ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್ ಚಿತ್ತ; ಹಿರಿಯ ನಾಯಕರಿಂದ ಸಭೆ
ಬೆಂಗಳೂರು, ಮೇ 15: ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರದ ಗದ್ದುಗೆ ಏರಲು ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್ ಗಂಭೀರ ಚಿಂತನೆ ನಡೆಸುತ್ತಿದೆ.
ಬೆಂಗಳೂರಿನಲ್ಲಿ ಈ ಸಂಬಂಧ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಇದೆಲ್ಲಾ ಆರಂಭಿಕ ಟ್ರೆಂಡ್. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ರಚಿಸಲಿದೆ. ಜೆಡಿಎಸ್ ಜೊತೆಗಿನ ಮೈತ್ರಿಯ ಆಯ್ಕೆಯನ್ನು ಮುಕ್ತವಾಗಿಟ್ಟಿದ್ದೇವೆ," ಎಂದು ಹೇಳಿದ್ದಾರೆ.
LIVE: ಕರ್ನಾಟಕ ಫಲಿತಾಂಶ: ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಹಿನ್ನಡೆ
ಇದಾದ ಬೆನ್ನಿಗೆ ಹೇಳಿಕೆ ನೀಡಿರುವ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸ್ಪಷ್ಟ ಚಿತ್ರಣ 11-11.30ರ ಹೊತ್ತಿಗೆ ತಿಳಿದು ಬರಲಿದೆ. ಜೆಡಿಎಸ್ ಜೊತೆಗಿನ ಮೈತ್ರಿ ಸಂಬಂಧ ಗುಲಾಮ್ ನಬಿ ಅಝಾದ್ ಮತ್ತು ಅಶೋಕ್ ಗೆಹ್ಲೋಟ್ ಜೊತೆ ಚರ್ಚೆ ನಡೆಸಲು ತೆರಳುತ್ತಿದ್ದೇನೆ," ಎಂದಿದ್ದಾರೆ.
ಒಂದೊಮ್ಮೆ ಬಿಜೆಪಿಗೆ ಕೆಲವು ಸ್ಥಾನಗಳು ಕಡಿಮೆಯಾದರೆ ಹೇಗಾದರೂ ಮಾಡಿ ಜೆಡಿಎಸ್ ಜೊತೆಗೆ ಸೇರಿ ಅಧಿಕಾರದ ಗದ್ದುಗೆ ಏರಬೇಕು ಎಂದು ಕಾಂಗ್ರೆಸ್ ಹೊರಟಂತೆ ಕಾಣಿಸುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 114 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 61, ಜೆಡಿಎಸ್ ಸ್ಥಾನಗಳಲ್ಲಿ ಮುಂದಿದೆ. ಹೀಗಾಗಿ ಕಾಂಗ್ರೆಸಿಗೆ ಮೈತ್ರಿಯ ಸಾಧ್ಯತೆಗಳೂ ಕ್ಷೀಣಿಸುತ್ತಿವೆ.