Get Updates
Get notified of breaking news, exclusive insights, and must-see stories!

ಕರ್ನಾಟಕ ಚುನಾವಣೆ: 2000 ಮುಖಬೆಲೆಯ ನೋಟುಗಳ ಚಲಾವಣೆ ಹೆಚ್ಚಳ

ಬೆಂಗಳೂರು, ಏಪ್ರಿಲ್‌ 27: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬಂದಂತೆ ಸ್ಥಗಿತಗೊಂಡಿದ್ದ 2,000 ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯಲ್ಲಿ ಹೆಚ್ಚಳ ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ.

ಬ್ಯಾಂಕಿಂಗ್ ಮತ್ತು ವ್ಯಾಪಾರ ವಲಯದ ಮೂಲಗಳ ಪ್ರಕಾರ, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರು ಪ್ರದೇಶದಲ್ಲಿ ಮತ್ತು ಕರ್ನಾಟಕದಾದ್ಯಂತ 2,000 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳ ಚಲಾವಣೆ ಸ್ವಲ್ಪಮಟ್ಟಿಗೆ ಹೆಚ್ಚಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

Karnataka Elections: circulation Increase of 2000 denomination notes

ಮೈಸೂರಿನ ರಾಷ್ಟ್ರೀಕೃತ ಬ್ಯಾಂಕ್‌ನ ಶಾಖೆಯೊಂದರ ಮ್ಯಾನೇಜರ್ ತಮ್ಮ ಬಳಿ ನಿಖರವಾದ ಅಂಕಿ ಅಂಶಗಳಿಲ್ಲದಿದ್ದರೂ 2,000 ರೂಪಾಯಿ ನೋಟುಗಳ ಚಲಾವಣೆ ಶೇಕಡಾ 20 ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

"ನಾವು ವ್ಯಾಪಾರಿಗಳಿಂದ ಮತ್ತು ನಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಅಂಚೆ ಕಚೇರಿಗಳಿಂದ ಠೇವಣಿಗಳನ್ನು ಸ್ವೀಕರಿಸುತ್ತೇವೆ. ಜನವರಿ ಅಥವಾ ಫೆಬ್ರವರಿಯಲ್ಲಿ ಹೆಚ್ಚು ಚಲಾವಣೆಯಲ್ಲಿರದ ನಿರ್ದಿಷ್ಟ ನೋಟುಗಳ ಸಂಖ್ಯೆಯು ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಸ್ವಲ್ಪಮಟ್ಟಿಗೆ ಹೆಚ್ಚಿರುವುದನ್ನು ನಾವು ಗಮನಿಸಿದ್ದೇವೆ" ಎಂದು ಅವರು ಹೇಳಿದ್ದಾರೆ.

Karnataka Elections: circulation Increase of 2000 denomination notes

ಮಂಡ್ಯ ಜಿಲ್ಲೆಯ ಮತ್ತೋರ್ವ ಬ್ಯಾಂಕರ್, ಠೇವಣಿ ಮೂಲಕ ನಿರ್ದಿಷ್ಟ ನೋಟುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು. ನಾವು ನೋಟುಗಳನ್ನು ಠೇವಣಿಯಾಗಿ ಸ್ವೀಕರಿಸಿದ್ದೇವೆ ಮತ್ತು ಹಿಂಪಡೆಯುವಿಕೆಯ ಮೇಲೆ ನಾವು ಅವುಗಳನ್ನು ನಮ್ಮ ಗ್ರಾಹಕರಿಗೆ ವಿತರಿಸಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿದ್ದಾರೆ.

ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಔಷಾದ್ ಮೆಡಿಕಲ್ಸ್‌ನ ರಾಜೇಶ್ ಚಾವ್ಲಾ ಮಾತನಾಡಿ, ಮಾರ್ಚ್‌ನಲ್ಲಿ ಯಾವುದೇ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೋಡಿರಲಿಲ್ಲ. ಆದರೆ ಏಪ್ರಿಲ್‌ನಲ್ಲಿ ಇದುವರೆಗೆ ಮೂರು ಅಥವಾ ನಾಲ್ಕು ನೋಟುಗಳು ಬಂದಿವೆ ಎಂದು ಹೇಳಿದರು. ಮೈಸೂರಿನಲ್ಲಿ ಹೆಸರು ಹೇಳಲಿಚ್ಛಿಸದ ಆಡಳಿತಾರೂಢ ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಮಾತನಾಡಿ, ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರಿಂದ 2000 ರೂಪಾಯಿ ಮುಖಬೆಲೆಯ ನೋಟು ಬಿಡುಗಡೆ ಬಗ್ಗೆ ಚರ್ಚೆ ನಡೆಯುತ್ತಿರುವುದು ನಿಜ ಎಂದು ಹೇಳಿದ್ದಾರೆ.

"ನಿರ್ದಿಷ್ಟ ಮುಖಬೆಲೆಯ ನೋಟುಗಳನ್ನು ಚುನಾವಣೆಯ ಸಮಯದಲ್ಲಿ ಚಲಾವಣೆ ಮಾಡಲು ಎಲ್ಲಾ ರಾಜಕೀಯ ಪಕ್ಷಗಳ ರಾಜಕಾರಣಿಗಳು ಅಭಿಲಾಷೆ ಹೊಂದಿದ್ದಾರೆ ಎಂಬ ಮಾತು ಇದೆ. ಕನ್ನಡದಲ್ಲಿ 'ಒಂದು ಮೂಟೆ' ಎಂದರೆ 'ಒಂದು ಜೋಳಿಗೆ' ಎಂದರೆ ರಾಜಕೀಯ ಭಾಷೆಯಲ್ಲಿ 1 ಕೋಟಿ ರೂಪಾಯಿ ಎಂದು ಹೇಳುವುದನ್ನು ಕೇಳಿದ್ದೇವೆ. ನಾವು ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇವೆ. ಹೀಗಾಗಿ ಹಣಕಾಸಿನ ವ್ಯವಹಾರಗಳ ಬಗ್ಗೆ ನಮಗೆ ತಿಳಿದಿಲ್ಲ. ಆದರೆ, ಪಕ್ಷದ ವಲಯದಲ್ಲಿ ಇಂತಹ ವಹಿವಾಟಿನ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಪ್ರತಿಪಕ್ಷ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು, "ಇದು ಮಂಜುಗಡ್ಡೆಯ ತುದಿ ಮಾತ್ರ. ನಗದು ವಹಿವಾಟಿನ ಬಗ್ಗೆ ನಾವು ಹೇಳಲು ಏನೂ ಇಲ್ಲ. ಆದರೆ, ಮೇ 10 ರಂದು ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಹಣದ ಚಲಾವಣೆ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+