ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಲಿತಾಂಶ ನೋಡಿದ ಉಪೇಂದ್ರ ಶುಭಕೋರಿದ್ದು ಯಾರಿಗೆ ಗೊತ್ತಾ.?

By Bharath Kumar
|
Google Oneindia Kannada News

ಕರ್ನಾಟಕ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗುರುತಿಸಿಕೊಳ್ಳುತ್ತಿದೆ. ಬಹುಶಃ ಭಾರತೀಯ ಜನತಾ ಪಾರ್ಟಿ ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡಬಹುದು ಎಂಬ ಲಕ್ಕಾಚಾರ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಮತ್ತೊಂದೆಡೆ ಅತಂತ್ರವಾಗಬಹುದು ಎಂಬ ಆಸೆ ಜೀವಂತವಾಗಿದೆ.

ಈ ನಡುವೆ ಕೆಪಿಜೆಪಿ ಪಕ್ಷದಿಂದ ಹೊರಬಂದು ಕರ್ನಾಟಕ ವಿಧಾನಸಭೆ ಚುನಾವಣೆಯಿಂದ ಹಿಂದೆ ಸರಿದಿದ್ದ ನಟ ಉಪೇಂದ್ರ ಟ್ವೀಟ್ ಮೂಲಕ ಬಿಜೆಪಿಗೆ ಶುಭಕೋರಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

Karnataka Election Results 2018: Upendra Wish to BJP

ಫಲಿತಾಂಶದ ಬಗ್ಗೆ ಹೆಚ್ಚೇನೂ ಮಾತನಾಡದ ಮತ್ತು ವಿಶ್ಲೇಷಣೆ ಮಾಡದ ಉಪೇಂದ್ರ ಬರಿ ಶುಭಾಶಯ ತಿಳಿಸಿರುವುದು ವಿಶೇಷವಾಗಿದೆ.

ಮೊದಲಿನಿಂದಲೂ ಪ್ರದಾನಿ ನರೇಂದ್ರ ಮೋದಿ ಅವರ ಆದರ್ಶಗಳಿಗೆ ಮತ್ತು ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿರುವ ಉಪೇಂದ್ರ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿರುವ ವಿಜಯಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

LIVE: ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಗೆಲುವುLIVE: ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಗೆಲುವು

ಎಲ್ಲ ಅಂದುಕೊಂಡತೆ ಆಗಿದ್ದರೇ, ನಟ ಉಪೇಂದ್ರ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕಿತ್ತು. ಆದ್ರೆ, ಪಕ್ಷದ ಆಂತರಿಕ ಸಮಸ್ಯೆಯಿಂದ ಪಕ್ಷದಿಂದ ಹೊರಬಂದರು. ಇದೀಗ, ಉತ್ತಮ ಪ್ರಜಾ ಪಾರ್ಟಿ ಎಂಬ ಹೆಸರಿನಲ್ಲಿ ಪಕ್ಷ ನೋಂದಾಣೆ ಮಾಡಿದ್ದು, ಮುಂದಿನ ಚುವಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ.

English summary
Karnataka Election Results 2018: Kannada actor and politician Upendra has taken his twitter account to Wish Bharatiya janata party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X