ಅತಂತ್ರ ಪ್ರಶ್ನೆಯೇ ಇಲ್ಲ,ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತೆ ಬರೆದು ಇಟ್ಟುಕೊಳ್ಳಿ : ಬಿ ಸಿ ಪಾಟೀಲ್
ಹಾವೇರಿ, ಮೇ 12: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತ ಎಕ್ಸಿಟ್ ಪೋಲ್ ಸಮೀಕ್ಷೆ ಸುಳ್ಳು, ಈ ಬಾರೀ ಅತಂತ್ರ ಫಲಿತಾಂಶ ಪ್ರಕಟವಾಗಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ ಬರೆದು ಇಟ್ಟುಕೊಳ್ಳಿ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಹಾವೇರಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು. ಕಾಂಗ್ರೆಸ್ನವರು ರೇಸಾರ್ಟ್ ರಾಜಕೀಯದ ಬಗ್ಗೆ ಮಾತನಾಡಿರುವದು ಹಾಸ್ಯಾಸ್ಪದ. ಕಾಂಗ್ರೆಸ್ ನಲ್ಲಿ ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೋಲಿಸಿದರು ಎನ್ನುವಂತೆ ಅವರು ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ. ಈ ಬಾರೀ ರಾಜ್ಯದ ಜನ ನಮ್ಮ ಕೈ ಬಿಡಲ್ಲ, ನಮಗೆ ಬಹುಮತ ಬರಲಿದೆ. ನನಗೆ ವಿಶ್ವಾಸವಿದೆ ನನ್ನ ಅಭಿವೃದ್ದಿ ಕಾರ್ಯಗಳು ನನ್ನ ಕೈ ಹಿಡಿಯುತ್ತವೆ, ಜನರು ನನಗೆ ಆಶೀರ್ವಾದ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಸಾರ್ಟ್ ರಾಜಕೀಯದ ಕುರಿತು ಮಾತನಾಡಿದ ಅವರು, ದಾಂಡೇಲಿಯಲ್ಲಿ ಮಾತ್ರ ರೇಸಾರ್ಟ್ ಇದೆಯಾ. ಈ ಬಾರಿನಲ್ಲಿ ಬಸ್ನಲ್ಲಿ ಹೋಗುತ್ತಾರೆ ಎಂಬ ಕೀಳು ಆರೋಪ ಯಾಕೆ ಹೋಗುವದಾದರೇ ಕಾರ್ನಲ್ಲಿ ವಿಮಾನದಲ್ಲಿ ಹೋಗುತ್ತಾರೆ. ಅಷ್ಟಕ್ಕೂ ಅಂತಹ ಪ್ರಶ್ನೆಗೆ ಉದ್ಭವವಾಗುವುದಿಲ್ಲ ಎಂದು ಹೇಳಿದರು.
ಕುಮಾರಸ್ವಾಮಿ ಮನೆಗೆ ಹೋಗುವ ಪ್ರಸಂಗ ಬರುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾದು ನೋಡಿ ಗೊತ್ತಾಗುತ್ತೆ, ಈ ಬಾರಿ ಜಯ ನನ್ನದೇ ಎಂದು ನಮಗೆ ನಂಬಿಕೆ ಇದೆ. ಎಕ್ಸಿಟ್ ಪೋಲ್ ನಿರ್ಧಾರ ಮಾಡುವವರು ಎಕ್ಸಿಟ್ ಪೋಲ್ ಮಾಡಿದವರಲ್ಲ. ಅದನ್ನು ಮಾಡುವವರು ಮತದಾರರು ಅಂತಿಮ ನಿರ್ಧಾರ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
ಮತದಾರರ ಆದೇಶ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ ಅದು ಇದೇ 13 ರಂದು ಬಹಿರಂಗವಾಗಲಿದ್ದು ಖಂಡಿತ ಬಿಜೆಪಿ ಈ ಬಾರಿ ಸರ್ಕಾರ ರಚಿಸಲಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಅತಂತ್ರ ಎಂಬ ಪ್ರಶ್ನೆಯೇ ರಾಜ್ಯದಲ್ಲಿ ಉದ್ಭವಿಸಲ್ಲ.ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಗುಜರಾತ್ನಲ್ಲಿ ಈ ಹಿಂದೆ ಇದೇ ರೀತಿ ಎಕ್ಸಿಟ್ ಪೋಲ್ ಆಗಿದ್ದವು. ಆದರೆ ಅಲ್ಲಿ ಮತ ಏಣಿಕೆ ನಂತರ ಎಲ್ಲ ಅದಲುಬದಲಾಗಿತ್ತು ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
ಜನರ ನಾಡಿಬಡಿತ ಬಿಜೆಪಿ ಕಡೆ ಇದೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ನವರು ಈಗ ಉತ್ಸಾಹದಲ್ಲಿದ್ದಾರೆ ಆದರೆ 13 ರ ನಂತರ ನಾವು ಉತ್ಸಾಹದಲ್ಲಿರುತ್ತೇವೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು. ಹಿರೇಕೆರೂರು ಕ್ಷೇತ್ರದ ಗ್ರಾಮಗಳಲ್ಲಿ ಪಟ್ಟಣಗಳಲ್ಲಿ ಹೆಚ್ಚು ಲೀಡ್ ಆಗಿದ್ದು ಈ ಬಾರಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸವನ್ನ ಬಿ.ಸಿ.ಪಾಟೀಲ್ ವ್ಯಕ್ತಪಡಿಸಿದರು.
ಹಿರೇಕೆರೂರು ವಿಧಾನಸಭಾ ಕ್ಷೇತ್ರ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಇಲ್ಲಿ ಪ್ರತಿಶತ 85 ರಷ್ಟು ಮತದಾನವಾಗಿದೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications