ಚುನಾವಣೆ ಎಫೆಕ್ಟ್: ಖಾಸಗಿ ಬಸ್ ದರದಲ್ಲಿ ಭಾರೀ ಏರಿಕೆ; ಪ್ರಯಾಣಿಕರಿಂದ ಹಿಡಿಶಾಪ
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡೇ ದಿನಗಳು ಬಾಕಿ ಉಳಿದಿದ್ದು, ಮೇ 10ರಂದು ರಾಜ್ಯದ 224 ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ. ಶಾಂತಿಯುತವಾಗಿ ಚುನಾವಣೆ ಪ್ರಕ್ರಿಯೆ ಮುಗಿಸಲು ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇನ್ನು ವಿಧಾನಸಭೆ ಚುನಾವಣೆ ಮತದಾನಕ್ಕಾಗಿ ಜನರು ಬೆಂಗಳೂರಿನಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಮತ್ತು ತವರು ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ. ಇದೇ ವೇಳೆ ಖಾಸಗಿ ಬಸ್ಗಳ ಟಿಕೆಟ್ ದರ ಹೆಚ್ಚಳವಾಗಿದೆ. ಇತರ ಜಿಲ್ಲೆಗಳಿಂದ ರಾಜಧಾನಿ ಬೆಂಗಳೂರಿಗೆ ಉದ್ಯೋಗ ನಿಮಿತ್ತ ಬಂದವರ ಸಂಖ್ಯೆ ದೊಡ್ಡದಾಗಿದೆ.

ಚುನಾವಣೆ ಹಿನ್ನೆಲೆ ಮೇ 10ರಂದು ತಮ್ಮ ಅಮೂಲ್ಯ ಮತ ಚಲಾಯಿಸಲು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು, ಟಿಕೆಟ್ ದರವನ್ನು ಹೆಚ್ಚಳ ಮಾಡಿದ್ದಾರೆ. ಇದು ಪ್ರಯಾಣಿಕರ ಆಕ್ರೋಶದ ಕಟ್ಟೆಯೊಡೆಯಲು ಕಾರಣವಾಗಿದೆ. ಯಾವ ಜಿಲ್ಲೆಗೆ ಎಷ್ಟು ದರ ಹೆಚ್ಚಳ ಮಾಡಲಾಗಿದೆ ಎನ್ನುವುದರ ಮಾಹಿತಿ ಇಲ್ಲಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್ ದರ ಈ ಮೊದಲು 700 ರೂ.ನಿಂದ 800 ರೂ. ಇತ್ತು. ಇದೀಗ 1600ರಿಂದ 1800 ರೂ.ಗೆ ಏರಿದೆ. ಅದೇ ರೀತಿ ಬೆಂಗಳೂರಿನಿಂದ ಮಂಗಳೂರಿಗೆ 950 ರೂ. ಇದ್ದ ಟಿಕೆಟ್ ದರ ಇದೀಗ 2000 ರೂ.ನಿಂದ 2200ರೂ. ಆಗಿದೆ.
ಇನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ 800 ರೂ.ನಿಂದ 900 ರೂ. ಇದ್ದ ದರ ಇದೀಗ 2000 ರೂ.ನಿಂದ 2200 ರೂ. ಆಗಿದೆ. ಉಡುಪಿಗೆ 900 ರೂ.ನಿಂದ 2200 ರೂ.ಗೆ ಏರಿಕೆಯಾಗಿದೆ.

ಬೆಳಗಾವಿಗೆ 1100 ರೂ.ನಿಂದ 2800 ರೂ.ಗೆ ಏರಿಕೆಯಾಗಿದ್ದರೆ, ಹಾಸನಕ್ಕೆ 650ರಿಂದ 2200 ರೂ.ಗೆ ಏರಿಕೆಯಾಗಿದೆ. ಚಿಕ್ಕಮಗಳೂರಿಗೆ 700 ರೂ. ಇದ್ದ ಟಿಕೆಟ್ ದರ 1500 ರೂ.ಗೆ ಏರಿಕೆಯಾಗಿದೆ.
ಕಲಬುರಗಿಗೆ 1400 ರೂ. ಇದ್ದ ಟಿಕೆಟ್ ದರ 2500 ರೂ.ಗೆ ಏರಿಕೆ ಕಂಡಿದೆ. ಬಾಗಲಕೋಟೆ 1400ರಿಂದ 2300 ರೂ., ಯಾದಗಿರಿ 1400 ರೂ.ನಿಂದ 1999 ರೂ., ಅಥಣಿಗೆ 1400 ರೂ.ನಿಂದ 2200 ರೂ.ಗೆ ಏರಿಕೆಯಾಗಿದೆ. ಕೊಡಗಿಗೆ 700 ರೂ.ನಿಂದ 1400 ರೂ., ಬಳ್ಳಾರಿಗೆ 900ರಿಂದ 2500 ರೂ.ಗೆ ಏರಿಸಲಾಗಿದೆ.
ಟಿಕೆಟ್ ದರ ಹೆಚ್ಚಳಕ್ಕೆ ಪ್ರಯಾಣಿಕರಿಂದ ಹಿಡಿಶಾಪ
ಖಾಸಗಿ ಬಸ್ಗಳ ಟಿಕೆಟ್ ದರ ಹೆಚ್ಚಳವಾಗಿರುವ ಹಿನ್ನೆಲೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊನ್ನೆಯಷ್ಟೇ 900 ಕೊಟ್ಟು ಬಂದಿದ್ದೆವು. ಇದೀಗ 1500ರಿಂದ 2000 ರೂ.ಗೆ ಟಿಕೆಟ್ ದರ ಏರಿಕೆ ಮಾಡಿದ್ದಾರೆ. ನಾವು ಊರಿಗೆ ಹೇಗೆ ಹೋಗುವುದು? ಮತ ಹಾಕುವುದು ಹೇಗೆ?, ಕೆಎಸ್ಆರ್ಟಿಸಿ ಬಸ್ ಬೇರೆ ಇಲ್ಲ ಎನ್ನುತ್ತಿದ್ದಾರೆ.
ಈ ಟಿಕೆಟ್ ದರ ನೋಡಿ ಬುಕ್ ಮಾಡಬೇಕಾ? ಬೇಡವಾ? ಅಂತಾ ಚಿಂತೆ ಮಾಡುತ್ತಿದ್ದೇವೆ. ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳದ ವಿರುದ್ಧ ಆರ್ಟಿಒ ಅಧಿಕಾರಿಗಳು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಬೆಂಗಳೂರಿನಿಂದ ದೂರದೂರಿಗೆ ಪ್ರಯಾಣಿಸುವ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications