ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರ ರಾಹುಲ್ ಗಾಂಧಿಯಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 26: ನಾಳೆ ಅಂದರೆ (ಏಪ್ರಿಲ್ 27, ಶುಕ್ರವಾರ) ಕಾಂಗ್ರೆಸ್ ಪಕ್ಷದ ಬಹುನಿರೀಕ್ಷಿತ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಕಡಲ ತಡಿಯ ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಹಾಲ್ ನಲ್ಲಿ ಈ ಸಂಬಂಧ ಸಮಾರಂಭ ನಿಗದಿಯಾಗಿದ್ದು, ಸಾವಿರಾರು ಜನರ ಸಮ್ಮುಖದಲ್ಲಿ ಪ್ರಾಣಾಳಿಕೆ ಬಿಡುಗಡೆಯಾಗಲಿದೆ.

ಕಾಂಗ್ರೆಸ್ ನಿಂದ 35 ಪ್ರತ್ಯೇಕ ಪ್ರಣಾಳಿಕೆ ಏಕೆ? ಇಲ್ಲಿದೆ ಉತ್ತರಕಾಂಗ್ರೆಸ್ ನಿಂದ 35 ಪ್ರತ್ಯೇಕ ಪ್ರಣಾಳಿಕೆ ಏಕೆ? ಇಲ್ಲಿದೆ ಉತ್ತರ

'ಅಭಿವೃದ್ಧಿಗಾಗಿ ಕಾಂಗ್ರೆಸ್' ಹೆಸರಿನಲ್ಲಿ ಪ್ರಣಾಳಿಕೆ ರೂಪಿಸಲಾಗಿದ್ದು ಬೆಳಿಗ್ಗೆ 9.45ಕ್ಕೆ ಪ್ರಣಾಳಿಕೆ ಬಿಡುಗಡೆಯಾಗಲಿದೆ.

2013ರ ಪ್ರಣಾಳಿಕೆಯಲ್ಲಿ ನಾವು 165 ಭರವಸೆಗಳನ್ನು ನೀಡಿದ್ದೆವು ಇದರಲ್ಲಿ ಹೆಚ್ಚಿನ ಭರವಸೆಗಳನ್ನೆಲ್ಲಾ ಈಡೇರಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾ ಓಡಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಯಾವೆಲ್ಲಾ ಅಂಶಗಳು ಇವೆ ಎಂಬ ಬಗ್ಗೆ ಕುತೂಹಲ ಮೂಡಿದೆ.

English summary
Karnataka assembly elections 2018: Congress President Rahul Gandhi will be launching party manifesto 'Congress For Progress' in Mangaluru, on Friday 27th April, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X