Karnataka Election on May 10: ಚುನಾವಣೆ ಸಿದ್ಧತಾ ಅಧಿಕಾರಿಗಳಿಗೆ ಮಳೆ ಸವಾಲು
ಬೆಂಗಳೂರು, ಮೇ 06: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಮೂರೇ ದಿನ ಬಾಕಿ ಇದೆ. ಮೇ 10ರಂದು ಬುಧವಾರ ನಡೆಯಲಿರುವ ಮತದಾನಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿರುವ ರಾಜ್ಯ ಚುನಾವಣೆ ಆಯೋಗಕ್ಕೆ ಇದೀಗ ಮಳೆ ಸಮಸ್ಯೆ ತಂದೊಡ್ಡುವ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಬಳಿಕ ಎಚ್ಚೆತ್ತುಕೊಂಡಿರುವ ಚುನಾವಣಾಧಿಕಾರಿಗಳು ವ್ಯಾಪಕ ಮಳೆಯಿಂದ ರಕ್ಷಿಸಿಕೊಳ್ಳಲು ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ರಾಜ್ಯದ ಎಲ್ಲ ಭಾಗದ ವಿವಿಧ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಧಾರಕಾರ ಮಳೆ ಆಗುತ್ತಿದೆ. ಇದು ಮುಂದಿನ ಐದಾರು ದಿನ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಖಚಿತ ಪಡಿಸಿದೆ. ಈ ಮಳೆ ನಡುವೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳವ ಸವಾಲು ಚುನಾವಣಾಧಿಕಾರಿಗಳ ಹೆಗಲೇರಿದೆ. ಈ ಕುರಿತು ವಿಜಯ ಕರ್ನಾಟಕ ವರದಿ ಮಾಡಿದೆ.

ಮತದಾನ ದಿನ ಮತಗಟ್ಟೆಗಳಿಗೆ ಚುನಾವಣೆ ಅಧಿಕಾರಿಗಳು-ಸಿಬ್ಬಂದಿ ಕಳುಹಿಸಬೇಕು. ಅಲ್ಲದೇ ವಿವಿ ಪ್ಯಾಟ್, ಇವಿಎಂ ಯಂತ್ರಗಳು ಸೇರಿದಂತೆ ಅಗತ್ಯ ಸಲಕರಣೆಗಳನ್ನು ಮಳೆಗೆ ಒದ್ದೆಯಾಗದಂತೆ ಸುರಕ್ಷಿತವಾಗಿ ಆಯಾಯ ಮತಗಟ್ಟೆಗಳಿಗೆ ತಲುಪಿಸಬೇಕು. ಮತಗಟ್ಟೆ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಸೇರಿದಂತೆ ಚುನಾವಣೆ ಪ್ರಕ್ರಿಯೆಗಳಿಗೆ ಚುನಾವಣಾ ಆಯೋಗ ತಯಾರಿಸಿ, ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ. ಈ ಮೊದಲು ನಮಗೆ ಮಳೆ ಕುರಿತು ಗಮನ ಹರಿಸಿರಲಿಲ್ಲ ಎಂದು ಆಯೋಗ ಅಧಿಕಾರಿಗಳು ತಿಳಿಸಿದರು.
ಮಳೆ ಭೀತ ಮಧ್ಯೆ ಅಗತ್ಯ ಸಿದ್ಧತೆಗೆ ಸಿದ್ಧವಾದ ಆಯೋಗ
ಇನ್ನೂ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, 'ಮೋಚಾ' ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು (ಮೇ 12) ದಿನಗಳವರೆಗೆ ಒಳಡನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ತಿಳಿಸಿದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ ಮಾಡಿದೆ. ಚುನಾವಣಾ ಸಲಕರಣೆಗಳಾದ ಇವಿಎಂಗಳ ಹಂಚಿಕೆ, ಚುನಾವಣಾ ಸಿಬ್ಬಂದಿ ಮತಗಟ್ಟೆಗಳಿಗೆ ಸಾಗಿಸುವಾಗ ಮಳೆಯಿಂದ ಸಮಸ್ಯೆ ಎದುರಾಗುವ ಸಂಭವವಿದೆ ಎಂದು ಅವರು ಹೇಳಿದರು.

ಚುನಾವಣೆ ಸಿದ್ಧತೆಯಲ್ಲಿ ನಮಗೆ ಮಳೆ ಮುನ್ಸೂಚನೆ ಬಗ್ಗೆ, ಅದರ ಸಾಧ್ಯಾಸಾಧ್ಯತೆಗಳ ಬಗ್ಗೆ ಯೋಚನೆ ಮಾಡಿರಲಿಲ್ಲ. ಸಾಮಾನ್ಯವಾಗಿ ಬೇಸಿಗೆ ಅವಧಿ ಇದಾಗಿದ್ದರಿಂದ ಮಳೆಗಾಲದಲ್ಲಿ ಮಾಡಿಕೊಳ್ಳುವಂತಹ ಅಗತ್ಯ ಸಿದ್ಧತೆ ಮಾಡಿಕೊಂಡಿರಲಿಲ್ಲ. ಇವಿಎಂ ಸೇರಿದಂತೆ ಹಲವು ಉಪಕರಣಗಳ ಸಾಗಾಟಕ್ಕೆ ಸಮಸ್ಯೆ ಎದುರಾಗಹುದು. ಅದಕ್ಕೂ ಸಹ ಈಗ ಚಿಂತನೆ ಆರಂಭಿಸಿದ್ದು, ಮಳೆ, ಶೀತಗಾಳಿಗೆ ತಾಗದಂತೆ ಮತ್ತು ಮಳೆಯಿಂದ ಯಂತ್ರೋಪಕರಣಗಳಿಗೆ ಯಾವ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಿದ್ದೇವೆ. ಪ್ಲಾಸ್ಟಿಕ್ ಕವರ್ಗಳಿಂದ ಮುಚ್ಚಿ ಯಂತ್ರಗಳನ್ನು ಮತಗಟ್ಟೆಗಳಿಗೆ ಸಾಗಿಸಲಿದ್ದೇವೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ವಿವರಿಸಿದರು.
ರಾಜ್ಯ ಹವಾಮಾನ ಇಲಾಖೆ ಭಾನವಾರ ಬಿಡುಗಡೆ ಮಾಡಿದ ಮಳೆ ಮುನ್ಸೂಚನಾ ವರದಿಯಲ್ಲಿ ಮುಂದಿನ ಐದು ಎಲ್ಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಮೇ 11 ಮತ್ತು 12ರಂದು ಅಧಿಕ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ವಿಜ್ಞಾನಿ ಮತ್ತು ಹವಾಮಾನ ತಜ್ಞ ಡಾ.ಪ್ರಸಾದ್ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications