ಕರ್ನಾಟಕ ಚುನಾವಣೆ: ಬಿಜೆಪಿ ಆಹ್ವಾನಕ್ಕೆ ಒಲ್ಲೆ ಎಂದ ಕುಂಬ್ಳೆ-ದ್ರಾವಿಡ್
Recommended Video

ಬೆಂಗಳೂರು, ಏಪ್ರಿಲ್ 12: ಕರ್ನಾಟಕದಲ್ಲಿ ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ನಿರ್ಧರಿಸಿರುವ ಬಿಜೆಪಿ, ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆ ಅವರನ್ನು ಬಿಜೆಪಿಗೆ ಸೆಳೆಯಲು ಸಾಕಷ್ಟು ಪ್ರಯತ್ನ ಪಟ್ಟು ವಿಫಲವಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.
ಯುವ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಬಿಜೆಪಿ ಈ ಇಬ್ಬರು ಮಿಸ್ಟರ್ ಕ್ಲೀನ್ ಖ್ಯಾತಿಯ ಟೀಂ ಇಂಡಿಯಾದ ಮಾಜಿ ನಾಯಕರುಗಳನ್ನು ಬಿಜೆಪಿಗೆ ಸೇರುವಂತೆ ಆಹ್ವಾನಿಸಿತ್ತು. ಈ ಕುರಿತು ಕನ್ನಡದ ಈ ಇಬ್ಬರು ಕ್ರಿಕೆಟ್ ದಿಗ್ಗಜರೊಂದಿಗೆ ಹಲವು ಸುತ್ತಿನ ಮಾತುಕತೆಯೂ ನಡೆದಿತ್ತು. ಆದರೆ ರಾಜಕೀಯದಿಂದ ದೂರವೇ ಇರಲು ಬಯಸಿರುವ ಗೋಡೆ ಖ್ಯಾತಿಯ ದ್ರಾವಿಡ್ ಮತ್ತು ಜಂಬೋ ಕುಂಬ್ಳೆ ಬಿಜೆಪಿ ಆಹ್ವಾನಕ್ಕೆ 'ಒಲ್ಲೆ' ಎಂದಿದ್ದಾರೆ.
ಕುಂಬ್ಳೆ ಅವರ ಆಪ್ತ ಮೂಲಗಳ ಪ್ರಕಾರ ಬಿಜೆಪಿ ಈ ಇಬ್ಬರನ್ನೂ ಪಕ್ಷಕ್ಕೆ ಸೇರುವಂತೆ ಸಾಕಷ್ಟು ಸಾರಿ ಮಾತುಕತೆ ನಡೆಸಿದೆ. ಆದರೆ ಇಬ್ಬರೂ ಬಿಜೆಪಿ ಆಮಂತ್ರಣವನ್ನು ವಿನಮೃವಾಗಿಯೇ ತಿರಸ್ಕರಿಸಿದ್ದಾರೆ.

ಗೂಗ್ಲಿ ಮಾಂತ್ರಿಕ, ವಿಶ್ವ ವಿಖ್ಯಾತ ಸ್ಪಿನ್ನರ್ ಅನಿಲ್ ಕುಂಬ್ಳೆ ಮತ್ತು ಗೋಡೆ ಖ್ಯಾತಿಯ ಅಪೂರ್ವ ಬ್ಯಾಟ್ಸ್ಮನ್ ರಾಹುಲ್ ದ್ರಾವಿಡ್ ಅವರಿಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಗ್ರಾಮೀಣ ಭಾಗಗಳಲ್ಲೂ ಇವರನ್ನು ಯೂತ್ ಐಕಾನ್ ಎಂಬಂತೆ ನೋಡುವ ಸಾಕಷ್ಟು ಜನರಿದ್ದಾರೆ. ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿಯ ತೂಕವನ್ನು ಹೆಚ್ಚಿಸಿಕೊಳ್ಳುವ ಯೋಚನೆ ವೈಫಲ್ಯ ಕಂಡಂತಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications