Lok Sabha Election 2024: ಕರ್ನಾಟಕ ಚುನಾವಣಾ ಆಯೋಗದ ಕಣ್ಣು ನೀರಿನ ಟ್ಯಾಂಕರ್ಗಳ ಮೇಲೆ-ಕಾರಣ ಏನು?
ಬೆಂಗಳೂರು, ಮಾರ್ಚ್, 17: ಮಳೆ ಕೊರತೆ ಹಿನ್ನೆಲೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೀರಿ ಅಭಾವ ಎದ್ದು ಕಾಣುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಟ್ಯಾಂಕರ್ಗಳಲ್ಲಿ ನೀರು ಹೊಡೆಸಿಕೊಳ್ಳುತ್ತಿರುವ ಪರಿಸ್ಥಿತಿ ಎದುರಾಗಿದೆ. ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆ ಜನರನ್ನು ಸೆಳೆಯಲು ನೀರು ಹೊಡೆಸುವ ನೆಪದಲ್ಲಿ ರಾಜರಾಣಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಪ್ರಚಾರಕ್ಕಿಳಿದಿರುವುದು ಕಂಡುಬಂದಿದೆ. ಆದ್ದರಿಂದ ಕರ್ನಾಟಕ ಚುನಾವಣಾ ಆಯೋಗವು ನೀರಿನ ಟ್ಯಾಂಕರ್ಗಳ ಮೇಲೆ ಹೆಚ್ಚಿನ ನಿಗಾ ವಹಿಸಿದೆ.
ರಾಜ್ಯದ 28 ಲೋಕಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಮೊದಲ ಹಂತ ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26ರಂದು ಬೆಂಗಳೂರು ಉತ್ತರ ಸೇರಿದಂತೆ ದಕ್ಷಿಣ ಕರ್ನಾಟಕದ ಹದಿನಾಲ್ಕು ಸ್ಥಾನಗಳು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ ಮತ್ತು ಕರಾವಳಿ ಪ್ರದೇಶಗಳಿಗೆ ಮತದಾನ ನಡೆಯಲಿದೆ.

ಉಳಿದ ಹದಿನಾಲ್ಕು ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ನಡುವೆ ರಾಜ್ಯದ ಚುನಾವಣಾ ಆಯೋಗವು ನೀರಿನ ಟ್ಯಾಂಕರ್ಗಳ ಮೇಲೆ ಕಣ್ಣಿಟ್ಟಿದೆ. ಆಯೋಗವು ನೀರಿನ ಟ್ಯಾಂಕರ್ಗಳ ಮೇಲೆ ಕಣ್ಣಿಡುತ್ತದೆ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ಅಥವಾ ವ್ಯಕ್ತಿಗಳು ಮತದಾರರನ್ನು ದುರ್ಬಳಕೆ ಮಾಡಲು ನೀರು ಸರಬರಾಜು ಮಾಡುವುದನ್ನು ಗಮನಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಒಂದು ರಾಜಕೀಯ ಪಕ್ಷದಿಂದ ಸೌಲಭ್ಯಗಳನ್ನು ಒದಗಿಸುವುದು ಮತದಾರರ ಮೇಲೆ ಪ್ರಭಾವ ಬೀರುವ ಕಾರಣ ಅದನ್ನು ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಅಕ್ರಮಗಳನ್ನು ಯಾರಾದರೂ ಗುರುತಿಸಿದರೆ 1950ಗೆ ಡಯಲ್ ಮಾಡುವ ಸಮಸ್ಯೆಯನ್ನು ವರದಿ ಮಾಡುವ ಮೂಲಕ ಚುನಾವಣಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬಹುದು ಎಂದು ತಿಳಿಸಿದ್ದಾರೆ.
ಮಾದರಿ ನೀತಿಸಂಹಿತೆ ಜಾರಿಗೆ ಆದೇಶ: ಶನಿವಾರ (ಮಾರ್ಚ್ 16) ಎಲೆಕ್ಷನ್ ಕಮಿಷನ್ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಈ ಹಿನ್ನೆಲೆ ಜಿಲ್ಲಾ ಚುನಾವಣಾಧಿಕಾರಿ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ತುಷಾರ್ ಗಿರಿನಾಥ್ ಅವರು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ಸೂಚನೆ ನೀಡಿದ್ದಾರೆ, ಕಚೇರಿ, ಸರ್ಕಾರಿ ಜಾಗ ಸೇರಿ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಸೂಚನೆ ನೀಡಿದ್ದಾರೆ.
ಯಾವುದೇ ಫ್ಲೆಕ್ಸ್, ಪೋಸ್ಟರ್, ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ , ಎಲ್ಲಾ ಬ್ಯಾನರ್, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಸೂಚಿಸಿದ್ದಾರೆ.
2 ಹಂತದಲ್ಲಿ ಮತದಾನ: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಆಗಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ..
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications