ಕಾಂಗ್ರೆಸ್: ಸಿಎಂ ಸ್ಥಾನಕ್ಕೆ ಇಬ್ಬರು ಮಾತ್ರವೇ ಆಕಾಂಕ್ಷಿಗಳಲ್ಲ, ನಾವೂ ಇದ್ದೇವೆ: ಹೊಸ ಬಾಂಬ್ ಸಿಡಿಸಿದ ಎಂ.ಬಿ.ಪಾಟೀಲ್
ನವದೆಹಲಿ, ಏಪ್ರಿಲ್ 07: ಕರ್ನಾಟಕ ರಾಜ್ಯ ವಿಧಾನಸಭೆಗೆ ದಿನಾಂಕ ಮಾತ್ರವೇ ಘೋಷಣೆಯಾಗಿದೆ, ಮತದಾನ ಪ್ರಕ್ರಿಯೆ ಬಾಕಿ ಇದೆ. ಹೀಗಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆ ಕಾವಿನ ಜೊತೆಗೆ ಸಿಎಂ ಸ್ಥಾನನ ಯಾರಿಗೆ? ಎಂಬ ವಿಚಾರವು ಸಾಕಷ್ಟು ಚರ್ಚೆ ಬರುತ್ತಿದೆ. ಈ ಮಧ್ಯೆ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸದರಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತ್ರವೇ ಮುಖ್ಯಮಂತ್ರಿಗಳ ಸ್ಥಾನ ಆಕಾಂಕ್ಷಿಗಳಲ್ಲ. ಅವರೊಂದಿಗೆ ನಾವು ಇದ್ದೇವೆ ಎಂದು ಎಂ.ಬಿ.ಪಾಟೀಲ್ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.

ಈ ಸಂಬಂಧ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಗುರುವಾರ ಮಾತನಾಡಿದ ಎಂ.ಬಿ.ಪಾಟೀಲ್, ಪಕ್ಷದ ಈ ಬಾರಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಷ್ಟೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲ. ನಾನು ಸೇರಿದಂತೆ ಇನ್ನು ಹಲವು ನಾಯಕರು ಈ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಪಟ್ಟಿಯಲ್ಲಿದ್ದೇವೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ನ ಸಿಎಂ ಸ್ಥಾನದ ಆಕಾಂಕ್ಷಿಗಳು ಇವರು
ಕಾಂಗ್ರೆಸ್ನಿಂದ ಮುಂಖ್ಯಮಂತ್ರಿಗಳ ಪಟ್ಟಿಯಲ್ಲಿ ನಾನು ಒಳಗೊಂಡಂತೆ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣಬೈರೇಗೌಡ ಅವರು ಸಹ ಇದ್ದಾರೆ ಎಂದು ಅವರು ಆಕಾಂಕ್ಷಿಗಳ ಹೆಸರು ಬಹಿರಂಗಪಡಿಸಿದರು.
ಇನ್ನೂ ಕರ್ನಾಟಕದ ಮಟ್ಟಿಗೆ ನೋಡುವುದಾದರೆ, ವಿಪಕ್ಷ ನಾಯಕರಾದ ನಮ್ಮ ಸಿದ್ದರಾಮಯ್ಯನವರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಉನ್ನತ ನಾಯಕರು. ಅವರ ನಂತರ ಸಿಎಂ ಪಟ್ಟಿಯಲ್ಲಿ ನಾವಿದ್ದೇವೆ ಎಂದು ಹೇಳಿದರು.

ಈಗಾಗಲೇ ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಹಾಗೂ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಉಭಯ ನಾಯಕರು ತಮ್ ಮಹಾತ್ವಾಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಈದುವರೆಗೆ ಕಾಂಗ್ರೆಸ್ ಹೈಕಮಾಂಡ್ ಇಂತವರೇ ಕರ್ನಾಟಕದ ಸಿಎಂ ಅಭ್ಯರ್ಥಿ ಎಂದು ತಿಳಿಸಿಲ್ಲ. ಇದೆಲ್ಲದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ನಿರ್ಧಾರ ಕೈಗೊಳ್ಳುತ್ತಾರೆ. ಅದೇ ಅಂತಿಮ, ಅದೇ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ. ಮುಂದೆಯು ಅದೇ ನಡೆಯುತ್ತದೆ ಎಂದು ತಿಳಿಸಿದರು.
ಎದುರಾಗಿರುವ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯನವರು ಹಾಗೂ ಡಿಕೆ ಶಿವಕುಮಾರ್ ಅವರು ಸೇರಿದಂತೆ ಎಲ್ಲ ನಾಯಕರು ಸಾಮೂಹಿಕವಾಗೇ ಎದುರಿಸುತ್ತೇವೆ. ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬಂದ ನಂತರ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಬಳಿಕ ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಅವರು ವಿವರಿಸಿದರು.
ಕಾಂಗ್ರೆಸ್ ಬೆಂಬಲಕ್ಕೆ ಲಿಂಗಾಯತರು; ಭವಿಷ್ಯ
ಲಿಂಗಾಯತರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ ಎಂದು ಎಂ.ಬಿ ಪಾಟೀಲ್ ಅವರು ಭವಿಷ್ಯ ನುಡಿದರು. ಜೊತೆಗೆ ಅದಕ್ಕೆ ಕಾರಣ ತಿಳಿಸಿದರು. ಏನೆಂದರೆ, ಆಡಳಿತಾರೂಢ ಬಿಜೆಪಿ ಸರ್ಕಾರ ಜನರಿಗ ಮೋಸ ಮಾಡಿದೆ. ಕೇವಲ ಶೇಕಡಾ ಎರಡರಷ್ಟು ಮಾತ್ರವೇ ಮೀಸಲಾತಿ ಹೆಚ್ಚಳ ಮಾಡಿದೆ.
ಇನ್ನೂ ಮುಖ್ಯವಾಗಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ಆ ಸ್ಥಾನದಿಂದ ಕೆಳಗಿಸಲಾಯಿತು. ಇದು ಸಹ ಲಿಂಗಾಯತ ಸಮುದಾಯಕ್ಕೆ ನೋವುಂಟು ಮಾಡಿದೆ. ಇದೆಲ್ಲ ಕಾರಣದಿಂದ ಲಿಂಗಾಯತರು ಇ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಲಿದ್ದಾರೆ. ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮೋಸವನ್ನು ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬಯಲಿಗೆ ಎಳೆಯಲಿದೆ ಎಂದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
North Karnataka: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಎಂ.ಬಿ ಪಾಟೀಲ್ - ಅರವಿಂದ ಬೆಲ್ಲದ ಟ್ವೀಟ್ ಚರ್ಚೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications