ಐಟಿ ದಾಳಿಯಾಗುತ್ತದೆ ಎಂದು ಮೊದಲೇ ಹೇಳುವುದು ಕಾಂಗ್ರೆಸ್ ತಂತ್ರಗಾರಿಕೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ,ಮೇ 08: ಐಟಿಯವರು ಎಲ್ಲಾ ಜಿಲ್ಲೆಗಳಲ್ಲಿ ಇದ್ದಾರೆ, ಅವರಿಗೆ ಎಲ್ಲಿ ತಪ್ಪು ನಡೆಯುತ್ತೆ ಅನ್ನೋ ಮಾಹಿತಿ ಅವರಿಗೆ ಇರುತ್ತದೆ. ಕಾಂಗ್ರೆಸ್ ನವರು ತಪ್ಪು ಮಾಡಿದ್ದಾರೆ ನಾವು ಏನು ಮಾಡೋಕಾಗುತ್ತೆ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಐಟಿ ದಾಳಿಯಾಗುತ್ತದೆ ಎಂದು ಎಂ ಬಿ ಪಾಟೀಲ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲೇ ಹೇಳಿ ಬಿಡೋದು ಕಾಂಗ್ರೆಸ್ ನವರ ತಂತ್ರಗಾರಿಕೆ ಎಂದು ಹೇಳಿದ ಅವರು. ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ. ವೀರಶೈವ ಸಮಾಜ ದೊಡ್ಡದಿದ್ದು ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರನ್ನು ಗೌರವಿಸುವುದಾಗಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸಂಸ್ಥೆಯ ಹೆಸರು ಬಳಸುವುದು ಸರಿಯಲ್ಲ ಎಂದು ಹೇಳಿದರು.

ನಾಲ್ಕು ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತದೆಯೇ? ಲಿಂಗಾಯತ ಸಮಾಜ ಸಮುದ್ರ ಇದ್ದಂತೆ. ಲಿಂಗಾಯತ ವೇದಿಕೆ ಚುನಾವಣೆ ಸಂದರ್ಭಗಳಲ್ಲಿ ಹುಟ್ಟಿಕೊಂಡ ಸಂಘಟನೆ ಎಂದರು.
ಬಿಜೆಪಿ ವಿರುದ್ಧ ಯಾವುದೇ ಪ್ರಕರಣ ಇಲ್ಲ, ಸಾಕ್ಷಿಯೂ ಇಲ್ಲ. ಭ್ರಷ್ಟಾಚಾರ ಆರೋಪದ ದಾಖಲೆ ಕೊಡಿ ಎಂದು ಚುನಾವಣಾ ಆಯೋಗವನ್ನು ಕೇಳಿದ್ದು ಅವರಿಗೆ ಕೊಡಲು ಆಗಿಲ್ಲ. ಇಷ್ಟೆಲ್ಲಾ ಮಾತನಾಡುವ ಎಲ್ಲಾ ಕಾಂಗ್ರೆಸ್ನವರ ಮೇಲೆ ಭ್ರಷ್ಟಾಚಾರ ಪ್ರಕರಣಗಳಿದ್ದು, ನ್ಯಾಯಾಲಯಗಳಿಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರಾಷ್ಟ್ರೀಯ ನಾಯಕರು ಎಲ್ಲಾ ಚುನಾವಣೆಗಳಲ್ಲಿ ರಾಜ್ಯಕ್ಕೆ ಬಂದಿದ್ದಾರೆ. ರಾಷ್ಟ್ರೀಯ ನಾಯಕರದ್ದು ಹಾಗೂ ಕರ್ನಾಟಕದ ಜನರದ್ದು ಭಾವನಾತ್ಮಕ ಸಂಬಂಧ ಇದರಿಂದ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಬೂಸ್ಟ್ ಕೊಡಲಿದೆ, ಇಂದೊಂದು ಬೂಸ್ಟರ್ ಡೋಸ್ ಎಂದರು. ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ. ಎಲ್ಲ ನಾಯಕರು ಬಹಿರಂಗ ಸಭೆ- ರೋಡ್ ಷೋ ನಡೆಸುತ್ತಿದ್ದಾರೆ. 224 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ ಎಂದರು












Click it and Unblock the Notifications