ಕರ್ನಾಟಕ ಚುನಾವಣೆ; ಸಿ-ವಿಜಿಲ್ ಮೂಲಕ ದೂರು ನೀಡುವುದು ಹೇಗೆ?
ಬೆಂಗಳೂರು, ಏಪ್ರಿಲ್ 09; ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10ರ ಬುಧವಾರ ಮತದಾನ ನಡೆಯಲಿದೆ. ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಚುನಾವಣಾ ಮಾದರಿ ನೀತಿ ಸಂಹಿತೆ ರಾಜ್ಯದಲ್ಲಿ ಜಾರಿಗೆ ಬಂದಿದೆ.
ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ, ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗ ಸಿ-ವಿಜಿಲ್(cVIGIL) ಎಂಬ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಜನರು ಈ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಪಾರದರ್ಶಕವಾಗಿ ಚುನಾವಣೆ ನಡೆಸಲು ಆಯೋಗದ ಜೊತೆ ಸಹಕಾರ ನೀಡಬಹುದಾಗಿದೆ.

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ, ಹೆಂಡ ಹಾಗೂ ಇತರೆ ಆಸೆ, ಆಮಿಷ ತೋರಿಸುವುದು ಸಹಜ. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಸಹ ಲಭ್ಯವಿದೆ. ಜನರು ಅಕ್ರಮಗಳ ಬಗ್ಗೆ ಮೊಬೈಲ್ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡಲಿದೆ.
ಯಾವ ಮಾದರಿಯ ದೂರುಗಳು; ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದು. ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್ ಅಂಟಿಸುವುದು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ ಸಂದೇಶಗಳು, ಮತಗಟ್ಟೆಯ 200 ಮೀ. ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಬನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಜನರು ದೂರು ನೀಡಬಹುದು.

ಗೂಗಲ್ ಪ್ಲೇ-ಸ್ಟೋರ್ನಲ್ಲಿ ಸಿ- ವಿಜಿಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಸರಳವಾಗಿ ದೂರು ನೀಡಬಹುದಾಗಿದೆ. ಅಕ್ರಮದ ಕುರಿತಾದ ಫೋಟೋ ಅಥವಾ ವಿಡಿಯೋಗಳನ್ನು ಅಪ್ಲೋಡ್ ಮಾಡಿ ದೂರು ನೀಡಬಹುದು. ತಮ್ಮ ಸ್ವವಿವರ ನೀಡಿಯಾದರೂ ಅಥವಾ ನೀಡದೆಯೂ ದೂರು ನೀಡಬಹುದು. ಒಟ್ಟು 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಆಯೋಗ ಹೇಳಿದೆ.
ಈ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿ ನಿಯೋಜಿಸಲಾಗಿದೆ. ಇವರು ಮತದಾನ ಮುಕ್ತಾಯವಾಗುವವರೆಗೂ 3 ಪಾಳಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ.
ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ 100 ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸುವರು. ಜನರು ಸಿವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಪ್ರಕರಣಗಳನ್ನು ದಾಖಲಿಸಬೇಕು ಎಂದು ಸೂಚನೆ ಕೊಡಲಾಗಿದೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications