ರಮೇಶ್ ಜಾರಕಿಹೊಳಿಯಿಂದ ಬಿಜೆಪಿಗೆ ಡ್ಯಾಮೇಜ್: ಕೇಸರಿ ನಾಯಕರಿಗೆ ತಲೆನೋವಾದ ವಿವಾದಗಳ ಸರದಾರ- ಇನ್ಸೈಡ್ ಸ್ಟೋರಿ
ಬೆಳಗಾವಿ, ಮಾರ್ಚ್ 27: ಕರ್ನಾಟಕ ವಿಧಾನಸಭೆ ಚುಣಾವಣೆಗೆ ( Karnataka Assembly Elections 2023 ) ಕೆಲ ದಿನಗಳು ಬಾಕಿ ಇವೆ. ಆಡಳಿತಾರೂಢ ಬಿಜೆಪಿ ( BJP ), ವಿರೋಧ ಪಕ್ಷ ಕಾಂಗ್ರೆಸ್ ( Congress ) ಹಾಗೂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ( JDS ) ಪಕ್ಷಗಳು ಪೈಪೋಟಿ ನಡೆಸುತ್ತಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರ ಆಮ್ ಆದ್ಮಿ ಪಕ್ಷವು ( AAP ) ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.
ರಾಜ್ಯ ರಾಜಕಾರಣದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಾಯಕರಲ್ಲಿ ಗೋಕಾಕ ಶಾಸಕ ಹಾಗೂ ಮಾಜಿ ರಮೇಶ್ ಜಾರಕಿಹೊಳಿ ಪ್ರಮುಖರು. ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಕಾರಣರಾದವರು. ಆಗಿನಿಂದಲೂ ರಮೇಶ್ ಜಾರಕಿಹೊಳಿ ರಾಜ್ಯ ರಾಜಕಾರಣದ ವಿವಾದಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಸೆಕ್ಸ್ ಸಿಡಿ ಪ್ರಕರಣದಲ್ಲಿ ಜಾರಕಿಹೊಳಿ
ಕುಮಾರಸ್ವಾಮಿ ಸರ್ಕಾರ ಪತನಗೊಂಡ ನಂತರ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಯಡಿಯೂರಪ್ಪ ಸರ್ಕಾರದಲ್ಲಿ ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಆ ಸಮಯದಲ್ಲಿ ಯುವತಿಯೊಬ್ಬಳಿಗೆ ನೌಕರಿ ಕೊಡಿಸುವುದಾಗಿ ಅಮಿಷ ಒಡ್ಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದವು. ಇದಕ್ಕೆ ಸಂಬಂಧಿಸಿದ ವಿಡಿಯೊ, ಆಡಿಯೊಗಳು ಟಿವಿ ಮಾಧ್ಯಮಗಳಲ್ಲಿ ಬಿಡುಗಡೆಗೊಂಡವು. ಈ ಪ್ರಕರಣವು ದೇಶದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಯಿತು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಲಾಯಿತು.
ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಂಘರ್ಷ
ಸಿಡಿ ಹಗರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕೈವಾಡವಿದೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸುತ್ತಲೇ ಬಂದಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ಜಾರಕಿಹೊಳಿ ನಿಂದಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹತ್ತು ಕೋಟಿ ಹಣ ಹಂಚಿ ಹೆಬ್ಬಾಳ್ಕರ್ ಅವರನ್ನು ಸೋಲಿಸುವುದಾಗಿಯೂ ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ಜಾರಕಿಹೊಳಿ ವಿರುದ್ಧ ಪ್ರಕರಣವೂ ದಾಖಲಾಗಿದೆ.

ಬಿಜೆಪಿ ರಾಜ್ಯಸಭೆ ಸದಸ್ಯರಿಗೆ ಬುದ್ದಿ ಇಲ್ಲವೆಂದ ಜಾರಕಿಹೊಳಿ
ಬಿಜೆಪಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿಗೆ ಬುದ್ದಿ ಇಲ್ಲವೆಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ಅವರು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ ಎಂದು ಕಡಾಡಿ ಅವರು ಕೇಂದ್ರ ನಾಯಕತ್ವ ಮುಂದೆ ಹೇಳಿಕೊಂಡಿದ್ದಾರೆ ಎಂಬ ವಿಚಾರವೂ ಈಗ ಗುಟ್ಟಾಗಿ ಉಳಿದಿಲ್ಲ. ಬೆಳಗಾವಿ ಜಿಲ್ಲೆಯವರೇ ಆದ ಕಡಾಡಿ ಅವರು ಆರ್ಎಸ್ಎಸ್ ಹಾಗೂ ಮೂಲ ಬಿಜೆಪಿ ನಾಯಕರಿಗೆ ಹತ್ತಿರವಾದವರು.
ಲಕ್ಷ್ಮಣ್ ಸವದಿ ವಿರುದ್ಧ ತೊಡೆತಟ್ಟಿದ ಜಾರಕಿಹೊಳಿ
2019ರಲ್ಲಿ ಅಥಣಿ ಶಾಸಕರಾಗಿದ್ದ ಮಹೇಶ್ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಜೊತೆ ಬಿಜೆಪಿಗೆ ಸೇರ್ಪಡೆಗೊಂಡರು. ಈ ಚುನಾವಣೆಯಲ್ಲಿ ಕುಮಟಳ್ಳಿ ಬಿಜೆಪಿ ಟಿಕೆಟ್ ನೀಡದೇ ಹೋದರೆ, ನಾನು ಗೋಕಾಕದಿಂದ ಸ್ಪರ್ಧಿಸಲ್ಲವೆಂದು ರಮೇಶ್ ಹಠ ಹಿಡಿದಿದ್ದಾರೆ. ಈಗ ಎಂಎಲ್ಸಿ ಆಗಿರುವ ಲಕ್ಷ್ಮಣ್ ಸವದಿ ಅವರ ವಿರುದ್ಧ ಸಾರ್ವಜನಿಕವಾಗಿಯೇ ತೊಡೆ ತಟ್ಟಿದ್ದಾರೆ.

ಅಥಣಿಯಿಂದ ಸ್ಪರ್ಧಿಸಲು ಲಕ್ಷ್ಮಣ್ ಸವದಿ ಸಿದ್ದತೆ ಮಾಡಿಕೊಂಡಿದ್ದಾರೆ. ಇದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಲಕ್ಷ್ಮಣ್ ಸವದಿ ಅವರು ಸಹ ಲಿಂಗಾಯತ ಸಮುದಾಯದ ಪ್ರಬಲ ನಾಯಕರು. ಹೀಗಾಗಿ, ಅವರನ್ನು ಬಿಜೆಪಿ ನಿರ್ಲಕ್ಷ್ಯ ಮಾಡುವುದಿಲ್ಲವೆಂಬುದು ಶತಸಿದ್ದ. ಒಟ್ಟಾರೆಯಾಗಿ, ರಮೇಶ್ ಜಾರಕಿಹೊಳಿ ಬಿಜೆಪಿಗೆ ಡ್ಯಾಮೇಜ್ ಮಾಡಲಿದ್ದಾರೆ ಎಂಬುದು ತಜ್ಞರ ಅಭಿಪ್ರಾಯ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications