬಂಧ ವಿಧಿಸಿದೆ. ಪೊರಕೆ ಕಾಣದಂತೆ ಆಯೋಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
May 03, 2023, 9:56 am IST

ಕಲಬುರಗಿ: ಚುನಾವಣಾ ಪ್ರಚಾರದ ಮಧ್ಯೆ ಪುಟಾಣಿಗಳ ಜೊತೆ ಪ್ರಧಾನಿಗಳ ಆಟ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸದ್ಯ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಮತ ಬೇಟೆ ನಡೆಸುತ್ತಿದ್ದಾರೆ. ರೋಡ್‌ ಶೋ, ಚುನಾವಣಾ ಸಮಾವೇಶ, ಅಬ್ಬರದ ಪ್ರಚಾರ ನಡುವೆ ಅಪರೂಪದ ಘಳಿಗೆಗೆ ಕಲಬುರಗಿ ಸಾಕ್ಷಿಯಾಗಿದೆ.
May 03, 2023, 9:27 am IST

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯಲ್ಲಿ ಪ್ರಧಾನಿ ಮೋದಿ ಸಮಾವೇಶದ ಹಿನ್ನಲೆಯಲ್ಲಿ ಮಂಗಳೂರು - ಉಡುಪಿ ಹೆದ್ದಾರಿ ಸಂಚಾರದಲ್ಲಿ ಬದಲಾವಣೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳು ಮೂಲ್ಕಿ ವಿಜಯ ಸನ್ನಿಧಿಯ ಬಳಿ ಎಡಕ್ಕೆ ಚಲಿಸಿ ಕಿನ್ನಿಗೋಳಿ-ಕಟೀಲು-ಬಜ್ಪೆ-ಕಾವೂರು ಮಾರ್ಗವಾಗಿ ಮಂಗಳೂರು ಕಡೆಗೆ ಸಂಚರಿಬಹುದು. ಮಂಗಳೂರು, ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ ಎಸ್ ಕೋಡಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬಹುದು.
May 03, 2023, 9:27 am IST

ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ನಡೆಯಲಿದೆ. ಮತದಾನದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1, ಸಿಆಸು ಇಲಾಖೆ (ರಾಜ್ಯ ಶಿಷ್ಟಾಚಾರ) ಅಪೇಕ್ಞಾ ಸತೀಶ್ ಪವಾರ್ ಈ ಕುರಿತು 2 ಅಧಿಸೂಚನೆ ಹೊರಡಿಸಿದ್ದಾರೆ.
May 03, 2023, 9:14 am IST

ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿಯ ಮುಂದೆ ಬಜರಂಗದಳದ ಕಾರ್ಯಕರ್ತರ ಪ್ರತಿಭಟನೆ. ಈ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಾಡಿತ್ತು
May 03, 2023, 8:49 am IST

ಬಜರಂಗ ದಳ ಬ್ಯಾನ್‌ ಭರವಸೆಯನ್ನ ಸಮರ್ಥಿಸಿಕೊಂಡ ಸಿದ್ದರಾಮಯ್ಯ

ಕೋಮುವಾದ ಕೆರಳಿಸಿ, ಜಾತಿ ಸಂಘರ್ಷ ಮಾಡುವಂತಹ ಸಂಘಟನೆ ನಿಷೇಧ ಮಾಡುವ ಬಗ್ಗೆ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ ಎಂದು ಬಜರಂಗ ದಳ ಬ್ಯಾನ್‌ ಮಾಡುವ ಕಾಂಗ್ರೆಸ್‌ ಪ್ರಣಾಳಿಕೆ ಭರವಸೆಯನ್ನ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.
May 03, 2023, 7:44 am IST

ಕಾಂಗ್ರೆಸ್ ಗೆ ಇದು ಮಾಡು ಇಲ್ಲವೇ ಮಡಿ ಚುನಾವಣೆ: ಸಿಎಂ

ಕಾಂಗ್ರೆಸ್ ಗೆ ಇದು ಕೊನೆ ಚುನಾವಣೆ. ಅವರು ಸೋತರೆ ಅವರು ಸೀದಾ ಮನೆಗೆ ಹೋಗಬೇಕು. ಅವರಿಗೆ ಇದು ಮಾಡು ಇಲ್ಲವೇ ಮಡಿ ಪರಿಸ್ಥಿತಿ. ಆದರೆ ಅವರಿಗೆ ಇದು ಮಡಿಯುವ ಚುನಾವಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
May 03, 2023, 7:34 am IST

ಮೂಡುಬಿದಿರೆ, ಆಕೋಲಾ, ಬೈಲಹೊಂಗಲದಲ್ಲಿ ಮೋದಿ ಪ್ರಚಾರ

ಆಡಳಿತರೂಢ ಬಿಜೆಪಿಗೆ 2023 ರ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜ್ಯದಲ್ಲಿ ಮೋದಿ ಅಬ್ಬರ ಹೆಚ್ಚಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಮೂಡುಬಿದಿರೆ, ಆಕೋಲಾ, ಬೈಲಹೊಂಗಲದಲ್ಲಿ ಚುನಾವಣಾ ಪ್ರಚಾರ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+