ಕರ್ನಾಟಕ ವಿಧಾನಸಭಾ ಚುನಾವಣೆ 2023 ಲೈವ್ ಸುದ್ದಿ:30 ವರ್ಷ ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೆ. ಅಂತಹ ವ್ಯಕ್ತಿಯನ್ನು ಒತ್ತಾಯಪೂರ್ವಕವಾಗಿ ಹೊರಗೆ ಹಾಕಿದರು. ಅವರದ್ದು ಹಿಡನ್ ಅಜೆಂಡಾ, ಷಡ್ಯಂತ್ರ ಮಾಡಿ ಟಿಕೆಟ್ ಇಲ್ಲದಂತೆ ಮಾಡಿದರು. ಏಪ್ರಿಲ್ 12ರಂದು ಚುನಾವಣೆ ಉಸ್ತುವಾರಿಗಳು ನನಗೆ ಕಾಲ್ ಮಾಡಿ ಟಿಕೆಟ್ ಇಲ್ಲ ಎಂದು ಹೇಳಿದಾಗ ಬಹಳ ಅಚ್ಚುರಿ ಆಯಿತು, ಜೊತೆಗೆ ಬೇಜಾರೂ ಆಯಿತು ಎಂದು ಬೇಸರ ವ್ಯಕ್ತ ಪಡಿಸಿದ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೇಸರ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರು ದಿನಗಳಷ್ಟೇ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದಲ್ಲಿ ಮತಬೇಟೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದು, ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಗುರುವಾರ ಕಲಬುರಗಿಯಲ್ಲಿ ಅಬ್ಬರದ ಪ್ರಚಾರವನ್ನ ನಡೆಸಲಿದ್ದಾರೆ. ಇತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕನಕಗಿರಿ ಹಾಗೂ ಹಿರೇಕೇರೂರಿನಲ್ಲಿ ಪ್ರಚಾರವನ್ನ ನಡೆಸಲಿದದ್ದು, ಕೊನೆ ಹಂತದ ಕಸರತ್ತಿಗೆ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಅಖಾಡದಲ್ಲಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು.
May 04, 2023, 10:01 pm IST
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಹಿಂದೂ ಸಂಘಟನೆಯ ಸದಸ್ಯರಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹನುಮಾನ್ ಚಾಲೀಸ್ ಪಠಣ
#WATCH | Bengaluru: BJP MP and Union minister Shobha Karandlaje along with party leaders and workers recite 'Hanuman Chalisa' in Malleshwaram amid row over Congress manifesto mentioning ban on Bajrang Dal. #KarnatakaAssemblyElection2023pic.twitter.com/QodoDZOSFd
ಬಿಜೆಪಿ ಪ್ರಚಾರ ವಾಹನದಲ್ಲೇ ಭ್ರಷ್ಟರ, ಕಳ್ಳರ ಪಕ್ಷ ಎನ್ನುವ ಹಾಡು!
ಬಿಜೆಪಿ ಪಕ್ಷದ ಪ್ರಚಾರ ವಾಹನದಲ್ಲಿ ಬಿಜೆಪಿ ಭ್ರಷ್ಟರ ಪಕ್ಷ, ಕಳ್ಳರ ಪಕ್ಷ ಎನ್ನುವ ಸಾಹಿತ್ಯ ಹೊಂದಿರುವ ಹಾಡನ್ನು ಪ್ಲೇ ಮಾಡುತ್ತಿರುವ ವಿಡಿಯೋವನ್ನು ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡಿದೆ. ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ ಬಿಜೆಪಿ ಕೊನೆಗೂ ನಿಜವನ್ನೇ ಹೇಳುತ್ತಿದೆ ಎಂದು ವ್ಯಂಗ್ಯವಾಡಿದೆ.
May 04, 2023, 9:37 pm IST
ನನ್ನನ್ನು ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗುವುದಿಲ್ಲ ಎನ್ನುವ ಖಚಿತ ವಿಶ್ವಾಸದ ಮಾತನ್ನು ಆಡಿದ ಕುಮಾರಸ್ವಾಮಿ
ವಿಧಾನಸಭೆ ಚುನಾವಣೆ ಸಮಿಪಿಸುತ್ತಿರುವಾಗಲೇ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗುತ್ತಲೇ ಇವೆ. ಅದೇ ರೀತಿ ಇದೀಗ ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸೌಭಾಗ್ಯ ಅವರು ಚುನಾವಣಾ ಕಣದಿಂದ ಹಿಂದೆ ಸರಿದು ವಿಜಯೇಂದ್ರ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ.
May 04, 2023, 7:20 pm IST
ಬಜರಂಗ ದಳ ಅತ್ಯುತ್ತಮ ಸಂಘಟನೆಯಾಗಿದ್ದರೆ ಅಮಿತ್ ಶಾ ಅವರ ಮಗನನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸಲಿ - ಕೆಪಿಸಿಸಿ ಟ್ವೀಟ್
ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ @AmitShah ಅವರು ತಮ್ಮ ಮಗನನ್ನು BCCI ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ.@BSBommai ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ.
ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ…
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಕಣ್ಮರೆಯಾಗಿದೆ-ಸುಧಾಕರ್
ಯಾವುದೇ ಸಂಘಟನೆಯಾಗಲೀ ದೇಶದ್ರೋಹಿ ಕೆಲಸ ಮಾಡಿದರೆ ನಿಷೇಧ ಮಾಡಬೇಕು, ದೇಶ ಪ್ರೇಮಿ ಸಂಘಟನೆಗಳನ್ನು ಯಾಕೆ ನಿಷೇಧ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಜರಂಗದಳ ನಿಷೇಧ ಎನ್ನುವ ಕಾಂಗ್ರೆಸ್ ಭರವಸೆ ವಿರುದ್ಧ ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರದಲ್ಲಿ ಮಾತನಾಡಿದ ಅವರು, ಪಿಎಫ್ಐ, ಭಜರಂಗದಳಕ್ಕೆ ಹೋಲಿಕೆ ಮಾಡಲು ಸಾಧ್ಯವೇ, ದೇಶ ದ್ರೋಹ ಮಾಡುವ ಸಂಘ ಸಂಸ್ಥೆಗಳನ್ನು ನ್ಯಾಯಾಲಯಗಳೇ ನಿಷೇಧ ಮಾಡಿವೆ. ಭಜರಂಗದಳದ ಮೇಲೆ ಅಂತಹ ಯಾವುದೇ ನಿದರ್ಶನಗಳಿದ್ದರೆ ಹೇಳಿ, ಇಂತಹ ಘಟನೆಗಳಿಂದಲೇ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಕಾಂಗ್ರೆಸ್ ಕಣ್ಮರೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
May 04, 2023, 4:29 pm IST
ಶಿವಲಿಂಗೇಗೌಡ ಅವರು ಎರಡು ವರ್ಷದಿಂದ ಪಕ್ಷ ಕಡೆಗಣನೆ ಮಾಡಿದ್ದರು. ಅಲ್ಲದೆ ದೇವೇಗೌಡರ ಮುಖ ನೋಡಿ ಯಾರು ಮತ ಹಾಕಲ್ಲ ಅಂತಾರೆ. ಹಾಗಿದ್ದರೆ ಇವತ್ತು ನಮ್ಮ ಪರವಾಗಿ ಇಷ್ಟೊಂದು ಜನ ಯಾಕಾಗಿ ಬಂದಿದ್ದಾರೆ ಎಂದು ಅರಸೀಕೆರೆಯಲ್ಲಿ ಭವಾನಿ ರೇವಣ್ಣ ಪ್ರಶ್ನೆ ಮಾಡಿದರು.
May 04, 2023, 4:16 pm IST
ಗುರುವಾರ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಶಿವರಾಜಕುಮಾರ್ ಪ್ರಚಾರಕ್ಕೆ ಬಿಜೆಪಿಯಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಡಾ. ರಾಜ್ ಅವರ ಕುಟುಂಬವನ್ನು ರಾಜಕೀಯ ಹೊರತಾಗಿ ನಾವು ನೋಡುತ್ತೇವೆ. ಡಾ.ರಾಜ್ ಅವರು ರಾಜಕೀಯ ಸೋಂಕನ್ನು ಅಂಟಿಸಿಕೊಂಡವರಲ್ಲ. ದಿವಂಗತ ಡಾ.ಪುನೀತ್ ರಾಜಕುಮಾರ್ ಹೆಸರಿನಲ್ಲಿ ಸದ್ಯ ವರುಣಾ ಕ್ಷೇತ್ರ ಅಭ್ಯರ್ಥಿಯಾಗಿರುವ ಬಿಜೆಪಿಯ ವಿ.ಸೋಮಣ್ಣ ಅವರು ಆಸ್ಪತ್ರೆ ಕಟ್ಟಿದ್ದರು. ಆದರೆ ಇಂದು ಒಬ್ಬರ ವ್ಯಕ್ತಿಪರವಾಗಿ ಶಿವಣ್ಣ ಅವರು ಪ್ರಚಾರಕ್ಕಿಳಿದಿರುವುದು ಸರಿಯಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಇತ್ತ ವಿ.ಸೋಮಣ್ಣ ಸಹ ಅಸಮಾಧಾನ ಹೊರ ಹಾಕಿದ್ದಾರೆ.
May 04, 2023, 4:15 pm IST
ಈವರೆಗೆ ಬಿ.ಎಸ್. ಯಡಿಯೂರಪ್ಪನವರ ಕರ್ಮಭೂಮಿಯಾಗಿದ್ದ ಶಿಕಾರಿಪುರ, ನನಗೆ ಜನ್ಮಭೂಮಿಯೂ ಹೌದು. ಇದೀಗ ನಾನು ಇದನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ. ಶಿಕಾರಿಪುರದ ಎಲ್ಲಾ ಬೂತ್ಗಳಿಗೆ ಈಗಾಗಲೇ 3 ಬಾರಿ ಭೇಟಿ ನೀಡಿ ಮತಯಾಚಿಸಿದ್ದೇನೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
May 04, 2023, 3:53 pm IST
ವರುಣಾದಲ್ಲಿ ಶಿವಣ್ಣ ಪ್ರಚಾರಕ್ಕೆ ಸೋಮಣ್ಣ ಅಸಮಾಧಾನ?
ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ ಅದಕ್ಕಾಗಿಯೇ ಜನರನ್ನು ಸೇರಿಸಲು ಚಿತ್ರರಂಗದವರನ್ನು ಕರೆಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದ ಜೊತೆ ನನಗೆ 40 ವರ್ಷದ ಅವಿನಾಭಾವ ಸಂಬಂಧವಿದೆ. ನಮ್ಮ ಕ್ಷೇತ್ರದಲ್ಲಿ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ದೊಡ್ಡ ಆಸ್ಪತ್ರೆ ಕಟ್ಟಿಸಿದ್ದೇನೆ. ವಿಜಯ್, ರಮ್ಯಾ ಬಗ್ಗೆ ಗೊತ್ತಿಲ್ಲ ಆದರೆ ಶಿವರಾಜ್ಕುಮಾರ್ ಯಾಕೆ ಪ್ರಚಾರಕ್ಕೆ ಬಂದ್ರೋ ಗೊತ್ತಿಲ್ಲ ಎಂದು ಪರೋಕ್ಷವಾಗಿಯೇ ಅಸಮಾಧಾನ ಹೊರಹಾಕಿದರು
May 04, 2023, 3:38 pm IST
ಅರುಣ್ ಕುಮಾರ್ ಪುತ್ತಿಲ
ಅರುಣ್ ಕುಮಾರ್ ಪುತ್ತಿಲ ಪಕ್ಷದ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾ ಅವರ ಹೆಸರು ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಅರುಣ್ ಕುಮಾರ್ ಪುತ್ತಿಲಗೆ ನಾಚಿಗೆ ಆಗಬೇಕು - ಡಾ. ಕಲ್ಲಡ್ಕ ಪ್ರಭಾಕರ ಭಟ್
May 04, 2023, 2:49 pm IST
ತೆರೆದ ವಾಹನದಲ್ಲಿ ನಿಂತು ದೇವೇಗೌಡರ ಭರ್ಜರಿ ಚುನಾವಣಾ ಪ್ರಚಾರ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಗಂಡಸಿ ಗ್ರಾಮದಲ್ಲಿ ನಡೆದ ಜೆಡಿಎಸ್ ರೋಡ್ ಶೋನಲ್ಲಿ ತೆರೆದ ವಾಹನದಲ್ಲಿ ನಿಂತು ದೇವೇಗೌಡರು ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾಜಿ ಸಚಿವ ಎಚ್.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಕೂಡ ಚುನಾವಣಾ ಪ್ರಚಾರ ನಡೆಸಿದ್ದು, ದೇವೇಗೌಡರನ್ನು ಕಂಡ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಹರ್ಷೋದ್ಗಾರದಿಂದ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
May 04, 2023, 2:40 pm IST
ಡಿಕೆಶಿ ಹೆಲಿಕಾಪ್ಟರ್ ಪಕ್ಕದಲ್ಲೆ ಬಿದ್ದ ಬೆಂಕಿ
ಹೊನ್ನಾವರದ ರಾಮತೀರ್ಥ ಬಳಿ ಕೆಪಿಸಿಸಿ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್ ಪಕ್ಕದಲ್ಲೆ ಬೆಂಕಿ ಬಿದ್ದಿದೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಘಟನೆ. ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಬಂದು ಲ್ಯಾಂಡ್ ಆಗುತ್ತಿದ್ದಂತೆ ಪಕ್ಕದಲ್ಲೆ ಇದ್ದ ಒಣ ಹುಲ್ಲಿಗೆ ಬೆಂಕಿ ತಗುಲಿದೆ. ಮೊನ್ನೆಯಷ್ಟೇ ಹದ್ದು ಡಿಕ್ಕಿ ಹೊಡೆದ ಪರಿಣಾಮ ಡಿಕೆಶಿ ಅವರ ಹೆಲಿಕಾಪ್ಟರ್ ಗ್ಲಾಸು ಪುಡಿ ಪುಡಿಯಾಗಿತ್ತು.
May 04, 2023, 2:36 pm IST
ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾಪವಿಲ್ಲ
ನಾವು ನಮ್ಮ ಪ್ರಣಾಳಿಕೆಯಲ್ಲಿ ಪಿಎಫ್ಐ ಮತ್ತು ಬಜರಂಗ ದಳ ಎರಡನ್ನೂ ಉಲ್ಲೇಖಿಸಿದ್ದೇವೆ. ಇಲ್ಲಿ ಒಂದು ಸಂಘಟನೆಯನ್ನು ನಿಷೇಧಿಸುವುದು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಬಜರಂಗದಳವನ್ನು ಕರ್ನಾಟಕ ಸರ್ಕಾರವು ನಿಷೇಧಿಸಲು ಸಾಧ್ಯವಿಲ್ಲ - ಮಾಜಿ ಸಿಎಂ ವೀರಪ್ಪ ಮೊಯ್ಲಿ.
May 04, 2023, 1:29 pm IST
ಜಗ್ಗೇಶ್ ಅಭಿನಯದ ಸಿನಿಮಾಕ್ಕೆ ತಟ್ಟಿದ ಚುನಾವಣೆ ಬಿಸಿ
ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ, ಜಗ್ಗೆಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಚುನಾವಣಾಧಿಕಾರಿಗಳು ಅಡ್ಡಿಪಡಿಸಿದ್ದಾರೆ. ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಚಿತ್ರವನ್ನು ಪ್ರದರ್ಶಿಸದಂತೆ ಅಧಿಕಾರಿಗಳು ಆದೇಶಿಸಿದ್ದಾರೆ, ಆದರೆ ಜಗ್ಗೇಶ್ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ, ಪ್ರಚಾರ ಮಾಡುತ್ತಿದ್ದಾರೆ ಎಂದು ಮನವೊಲಿಸಿದ ನಂತರ ಸಿನಿಮಾ ಪ್ರದರ್ಶನಕ್ಕೆ ಒಪ್ಪಿಗೆ ನೀಡಿದ್ದಾರೆ. ಆದರೆ, ಚುನಾವಣಾಧಿಕಾರಿಗಳು ಚಿತ್ರಮಂದಿರದ ಮುಂದಿನ ಪೋಸ್ಟರ್ ನಲ್ಲಿ ಜಗ್ಗೇಶ್ ಮುಖವನ್ನು ಮುಚ್ಚಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯಲ್ಲಿ ಈಗಿನ ನಿಷೇಧಿತ ಪಿಎಫ್ಐ ಸಂಘಟನೆಗೆ ಬಿಡುಗಡೆಯ ಭಾಗ್ಯ ನೀಡಿದ್ದರಿಂದ "ಶಾಂತಿಯ ತೋಟ"ದಲ್ಲಿ ಏನೆಲ್ಲಾ ಆಯಿತು, ಹಿಂದೂ ಕಾರ್ಯಕರ್ತರ ಕಗ್ಗೊಲೆಗಳು ನಡೆದವು ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾದರೆ ಈ ಬಾರಿ ಯಾವ ಕಾಂಗ್ರೆಸ್ ಯಾವ ಹುನ್ನಾರ ಹೆಣೆಯುತ್ತಿದೆ? ಎಂದು ಕರ್ನಾಟಕ ಬಿಜೆಪಿ ಪಕ್ಷ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದೆ.
May 04, 2023, 12:40 pm IST
ದೇವದುರ್ಗ: ಕಿಚ್ಚನನ್ನು ನೋಡಲು ನುಗ್ಗಿ ಬಂದ ಅಭಿಮಾನಿಗಳು
ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಕಿಚ್ಚ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಬ್ಯಾರಿಕೇಡ್ ಇದ್ದರು ಜನ ನುಗ್ಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
May 04, 2023, 12:28 pm IST
ರಾಜಾಜಿನಗರ ಬಿಜೆಪಿ ಅಭ್ಯರ್ಥಿ ವಿರುದ್ಧ ಮತದಾರರ ಆಕ್ರೋಶ
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ವಿರುದ್ಧ ಮತದಾರರು ಆಕ್ರೋಶ ವ್ಯಕ್ತಪಡಿಸಿರುವು ವಿಡಿಯೋವನ್ನು ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡಿದೆ. ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಮತದಾರರು ಇದೇ ರೀತಿ ಸಿಟ್ಟಾಗಿದ್ದಾರೆ ಎಂದು ಹೇಳಿದೆ.
May 04, 2023, 12:03 pm IST
ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಶನಿವಾರ, ಮೇ 6ರಂದು ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಇದೀಗ ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ.
May 04, 2023, 11:57 am IST
ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಕಪಿಮುಷ್ಟಿಯಲ್ಲಿದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ಕಾಂಗ್ರೆಸ್ನವರು ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಹೀಗಾಗಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣಾ ಕಿಚ್ಚು ಹೆಚ್ಚಾಗಿದೆ. ಈ ನಡುವೆ ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ. ಬಿಜೆಪಿ ಟಿಕೆಟ್ ಸಿಕ್ಕಿದ್ದಕ್ಕೆ ವಿಜುಗೌಡ ಪುತ್ರ ಸಮರ್ಥ್ ಪಿಸ್ತೂಲ್ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ವಿಚಿತ್ರವಾಗಿ ಸಂಭ್ರಮಿಸಿದ್ದರು. ಇದನ್ನು ಸಂಗಮೇಶ ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದ ಮೇಲೆ ಇವರಿಗೆ ಟಿಕೆಟ್ ಕೊಟ್ಟಿದ್ದೀರಿ? ಎಂದು ಬಿಜೆಪಿ ವರಿಷ್ಠರಿಗೆ ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಪ್ರಶ್ನೆ ಮಾಡಿದ್ದಾರೆ. 'ಗೂಂಡಾಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ' ಎಂದು ಬಿಜೆಪಿ ವಿರುದ್ಧ ಸಂಗಮೇಶ ಬಬಲೇಶ್ವರ ವಾಗ್ದಾಳಿ ಮಾಡಿದ್ದಾರೆ.
May 04, 2023, 11:19 am IST
ಬಜರಂಗದಳ ಬ್ಯಾನ್ ಬಗ್ಗೆ ರಮ್ಯಾ ಮಾತು
ಬಜರಂಗದಳ ಬ್ಯಾನ್ ಮಾಡುವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದೆ ರಮ್ಯಾ, "ಬ್ಯಾನ್ ಮಾಡುವುದು ಎನ್ನುವುದು ನನಗೆ ಇಷ್ಟವಿಲ್ಲ, ಒಂದು ಬ್ಯಾನ್ ಮಾಡಿದರೆ ಇನ್ನೊಂದು ರೀತಿ ಬರುತ್ತದೆ. ದ್ವೇಷ ಭಾಷಣ ಮಾಡುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಅವಕಾಶ ಇದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇವೆ. ಕಾನೂನು ಪಾಲಿಸುವುದು ಮುಖ್ಯ, ನಾನು ಪ್ರಣಾಳಿಕೆ ನೋಡಿಲ್ಲ, ಕಠಿಣ ಕಾನೂನು ಜಾರಿಮಾಡುತ್ತೇವೆ ಎಂದು ಹೇಳಿರಬೇಕು, ಇದನ್ನು ಬದಲಾವಣೆ ಮಾಡಿ ಸ್ಪಷ್ಟವಾಗಿ ಬರೆಯಬೇಕು" ಎಂದು ಹೇಳಿದರು.
May 04, 2023, 11:19 am IST
ರಾಯಚೂರು ಜಿಲ್ಲೆಯಲ್ಲಿ ಕಿಚ್ಚನ ಅಬ್ಬರ
ಕಿಚ್ಚ ಸುದೀಪ್ ಅವರು ಗುರುವಾರ, ಮೇ 4ರಂದು ರಾಯಚೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ದೇವದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ್ ಪರ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.
May 04, 2023, 11:18 am IST
ಚುನಾವಣೆಗೂ ಮುನ್ನವೇ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಮೂರು ದಶಕದ ನಂಟು ತೊರೆದು ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ರಾಜಕೀಯ ಜೀವನದಲ್ಲಿ ಮತೊಂದು ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ತಮ್ಮ ರಾಜಕೀಯ ನಿವೃತ್ತಿ ಯಾವಾಗ ಎನ್ನುವುದನ್ನು ಘೋಷಣೆ ಮಾಡಿದ್ದಾರೆ. ಇದು ನನ್ನ ಕೊನೆಯ ಚುನಾವಣೆ. ಇದೊಂದು ಬಾರಿಗೆ ನನಗೆ ಅವಕಾಶ ಮಾಡಿಕೊಡಿ ಎಂದು ಕರಪತ್ರಗಳ ಮುಖಾಂತರವೇ ಜಗದೀಶ್ ಶೆಟ್ಟರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
May 04, 2023, 11:17 am IST
ಸಚಿವ ನಾರಾಯಣಗೌಡ ಕಾರನ್ನು ಅಡ್ಡಗಟ್ಟಿ ನಿಂದನೆ
ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಕೆಸಿ ನಾರಾಯಣ ಗೌಡ ಅವರ ಕಾರನ್ನು ಜೆಡಿಎಸ್ ಬೆಂಬಲಿಗರು ಏಕಾಏಕಿ ಅಡ್ಡಗಟ್ಟಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಈ ಘಟನೆ ನಡೆದಿದೆ. 70 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಹೆಚ್ಚಾಗಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಕೂಡ ಹೋಗಿದೆ.
May 04, 2023, 11:15 am IST
ಬಜರಂಗ ದಳ ಸೇರಿದಂತೆ ಸಂವಿಧಾನ ವಿರೋಧಿ ಸಂಘಟನೆಗಳನ್ನು ನಿಷೇಧ ಮಾಡುವ ಉಲ್ಲೇಖವಿರುವ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕೆಎಸ್ ಈಶ್ವರಪ್ಪ
12 ವರ್ಷಗಳ ಬಿಜೆಪಿ ನಂಟು ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಬೆಂಬಲಿಗರು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದಾರೆ. ಇದೀಗ ಬಿಜೆಪಿಗೆ ಮತ್ತೊಂದು ಆಘಾತವಾಗಿದ್ದು, ಜಗದೀಶ್ ಶೆಟ್ಟರ್ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿ ನಗರದ ಹೊಸೂರಿನಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ, 12 ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ದೇವೇಂದ್ರ ಹರಿವಾಣ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
May 04, 2023, 11:09 am IST
ಹಾಸನ ತಾಲೂಕು ಅರಸೀಕೆರೆ
ಹಾಸನ ತಾಲೂಕು ಅರಸೀಕೆರೆಯ ಮಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡ ಪ್ರಚಾರ ನಡೆಸುತ್ತಿದ್ದ ವೇಳೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ. ಎರಡು ಪಕ್ಷದ ಕಾರ್ಯಕರ್ತರ ನಡುವೆ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳ ಮುಂದೆಯೇ ವಾಗ್ಯುದ್ದ.
May 04, 2023, 11:08 am IST
ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪ್ರಣಾಳಿಕೆ
ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕೆರೆಗಳ ಅಭಿವೃದ್ಧಿ, ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ, ವಿಶೇಷ ಕೈಗಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಭರವಸೆಗಳನ್ನು ಜನರಿಗೆ ನೀಡಿದ್ದಾರೆ.
May 04, 2023, 11:08 am IST
ಜೆಡಿಎಸ್ ಕಾರ್ಯಕರ್ತರಿಂದ ನಿಂದನೆ
ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಕೆಸಿ ನಾರಾಯಣ ಗೌಡ ಅವರ ಕಾರನ್ನು ಜೆಡಿಎಸ್ ಬೆಂಬಲಿಗರು ಏಕಾಏಕಿ ಅಡ್ಡಗಟ್ಟಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಈ ಘಟನೆ ನಡೆದಿದೆ.
READ MORE
8:43 AM, 4 May
ಸಿದ್ದರಾಮಯ್ಯ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ
ಸಿದ್ದರಾಮಯ್ಯ ಪರವಾಗಿ ರಮ್ಯಾ, ಶಿವರಾಜ್ ಕುಮಾರ್, ದುನಿಯಾ ವಿಜಯ್, ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ವರುಣಾದಲ್ಲಿ ಇಂದು ಪ್ರಚಾರ. ತಿಪಟೂರು, ಕೃಷ್ಣರಾಜಪೇಟೆ, ಹೊಸದುರ್ಗ, ಚಿತ್ರದುರ್ಗದಲ್ಲಿ ಇಂದು ಯಡಿಯೂರಪ್ಪ ಪ್ರಚಾರ.
8:45 AM, 4 May
ನನ್ನನ್ನು ಬಿಟ್ಟರೆ ಬೇರೆಯವರು ಮುಖ್ಯಮಂತ್ರಿ ಆಗಲ್ಲ: ಎಚ್ಡಿಕೆ
ಮಾಧ್ಯಮಗಳ ಹಲವು ಸಮೀಕ್ಷೆಯನ್ನ ಯಾವುದೇ ಕಾರಣಕ್ಕೂ ನಂಬಬೇಡಿ. ನನ್ನ ಮೇಲೆ ದೈವ ಶಕ್ತಿ ಇದೆ. ಹೀಗಾಗಿ, ನನ್ನನ್ನು ಬಿಟ್ಟರೆ ಬೇರೆಯವರು ಮುಖ್ಯಮಂತ್ರಿ ಆಗಲ್ಲಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಂದು ಭವಿಷ್ಯ ನುಡಿದಿದ್ದಾರೆ.
8:45 AM, 4 May
ಮೇ ಐದಕ್ಕೆ ಮತ್ತೆ ರಾಜ್ಯಕ್ಕೆ ಮೋದಿ
ಮಂಗಳವಾರದಿಂದ ರಾಜ್ಯ ಚುನಾವಣಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರು ಒಂದು ದಿನದ ಬಿಡುವಿನ ನಂತರ ಮತ್ತೆ ಶುಕ್ರವಾರ (ಮೇ 5) ನಗರಕ್ಕೆ ಆಗಮಿಸುತ್ತಿದ್ದಾರೆ. ಇಂದು ಕೂಡಾ ಮೂರೂ ಪ್ರಕ್ಷದ ಪ್ರಮುಖ ನಾಯಕರು ರಾಜ್ಯದೆಲ್ಲಡೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
8:49 AM, 4 May
ಅಂತಿಮ ಹಂತದ ಮತಬೇಟೆಗೆ ರಾಜಕೀಯ ಪಕ್ಷಗಳು ಪ್ಲಾನ್
ಅಂತಿಮ ಹಂತದಲ್ಲಿ ಮತಬೇಟೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ಲ್ಯಾನ್ ನಡೆಸಿವೆ. ಅಮಿತ್ ಶಾ ಗುರುವಾರ ಕಲಬುರಗಿಯಲ್ಲಿ ಅಬ್ಬರದ ಪ್ರಚಾರವನ್ನ ನಡೆಸಲಿದ್ದಾರೆ. ಇತ್ತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕನಕಗಿರಿ ಹಾಗೂ ಹಿರೇಕೇರೂರಿನಲ್ಲಿ ಪ್ರಚಾರ ನಡೆಸಿದರೇ, ಮಲ್ಲಿಕಾರ್ಜುನ್ ಖರ್ಗೆ ಅವವರು ಯಾದಗಿರಿ,ಸುರಪುರದಲ್ಲಿ ಪ್ರಚಾರ ನಡೆಸಲಿದ್ದಾರೆ.
9:23 AM, 4 May
ಕೊಡಗು ಜಿಲ್ಲೆಯ ಕುಶಾಲನಗರದ ಕಣಿವೆ ಸಮೀಪದ ಭುವನಗಿರಿ ನಿವಾಸಿ ಕಾಳಮ್ಮ (104) ಮನೆಯಿಂದಲೇ ಮತದಾನ ಮಾಡಿದ್ದಾರೆ. ಶಿಥಿಲವಾದ ಮನೆಯಲ್ಲಿ ವಾಸಿಸುತ್ತಿರುವ ಕಾಳಮ್ಮ ತಮ್ಮ ಹಕ್ಕು ಚಲಾವಣೆ ಮಾಡಿದ ಫೋಟೋ ಈಗ ಮೆಚ್ಚುಗೆಗೆ ಪಾತ್ರವಾಗಿದೆ.
9:25 AM, 4 May
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕ ಗಾಂಧಿಯವರು ಗುರುವಾರ (04-05-2023) ದಂದು ಕೊಪ್ಪಳ ಜಿಲ್ಲೆ ಕನಕಗಿರಿ ಮತ್ತು ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಸಾರ್ವಜನಿಕ ಸಭೆ.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಬ್ಬರದ ಪ್ರಚಾರಕ್ಕೆ ವೇದಿಕೆ ಸಜ್ಜಾಗಿದೆ. ಕ್ಷೇತ್ರದ ತುಂಬೆಲ್ಲ ಇಂದು ಗುರುವಾರ ಸಿನಿಮಾ ತಾರೆಯರು ತುಂಬಿಕೊಂಡಿದ್ದಾರೆ. ಇವತ್ತಿನ ಪ್ರಚಾರದ ಹೈಲೇಟ್ ಅಂದರೆ ಅದು 'ಆರ್ಯನ್' ಚಿತ್ರ ಜೋಡಿಯಾದ ಸೆಂಚುರಿ ಸ್ಟಾರ್ ಡಾ.ಶಿವರಾಜ್ ಕುಮಾರ್, ಮೋಹಕತಾರೆ ರಮ್ಯಾ ಅವರು ಸಿದ್ದರಾಮಯ್ಯನವರ ಪರ ಮತಯಾಚನೆ ಮಾಡಲಿದ್ದಾರೆ. ಅವರೊಂದಿಗೆ ನಾಯಕರಾದ ಮಧು ಬಂಗಾರಪ್ಪ, ಜಮೀರ್ ಅಹ್ಮದ್, ಗೀತಾ ಶಿವರಾಜ್ ಕುಮಾರ್ ಹಾಗೂ ಮತ್ತಿತರರು ಸಿದ್ದರಾಮಯ್ಯನವರಿಗೆ ಸಾತ್ ನೀಡಲಿದ್ದಾರೆ.
11:08 AM, 4 May
ಜೆಡಿಎಸ್ ಕಾರ್ಯಕರ್ತರಿಂದ ನಿಂದನೆ
ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಕೆಸಿ ನಾರಾಯಣ ಗೌಡ ಅವರ ಕಾರನ್ನು ಜೆಡಿಎಸ್ ಬೆಂಬಲಿಗರು ಏಕಾಏಕಿ ಅಡ್ಡಗಟ್ಟಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಈ ಘಟನೆ ನಡೆದಿದೆ.
11:08 AM, 4 May
ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪ್ರಣಾಳಿಕೆ
ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕೆರೆಗಳ ಅಭಿವೃದ್ಧಿ, ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ, ವಿಶೇಷ ಕೈಗಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಭರವಸೆಗಳನ್ನು ಜನರಿಗೆ ನೀಡಿದ್ದಾರೆ.
11:09 AM, 4 May
ಹಾಸನ ತಾಲೂಕು ಅರಸೀಕೆರೆ
ಹಾಸನ ತಾಲೂಕು ಅರಸೀಕೆರೆಯ ಮಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡ ಪ್ರಚಾರ ನಡೆಸುತ್ತಿದ್ದ ವೇಳೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ. ಎರಡು ಪಕ್ಷದ ಕಾರ್ಯಕರ್ತರ ನಡುವೆ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳ ಮುಂದೆಯೇ ವಾಗ್ಯುದ್ದ.
11:10 AM, 4 May
12 ವರ್ಷಗಳ ಬಿಜೆಪಿ ನಂಟು ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಬೆಂಬಲಿಗರು
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದಾರೆ. ಇದೀಗ ಬಿಜೆಪಿಗೆ ಮತ್ತೊಂದು ಆಘಾತವಾಗಿದ್ದು, ಜಗದೀಶ್ ಶೆಟ್ಟರ್ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿ ನಗರದ ಹೊಸೂರಿನಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ, 12 ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ದೇವೇಂದ್ರ ಹರಿವಾಣ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
11:15 AM, 4 May
ಬಜರಂಗ ದಳ ಸೇರಿದಂತೆ ಸಂವಿಧಾನ ವಿರೋಧಿ ಸಂಘಟನೆಗಳನ್ನು ನಿಷೇಧ ಮಾಡುವ ಉಲ್ಲೇಖವಿರುವ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕೆಎಸ್ ಈಶ್ವರಪ್ಪ
ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಕೆಸಿ ನಾರಾಯಣ ಗೌಡ ಅವರ ಕಾರನ್ನು ಜೆಡಿಎಸ್ ಬೆಂಬಲಿಗರು ಏಕಾಏಕಿ ಅಡ್ಡಗಟ್ಟಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ರಾಜಘಟ್ಟ ಗೇಟ್ ಬಳಿ ಈ ಘಟನೆ ನಡೆದಿದೆ. 70 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಹೆಚ್ಚಾಗಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಕೂಡ ಹೋಗಿದೆ.
11:18 AM, 4 May
ಚುನಾವಣೆಗೂ ಮುನ್ನವೇ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಮೂರು ದಶಕದ ನಂಟು ತೊರೆದು ಇತ್ತೀಚಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ರಾಜಕೀಯ ಜೀವನದಲ್ಲಿ ಮತೊಂದು ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ. ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ತಮ್ಮ ರಾಜಕೀಯ ನಿವೃತ್ತಿ ಯಾವಾಗ ಎನ್ನುವುದನ್ನು ಘೋಷಣೆ ಮಾಡಿದ್ದಾರೆ. ಇದು ನನ್ನ ಕೊನೆಯ ಚುನಾವಣೆ. ಇದೊಂದು ಬಾರಿಗೆ ನನಗೆ ಅವಕಾಶ ಮಾಡಿಕೊಡಿ ಎಂದು ಕರಪತ್ರಗಳ ಮುಖಾಂತರವೇ ಜಗದೀಶ್ ಶೆಟ್ಟರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
11:19 AM, 4 May
ರಾಯಚೂರು ಜಿಲ್ಲೆಯಲ್ಲಿ ಕಿಚ್ಚನ ಅಬ್ಬರ
ಕಿಚ್ಚ ಸುದೀಪ್ ಅವರು ಗುರುವಾರ, ಮೇ 4ರಂದು ರಾಯಚೂರು ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ದೇವದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ್ ಪರ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.
11:19 AM, 4 May
ಬಜರಂಗದಳ ಬ್ಯಾನ್ ಬಗ್ಗೆ ರಮ್ಯಾ ಮಾತು
ಬಜರಂಗದಳ ಬ್ಯಾನ್ ಮಾಡುವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದೆ ರಮ್ಯಾ, "ಬ್ಯಾನ್ ಮಾಡುವುದು ಎನ್ನುವುದು ನನಗೆ ಇಷ್ಟವಿಲ್ಲ, ಒಂದು ಬ್ಯಾನ್ ಮಾಡಿದರೆ ಇನ್ನೊಂದು ರೀತಿ ಬರುತ್ತದೆ. ದ್ವೇಷ ಭಾಷಣ ಮಾಡುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಅವಕಾಶ ಇದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇವೆ. ಕಾನೂನು ಪಾಲಿಸುವುದು ಮುಖ್ಯ, ನಾನು ಪ್ರಣಾಳಿಕೆ ನೋಡಿಲ್ಲ, ಕಠಿಣ ಕಾನೂನು ಜಾರಿಮಾಡುತ್ತೇವೆ ಎಂದು ಹೇಳಿರಬೇಕು, ಇದನ್ನು ಬದಲಾವಣೆ ಮಾಡಿ ಸ್ಪಷ್ಟವಾಗಿ ಬರೆಯಬೇಕು" ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣಾ ಕಿಚ್ಚು ಹೆಚ್ಚಾಗಿದೆ. ಈ ನಡುವೆ ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ. ಬಿಜೆಪಿ ಟಿಕೆಟ್ ಸಿಕ್ಕಿದ್ದಕ್ಕೆ ವಿಜುಗೌಡ ಪುತ್ರ ಸಮರ್ಥ್ ಪಿಸ್ತೂಲ್ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ವಿಚಿತ್ರವಾಗಿ ಸಂಭ್ರಮಿಸಿದ್ದರು. ಇದನ್ನು ಸಂಗಮೇಶ ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದ ಮೇಲೆ ಇವರಿಗೆ ಟಿಕೆಟ್ ಕೊಟ್ಟಿದ್ದೀರಿ? ಎಂದು ಬಿಜೆಪಿ ವರಿಷ್ಠರಿಗೆ ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಪ್ರಶ್ನೆ ಮಾಡಿದ್ದಾರೆ. 'ಗೂಂಡಾಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ' ಎಂದು ಬಿಜೆಪಿ ವಿರುದ್ಧ ಸಂಗಮೇಶ ಬಬಲೇಶ್ವರ ವಾಗ್ದಾಳಿ ಮಾಡಿದ್ದಾರೆ.
11:57 AM, 4 May
ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಕಪಿಮುಷ್ಟಿಯಲ್ಲಿದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ಕಾಂಗ್ರೆಸ್ನವರು ಎಸ್.ಡಿ.ಪಿ.ಐ ಮತ್ತು ಪಿಎಫ್ಐ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಹೀಗಾಗಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದರು.
12:03 PM, 4 May
ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಶನಿವಾರ, ಮೇ 6ರಂದು ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಇದೀಗ ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ.
12:28 PM, 4 May
ರಾಜಾಜಿನಗರ ಬಿಜೆಪಿ ಅಭ್ಯರ್ಥಿ ವಿರುದ್ಧ ಮತದಾರರ ಆಕ್ರೋಶ
ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ವಿರುದ್ಧ ಮತದಾರರು ಆಕ್ರೋಶ ವ್ಯಕ್ತಪಡಿಸಿರುವು ವಿಡಿಯೋವನ್ನು ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡಿದೆ. ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಮತದಾರರು ಇದೇ ರೀತಿ ಸಿಟ್ಟಾಗಿದ್ದಾರೆ ಎಂದು ಹೇಳಿದೆ.
12:40 PM, 4 May
ದೇವದುರ್ಗ: ಕಿಚ್ಚನನ್ನು ನೋಡಲು ನುಗ್ಗಿ ಬಂದ ಅಭಿಮಾನಿಗಳು
ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಕಿಚ್ಚ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಬ್ಯಾರಿಕೇಡ್ ಇದ್ದರು ಜನ ನುಗ್ಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಜನರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯಲ್ಲಿ ಈಗಿನ ನಿಷೇಧಿತ ಪಿಎಫ್ಐ ಸಂಘಟನೆಗೆ ಬಿಡುಗಡೆಯ ಭಾಗ್ಯ ನೀಡಿದ್ದರಿಂದ "ಶಾಂತಿಯ ತೋಟ"ದಲ್ಲಿ ಏನೆಲ್ಲಾ ಆಯಿತು, ಹಿಂದೂ ಕಾರ್ಯಕರ್ತರ ಕಗ್ಗೊಲೆಗಳು ನಡೆದವು ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾದರೆ ಈ ಬಾರಿ ಯಾವ ಕಾಂಗ್ರೆಸ್ ಯಾವ ಹುನ್ನಾರ ಹೆಣೆಯುತ್ತಿದೆ? ಎಂದು ಕರ್ನಾಟಕ ಬಿಜೆಪಿ ಪಕ್ಷ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದೆ.
1:29 PM, 4 May
ಜಗ್ಗೇಶ್ ಅಭಿನಯದ ಸಿನಿಮಾಕ್ಕೆ ತಟ್ಟಿದ ಚುನಾವಣೆ ಬಿಸಿ
ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ, ಜಗ್ಗೆಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಚುನಾವಣಾಧಿಕಾರಿಗಳು ಅಡ್ಡಿಪಡಿಸಿದ್ದಾರೆ. ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಚಿತ್ರವನ್ನು ಪ್ರದರ್ಶಿಸದಂತೆ ಅಧಿಕಾರಿಗಳು ಆದೇಶಿಸಿದ್ದಾರೆ, ಆದರೆ ಜಗ್ಗೇಶ್ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ, ಪ್ರಚಾರ ಮಾಡುತ್ತಿದ್ದಾರೆ ಎಂದು ಮನವೊಲಿಸಿದ ನಂತರ ಸಿನಿಮಾ ಪ್ರದರ್ಶನಕ್ಕೆ ಒಪ್ಪಿಗೆ ನೀಡಿದ್ದಾರೆ. ಆದರೆ, ಚುನಾವಣಾಧಿಕಾರಿಗಳು ಚಿತ್ರಮಂದಿರದ ಮುಂದಿನ ಪೋಸ್ಟರ್ ನಲ್ಲಿ ಜಗ್ಗೇಶ್ ಮುಖವನ್ನು ಮುಚ್ಚಿದ್ದಾರೆ.
2:36 PM, 4 May
ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾಪವಿಲ್ಲ
ನಾವು ನಮ್ಮ ಪ್ರಣಾಳಿಕೆಯಲ್ಲಿ ಪಿಎಫ್ಐ ಮತ್ತು ಬಜರಂಗ ದಳ ಎರಡನ್ನೂ ಉಲ್ಲೇಖಿಸಿದ್ದೇವೆ. ಇಲ್ಲಿ ಒಂದು ಸಂಘಟನೆಯನ್ನು ನಿಷೇಧಿಸುವುದು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಬಜರಂಗದಳವನ್ನು ಕರ್ನಾಟಕ ಸರ್ಕಾರವು ನಿಷೇಧಿಸಲು ಸಾಧ್ಯವಿಲ್ಲ - ಮಾಜಿ ಸಿಎಂ ವೀರಪ್ಪ ಮೊಯ್ಲಿ.
2:40 PM, 4 May
ಡಿಕೆಶಿ ಹೆಲಿಕಾಪ್ಟರ್ ಪಕ್ಕದಲ್ಲೆ ಬಿದ್ದ ಬೆಂಕಿ
ಹೊನ್ನಾವರದ ರಾಮತೀರ್ಥ ಬಳಿ ಕೆಪಿಸಿಸಿ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್ ಪಕ್ಕದಲ್ಲೆ ಬೆಂಕಿ ಬಿದ್ದಿದೆ. ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಘಟನೆ. ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಬಂದು ಲ್ಯಾಂಡ್ ಆಗುತ್ತಿದ್ದಂತೆ ಪಕ್ಕದಲ್ಲೆ ಇದ್ದ ಒಣ ಹುಲ್ಲಿಗೆ ಬೆಂಕಿ ತಗುಲಿದೆ. ಮೊನ್ನೆಯಷ್ಟೇ ಹದ್ದು ಡಿಕ್ಕಿ ಹೊಡೆದ ಪರಿಣಾಮ ಡಿಕೆಶಿ ಅವರ ಹೆಲಿಕಾಪ್ಟರ್ ಗ್ಲಾಸು ಪುಡಿ ಪುಡಿಯಾಗಿತ್ತು.
2:49 PM, 4 May
ತೆರೆದ ವಾಹನದಲ್ಲಿ ನಿಂತು ದೇವೇಗೌಡರ ಭರ್ಜರಿ ಚುನಾವಣಾ ಪ್ರಚಾರ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಗಂಡಸಿ ಗ್ರಾಮದಲ್ಲಿ ನಡೆದ ಜೆಡಿಎಸ್ ರೋಡ್ ಶೋನಲ್ಲಿ ತೆರೆದ ವಾಹನದಲ್ಲಿ ನಿಂತು ದೇವೇಗೌಡರು ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾಜಿ ಸಚಿವ ಎಚ್.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಕೂಡ ಚುನಾವಣಾ ಪ್ರಚಾರ ನಡೆಸಿದ್ದು, ದೇವೇಗೌಡರನ್ನು ಕಂಡ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಹರ್ಷೋದ್ಗಾರದಿಂದ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
3:38 PM, 4 May
ಅರುಣ್ ಕುಮಾರ್ ಪುತ್ತಿಲ
ಅರುಣ್ ಕುಮಾರ್ ಪುತ್ತಿಲ ಪಕ್ಷದ ವಿರುದ್ಧವೇ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾ ಅವರ ಹೆಸರು ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಅರುಣ್ ಕುಮಾರ್ ಪುತ್ತಿಲಗೆ ನಾಚಿಗೆ ಆಗಬೇಕು - ಡಾ. ಕಲ್ಲಡ್ಕ ಪ್ರಭಾಕರ ಭಟ್
3:53 PM, 4 May
ವರುಣಾದಲ್ಲಿ ಶಿವಣ್ಣ ಪ್ರಚಾರಕ್ಕೆ ಸೋಮಣ್ಣ ಅಸಮಾಧಾನ?
ವರುಣಾದಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ ಅದಕ್ಕಾಗಿಯೇ ಜನರನ್ನು ಸೇರಿಸಲು ಚಿತ್ರರಂಗದವರನ್ನು ಕರೆಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದ ಜೊತೆ ನನಗೆ 40 ವರ್ಷದ ಅವಿನಾಭಾವ ಸಂಬಂಧವಿದೆ. ನಮ್ಮ ಕ್ಷೇತ್ರದಲ್ಲಿ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ದೊಡ್ಡ ಆಸ್ಪತ್ರೆ ಕಟ್ಟಿಸಿದ್ದೇನೆ. ವಿಜಯ್, ರಮ್ಯಾ ಬಗ್ಗೆ ಗೊತ್ತಿಲ್ಲ ಆದರೆ ಶಿವರಾಜ್ಕುಮಾರ್ ಯಾಕೆ ಪ್ರಚಾರಕ್ಕೆ ಬಂದ್ರೋ ಗೊತ್ತಿಲ್ಲ ಎಂದು ಪರೋಕ್ಷವಾಗಿಯೇ ಅಸಮಾಧಾನ ಹೊರಹಾಕಿದರು
4:15 PM, 4 May
ಈವರೆಗೆ ಬಿ.ಎಸ್. ಯಡಿಯೂರಪ್ಪನವರ ಕರ್ಮಭೂಮಿಯಾಗಿದ್ದ ಶಿಕಾರಿಪುರ, ನನಗೆ ಜನ್ಮಭೂಮಿಯೂ ಹೌದು. ಇದೀಗ ನಾನು ಇದನ್ನು ಕರ್ಮಭೂಮಿಯನ್ನಾಗಿ ಮಾಡಿಕೊಳ್ಳುತ್ತಿದ್ದೇನೆ. ಶಿಕಾರಿಪುರದ ಎಲ್ಲಾ ಬೂತ್ಗಳಿಗೆ ಈಗಾಗಲೇ 3 ಬಾರಿ ಭೇಟಿ ನೀಡಿ ಮತಯಾಚಿಸಿದ್ದೇನೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
4:16 PM, 4 May
ಗುರುವಾರ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರ ಶಿವರಾಜಕುಮಾರ್ ಪ್ರಚಾರಕ್ಕೆ ಬಿಜೆಪಿಯಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಡಾ. ರಾಜ್ ಅವರ ಕುಟುಂಬವನ್ನು ರಾಜಕೀಯ ಹೊರತಾಗಿ ನಾವು ನೋಡುತ್ತೇವೆ. ಡಾ.ರಾಜ್ ಅವರು ರಾಜಕೀಯ ಸೋಂಕನ್ನು ಅಂಟಿಸಿಕೊಂಡವರಲ್ಲ. ದಿವಂಗತ ಡಾ.ಪುನೀತ್ ರಾಜಕುಮಾರ್ ಹೆಸರಿನಲ್ಲಿ ಸದ್ಯ ವರುಣಾ ಕ್ಷೇತ್ರ ಅಭ್ಯರ್ಥಿಯಾಗಿರುವ ಬಿಜೆಪಿಯ ವಿ.ಸೋಮಣ್ಣ ಅವರು ಆಸ್ಪತ್ರೆ ಕಟ್ಟಿದ್ದರು. ಆದರೆ ಇಂದು ಒಬ್ಬರ ವ್ಯಕ್ತಿಪರವಾಗಿ ಶಿವಣ್ಣ ಅವರು ಪ್ರಚಾರಕ್ಕಿಳಿದಿರುವುದು ಸರಿಯಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಇತ್ತ ವಿ.ಸೋಮಣ್ಣ ಸಹ ಅಸಮಾಧಾನ ಹೊರ ಹಾಕಿದ್ದಾರೆ.
Karnataka Assembly Poll (ಕರ್ನಾಟಕ ವಿಧಾನಸಭಾ ಚುನಾವಣೆ) 2023 LIVE News: Get the latest highlights on Karnataka Election today's news on BJP, JDS and congress over Bajrang Dal Controversy.