ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲ್ಲುವುದು ನಿಶ್ಚಿತ: ಯಡಿಯೂರಪ್ಪ
ಶಿವಮೊಗ್ಗ, ಮೇ 12: "ಕರ್ನಾಟಕದಲ್ಲಿ ಬಿಜೆಪಿ 150 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಯಡಿಯೂರಪ್ಪ, ಶಿಕಾರಿಪುರದಲ್ಲಿ ಮತದಾನ ಮಅಡಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಕರ್ನಾಟಕದ ಜನ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಜನರು ಸಿದ್ದರಾಮಯ್ಯ ಸರ್ಕಾರದಿಂದ ಬೇಸತ್ತುಹೋಗಿದ್ದಾರೆ. ಬಿಜೆಪಿಯನ್ನು 150 ಕ್ಷೇತ್ರಗಳಲ್ಲಿ ಗೆಲ್ಲಿಸಿ ತರಲಿದ್ದಾರೆ' ಎಂದು ಅವರು ಹೇಳಿದ್ದಾರೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
"ಮೇ 17 ರಂದು ನಾನು ಹೊಸ ಸರ್ಕಾರ ರಚಿಸುತ್ತೇನೆ ಎಂಬ ವಿಶ್ವಾಸವಿದೆ" ಎಂದು ಸಹ ಇದೇ ಸಂದರ್ಭದಲ್ಲಿ ಅವರು ಹೇಳಿದರು.

ಮತದಾನಕ್ಕೂ ಮುನ್ನ ಶಿಕಾರಿಪುರದ ದೇವಾಲಯವೊಂದಕ್ಕೆ ತೆರಳಿ ಅವರು ಪೂಜೆ ಸಲ್ಲಿಸದರು. ನಂತರ ಕುಟುಂಬ ಸಮೇತ ಹೋಗಿ ಮತದಾನ ಮಾಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು(ಮೇ.12) ಮತದಾನ ನಡೆಯುತ್ತಿದ್ದು, ಮತದಾನ 15 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications