ಅತಂತ್ರ ಪ್ರಶ್ನೆಯೇ ಇಲ್ಲ,ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತೆ ಬರೆದು ಇಟ್ಟುಕೊಳ್ಳಿ : ಬಿ ಸಿ ಪಾಟೀಲ್
ಹಾವೇರಿ, ಮೇ 12: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತ ಎಕ್ಸಿಟ್ ಪೋಲ್ ಸಮೀಕ್ಷೆ ಸುಳ್ಳು, ಈ ಬಾರೀ ಅತಂತ್ರ ಫಲಿತಾಂಶ ಪ್ರಕಟವಾಗಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ ಬರೆದು ಇಟ್ಟುಕೊಳ್ಳಿ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಹಾವೇರಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು. ಕಾಂಗ್ರೆಸ್ನವರು ರೇಸಾರ್ಟ್ ರಾಜಕೀಯದ ಬಗ್ಗೆ ಮಾತನಾಡಿರುವದು ಹಾಸ್ಯಾಸ್ಪದ. ಕಾಂಗ್ರೆಸ್ ನಲ್ಲಿ ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೋಲಿಸಿದರು ಎನ್ನುವಂತೆ ಅವರು ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ. ಈ ಬಾರೀ ರಾಜ್ಯದ ಜನ ನಮ್ಮ ಕೈ ಬಿಡಲ್ಲ, ನಮಗೆ ಬಹುಮತ ಬರಲಿದೆ. ನನಗೆ ವಿಶ್ವಾಸವಿದೆ ನನ್ನ ಅಭಿವೃದ್ದಿ ಕಾರ್ಯಗಳು ನನ್ನ ಕೈ ಹಿಡಿಯುತ್ತವೆ, ಜನರು ನನಗೆ ಆಶೀರ್ವಾದ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಸಾರ್ಟ್ ರಾಜಕೀಯದ ಕುರಿತು ಮಾತನಾಡಿದ ಅವರು, ದಾಂಡೇಲಿಯಲ್ಲಿ ಮಾತ್ರ ರೇಸಾರ್ಟ್ ಇದೆಯಾ. ಈ ಬಾರಿನಲ್ಲಿ ಬಸ್ನಲ್ಲಿ ಹೋಗುತ್ತಾರೆ ಎಂಬ ಕೀಳು ಆರೋಪ ಯಾಕೆ ಹೋಗುವದಾದರೇ ಕಾರ್ನಲ್ಲಿ ವಿಮಾನದಲ್ಲಿ ಹೋಗುತ್ತಾರೆ. ಅಷ್ಟಕ್ಕೂ ಅಂತಹ ಪ್ರಶ್ನೆಗೆ ಉದ್ಭವವಾಗುವುದಿಲ್ಲ ಎಂದು ಹೇಳಿದರು.
ಕುಮಾರಸ್ವಾಮಿ ಮನೆಗೆ ಹೋಗುವ ಪ್ರಸಂಗ ಬರುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾದು ನೋಡಿ ಗೊತ್ತಾಗುತ್ತೆ, ಈ ಬಾರಿ ಜಯ ನನ್ನದೇ ಎಂದು ನಮಗೆ ನಂಬಿಕೆ ಇದೆ. ಎಕ್ಸಿಟ್ ಪೋಲ್ ನಿರ್ಧಾರ ಮಾಡುವವರು ಎಕ್ಸಿಟ್ ಪೋಲ್ ಮಾಡಿದವರಲ್ಲ. ಅದನ್ನು ಮಾಡುವವರು ಮತದಾರರು ಅಂತಿಮ ನಿರ್ಧಾರ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
ಮತದಾರರ ಆದೇಶ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ ಅದು ಇದೇ 13 ರಂದು ಬಹಿರಂಗವಾಗಲಿದ್ದು ಖಂಡಿತ ಬಿಜೆಪಿ ಈ ಬಾರಿ ಸರ್ಕಾರ ರಚಿಸಲಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಅತಂತ್ರ ಎಂಬ ಪ್ರಶ್ನೆಯೇ ರಾಜ್ಯದಲ್ಲಿ ಉದ್ಭವಿಸಲ್ಲ.ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಗುಜರಾತ್ನಲ್ಲಿ ಈ ಹಿಂದೆ ಇದೇ ರೀತಿ ಎಕ್ಸಿಟ್ ಪೋಲ್ ಆಗಿದ್ದವು. ಆದರೆ ಅಲ್ಲಿ ಮತ ಏಣಿಕೆ ನಂತರ ಎಲ್ಲ ಅದಲುಬದಲಾಗಿತ್ತು ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
ಜನರ ನಾಡಿಬಡಿತ ಬಿಜೆಪಿ ಕಡೆ ಇದೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ನವರು ಈಗ ಉತ್ಸಾಹದಲ್ಲಿದ್ದಾರೆ ಆದರೆ 13 ರ ನಂತರ ನಾವು ಉತ್ಸಾಹದಲ್ಲಿರುತ್ತೇವೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು. ಹಿರೇಕೆರೂರು ಕ್ಷೇತ್ರದ ಗ್ರಾಮಗಳಲ್ಲಿ ಪಟ್ಟಣಗಳಲ್ಲಿ ಹೆಚ್ಚು ಲೀಡ್ ಆಗಿದ್ದು ಈ ಬಾರಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸವನ್ನ ಬಿ.ಸಿ.ಪಾಟೀಲ್ ವ್ಯಕ್ತಪಡಿಸಿದರು.
ಹಿರೇಕೆರೂರು ವಿಧಾನಸಭಾ ಕ್ಷೇತ್ರ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಇಲ್ಲಿ ಪ್ರತಿಶತ 85 ರಷ್ಟು ಮತದಾನವಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications