ಮುಂದಿನ ಸಿಎಂ ಸಿದ್ದರಾಮಯ್ಯ ಆಗ್ಬೇಕು: ಡಿಕೆಶಿ ಗೂ ಕೇರ್ ಮಾಡದೇ ಬಹಿರಂಗ ಹೇಳಿಕೆ ಕೊಟ್ಟ ಕಾಂಗ್ರೆಸ್ ನಾಯಕರು
ಇನ್ನೇನು ಚುನಾವಣೆಗೆ ಎರಡು ತಿಂಗಳು ಮಾತ್ರ ಬಾಕಿ ಇರುವಾಗಲೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಕಾಂಗ್ರೆಸ್ ನಾಯಕರು ಇದೀಗ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಕಾವು ಪಡೆದುಕೊಳ್ಳಲಿದೆ.
ಕೊಪ್ಪಳ,ಫೆಬ್ರವರಿ18: ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರು ಎಂಬಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿತ್ತು. ಈಗಾಗಲೇ ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಎಂಬ ಬಗ್ಗೆ ಇಬ್ಬರು ನಾಯಕರ ಬೆಂಬಲಿಗರ ಬಹಿರಂಗ ಹೇಳಿಕೆಗಳಿಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಆದರೆ ಇದೀಗ ಮತ್ತೊಮ್ಮೆ ಅದು ಶುರುವಾಗಿದ್ದು, ಸಿದ್ದರಾಮಯ್ಯ ಅವರ ಬೆಂಬಲಿಗರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೂ ಕೇರ್ ಮಾಡದೇ ಬಹಿರಂಗವಾಗಿಯೇ ಹೇಳಿಕೆಯನ್ನ ನೀಡುತ್ತಿದ್ದಾರೆ.
ಇನ್ನೇನು ಚುನಾವಣೆಗೆ ಎರಡು ತಿಂಗಳು ಮಾತ್ರ ಬಾಕಿ ಇರುವಾಗಲೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಕಾಂಗ್ರೆಸ್ ನಾಯಕರು ಇದೀಗ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಕಾವು ಪಡೆದುಕೊಳ್ಳಲಿದೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು: ಬೈರತಿ ಸುರೇಶ್
ಸಿದ್ದರಾಮಯ್ಯ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅನೇಕ ಭಾಗ್ಯಗಳನ್ನು ಕೊಟ್ಟಿದ್ದಾರೆ. ಅವರು ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಹಿಂದಿನ ಎಲ್ಲಾ ಅಭಿವೃದ್ಧಿ ಕೆಲಸಗಳು ಮರಳಿ ಬರಲು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ.
ಯಲಬುರ್ಗಾದಲ್ಲಿ ಶನಿವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಹಾಗೂ ಶಿಲಾಮಂಟಪ ಉದ್ಘಾಟನೆ ಬಳಿಕ ಮಾತನಾಡಿದ ಬೈರತಿ ಸುರೇಶ್ , ರಾಜ್ಯ ಅಭಿವೃದ್ಧಿ ಆಗಲು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಸೂಕ್ತ ಎಂದು ಭಾಷಣದ ಮೇಜು ಕುಟ್ಟಿ ಹೇಳಿಕೆ ನೀಡಿದ್ದಾರೆ.

ಮರಳಿ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಮಾಡಬೇಕು:ರಾಘವೆಂದ್ರ ಹಿಟ್ನಾಳ್
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊಟ್ಟ ಅನೇಕ ಭಾಗ್ಯಗಳಿಂದ ಅಭಿವೃದ್ಧಿ ಕೆಲಸಗಳು ಆಗಿವೆ. ಮರಳಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೆಂದ್ರ ಹಿಟ್ನಾಳ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರೂ ಕೈ ಜೋಡಿಸಬೇಕು ಈ ವೇಳೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು; ಬಸವರಾಜ ರಾಯರೆಡ್ಡಿ
ಯಾವ ವ್ಯಕ್ತಿ ಯಾವ ಪಕ್ಷದವರೇ ಇರಲಿ, ಒಳ್ಳೆಯ ಕೆಲಸ ಮಾಡಿದಾಗ ಅವರನ್ನು ಮೆಚ್ಚಿಕೊಳ್ಳಬೇಕು. ಜನಪರವಾಗಿ ಇರುವ, ಆರ್ಥಿಕ ಶಿಸ್ತು ಹೊಂದಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರಬಾರದು: ಸಿದ್ದರಾಮಯ್ಯ
ಚುನಾವಣೆಗೆ ಮುಖ್ಯವಾಗಿ ಬೇಕಾಗಿರುವುದು ಅಭಿವೃದ್ದಿಯ ಕೆಲಸಗಳು. ಆದರೆ, ನಳಿನ್ ಕುಮಾರ್ ಕಟೀಲ್ ಅಭಿವೃದ್ದಿ ಬಿಟ್ಟು ಕಟೀಲ್, ಲವ್ ಜಿಹಾದ್ ಬಗ್ಗೆ ಮಾತನಾಡಿ ಅಂತಾ ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರಬಾರದು ಎಂದು ಸಿದ್ದರಾಮಯ್ಯ ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications