CV Chandrasekhara: ಕೊಪ್ಪಳ ಜೆಡಿಎಸ್ ಗೆಲುವಿಗೆ ದೀಡ್ ನಮಸ್ಕಾರ ಹಾಕಿದ ಮಂಗಳಮುಖಿಯರು
ಕೊಪ್ಪಳ ಏಪ್ರಿಲ್ 28: ಕೊಪ್ಪಳದಲ್ಲಿರುವ ಮಂಗಳಮುಖಿಯರು ಜೆಡಿಎಸ್ ಅಭ್ಯರ್ಥಿ ಸಿವಿ ಚಂದ್ರಶೇಖರ ಗೆಲುವಿಗಾಗಿ ದೀಡ್ ನಮಸ್ಕಾರ ಹಾಕಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಮಂಗಳಮುಖಿಯರು ಅಂಬೇಡ್ಕರ್ ಭವನದಿಂದ ಗವಿಮಠದವರೆಗೂ ಇಂದು ದೀಡ್ ನಮಸ್ಕಾರ್ ಹಾಕಿದರು.
ಕೊಪ್ಪಳದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ಬಿಜೆಪಿ ಅಭ್ಯರ್ಥಿ ಮಂಜುಳ ಅಮರೇಶ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸಿವಿ ಚಂದ್ರಶೇಖ ಸ್ಪರ್ಧೆಗಿಳಿಯಲಿದ್ದಾರೆ.

2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ್ ಗೆಲುವು ಸಾಧಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಅಮರೇಶ್ ಸಂಗಣ್ಣ ಕರಡಿ 26351 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಕಳೆದ ವರ್ಷ ಜೆಡಿಎಸ್ ಸೈಯದ್ ಅವರನ್ನು ಕಣಕ್ಕೆ ಇಳಿಸಿತ್ತು. ಆದರೆ ಸೈಯದ್ ಜಯ ಸಾಧಿಸಿರಲಿಲ್ಲ. ಕಡಿಮೆ ಮತಗಳಿಂದ ಮೂರನೇ ಸ್ತಾನವನ್ನು ಸೈಯದ್ ಪಡೆದಿದ್ದರು. ಹೀಗಾಗಿ ಸದ್ಯ ಸಿವಿ ಚಂದ್ರಶೇಖರ ಅವರಿಗೆ ಜೆಡಿಎಸ್ ಈ ಬಾರಿ ಟಿಕೆಟ್ ನೀಡಿದೆ.
ಇದರ ನಡುವೆ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವಿಗೆ ಮಂಗಳಮುಖಿಯರು ದೀಡ್ ನಮಸ್ಕಾರ ಹಾಕಿರುವುದು ಭಾರೀ ಸುದ್ದಿಯಾಗಿದೆ. ಇದರಿಂದ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಹೇಳಲಾಗುತ್ತಿದೆ.
ಮಂಗಳಮುಖಿಯರ ಆಶೀರ್ವಾದಕ್ಕೆ ಎಷ್ಟು ಮಹತ್ವವಿದೆ?
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದರೆ ಮುಂಗಳಮುಖಿ ಮನೆಗೆ ಬಂದ್ರೆ ಬರಿಗೈರಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಜೊತೆಗೆ ಪ್ರತಿಯೊಂದು ಶುಭಕಾರ್ಯಗಳಲ್ಲಿ ಹಾಗೂ ಮಂಗಳಕಾರ್ಯಗಳಲ್ಲಿ ಅವರ ಅಸ್ತಿತ್ವ ಖಂಡಿತವಾಗಿ ಇದ್ದೇ ಇರುತ್ತೆ ಎಂದರೆ ತಪ್ಪಾಗಲ್ಲ.
ಗರುಡ ಪುರಾಣ ಗ್ರಂಥಗಳಿಂದ ಹಿಡಿದು ಇಂದಿನವರೆಗೂ ಕೂಡ ಪ್ರತಿಯೊಂದು ವಿಚಾರಗಳಲ್ಲಿ ಕಿನ್ನರರು ಅಥವಾ ಮಂಗಳಮುಖಿಯರ ಬಗ್ಗೆ ಉಲ್ಲೇಖವಿದೆ. ಹೀಗಾಗಿ ಅರ್ಧನಾರೀಶ್ವರನ ಸ್ವರೂಪವಾಗಿರುವ ಮಂಗಳಮುಖಿಯರು ಎಲ್ಲಾದರೂ ಶುಭ ಕೆಲಸಕ್ಕೆ ಹೋದಾಗ ಅವರು ಆಶೀರ್ವಾದ ಮಾಡಿದರೆ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆ ಇದೆ. ಹೀಗಿರುವಾಗ ಮಂಗಳಮುಖಿಯರೇ ಖುದ್ದು ದೀಡ್ ನಮಸ್ಕಾರ ಹಾಕಿ ಕೊಪ್ಪಳದಲ್ಲಿರುವ ಮಂಗಳಮುಖಿಯರು ಜೆಡಿಎಸ್ ಅಭ್ಯರ್ಥಿ ಸಿವಿ ಚಂದ್ರಶೇಖರ ಗೆಲುವಿಗಾಗಿ ಆಶೀರ್ವದಿಸುತ್ತಿದ್ದಾರೆ ಎಂದರೆ ಅದು ಸಾಮಾನ್ಯವಾದ ಮಾತಲ್ಲ. ಹೀಗಾಗಿ ಕೊಪ್ಪಳದಲ್ಲಿ ಸಿವಿ ಚಂದ್ರಶೇಖರ್ ಅವರ ಗೆಲುವು ಖಚಿತ ಎಂದು ಹೇಳಲಾಗುತ್ತಿದೆ.
ಒಟ್ಟಿನಲ್ಲಿ ಕೊಪ್ಪಳದ ಚುನಾವಣಾ ಕಣ ರಂಗೇರುತ್ತಿದ್ದು ಈ ಬಾರಿ ಕಾಂಗ್ರೆಸ್ ಕೋಟೆ ಒಡೆದು ತೆನೆ ಹೊತ್ತ ಮಹಿಳೆ ಗಟ್ಟಿಯಾಗಿ ನಿಲ್ಲುತ್ತಾಳಾ ಕಾದು ನೋಡಬೇಕಿದೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಈಗಾಗಲೇ ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮುಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆದಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವೂ ಮುಗಿದಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications