ಕರ್ನಾಟಕ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಎಐಎಡಿಎಂಕೆ ಸ್ಪರ್ಧೆ
ಬೆಂಗಳೂರು, ಏಪ್ರಿಲ್ 18: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮಿಳಿಗರ ಪ್ರಾಬಲ್ಯವಿರುವ ಎರಡು ಕ್ಷೇತ್ರಗಳಲ್ಲಿ ತನ್ನ ಆಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಡಿಎಂಕೆ(All India Anna Dravida Munnetra Kazhagam) ನಿರ್ಧರಿಸಿದೆ.
20 ಕ್ಷೇತ್ರಗಳಲ್ಲಿ 'ಎರಡೆಲೆ' ಸ್ಪರ್ಧೆ: ತಮಿಳು ಮತಗಳ ಮೇಲೆ ಕಣ್ಣು
ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳಿನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಕೆಜಿಎಫ್(ಮೀಸಲು) ಮತ್ತು ಬೆಂಗಳೂರಿನ ಗಾಂಧಿನಗರ ಕ್ಷೇತ್ರಗಳಲ್ಲಿ ಎಐಎಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಇಂದು(ಏ.18) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2013 ರಲ್ಲಿ 5 ಕ್ಷೇತ್ರಗಳಲ್ಲಿ ಎಐಎಡಿಎಂಕೆ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಐದು ಕ್ಷೇತ್ರಗಳಲ್ಲಿ ಈ ಪಕ್ಷದ ಅಭ್ಯರ್ಥಿಗಳು ಪಡೆದ ಒಟ್ಟು ಮತಗಳು ಕೇವಲ 10,208 ಮಾತ್ರ!
ಈ ಬಾರಿಯ ಚುನಾವಣೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ತಿಗಳನ್ನು ಕಣಕ್ಕಿಳಿಸಲು ಮೊದಲು ಎಐಎಡಿಎಂಕೆ ನಿರ್ಧರಿಸಿತ್ತಾದರೂ ನಂತರ ಕೇವಲ ಎರಡೇ ಕ್ಷೇತ್ರಗಳಲ್ಲಿ ನಿಲ್ಲಿಸುವ ತೀರ್ಮಾನ ಕೈಗೊಂಡಿದೆ.